ಮನರಂಜನೆ

ಕನ್ನಡ ಆಯ್ತು, ತಮಿಳಿನಲ್ಲೂ ಆರ್ ಚಂದ್ರು ಚಿತ್ರ ನಿರ್ಮಾಣ

ಆರ್. ಚಂದ್ರು ತಮ್ಮ ಆರ್‍.ಸಿ. ಸ್ಟುಡಿಯೋಸ್‍ ಬ್ಯಾನರ್‍ನಡಿ ಐದು ಚಿತ್ರಗಳನ್ನು ನಿರ್ಮಿಸುತ್ತಿರುವುದಾಗಿ ಘೋಷಿಸಿದ್ದರು. ಈ ಪೈಕಿ ಮೊದಲ ಚಿತ್ರವಾದ ‘ಫಾದರ್‍’ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದೆ. ಮೈಸೂರಿನಲ್ಲಿ ‘ಡಾರ್ಲಿಂಗ್‍’ ಕೃಷ್ಣ ಮುಂತಾದವರು ಅಭಿನಯಿಸುತ್ತಿರುವ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಈ ಮಧ್ಯೆ, ಅವರು ತಮಿಳಿಗೆ ಹೊರಟು ನಿಂತಿದ್ದಾರೆ. ತಮಿಳಿನಲ್ಲಿ ಚಂದ್ರು ಒಂದು ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರವನ್ನು ದಯಾಳ್‍ ಪದ್ಮನಾಭನ್‍ ನಿರ್ದೇಶನ ಮಾಡುತ್ತಿದ್ದಾರೆ.

ದಯಾಳ್‍ಗೆ ತಮಿಳು ಚಿತ್ರರಂಗ ಹೊಸದೇನಲ್ಲ. ಈ ಹಿಂದೆ ತಮ್ಮದೇ ‘ಆ ಕರಾಳ ರಾತ್ರಿ’ ಚಿತ್ರವನ್ನು ತಮಿಳಿಗೆ ‘ಕೊಂಡ್ರಾಳ್‍ ಪಾವಂ’ ಎಂಬ ಹೆಸರಿನಲ್ಲಿ ರೀಮೇಕ್ ಮಾಡಿದ್ದರು. ನಂತರ ‘ಮಾರುತಿ ನಗರ್‍ ಪೊಲೀಸ್‍ ಸ್ಟೇಶನ್‍’ ಎಂಬ ಇನ್ನೊಂದು ಚಿತ್ರವನ್ನೂ ತಮಿಳಿನಲ್ಲಿ ನಿರ್ದೇಶಿಸಿದ್ದರು. ಈಗ ಮೂರನೆಯ ಚಿತ್ರವಾಗಿ, ಚಂದ್ರು ನಿರ್ಮಾಣದ ಚಿತ್ರವನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ ದಯಾಳ್‍. ಇನ್ನೂ ಹೆಸರಿಡದ ಈ ಚಿತ್ರವು ಆಗಸ್ಟ್ ಮಧ್ಯದಲ್ಲಿ ಪ್ರಾರಂಭವಾಲಿದೆ.

ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪ್ಯಾನ್‍ ಇಂಡಿಯಾದ ಚಿತ್ರವೆಂದರೆ, ಗ್ರಾಫಿಕ್ಸ್, ಫ್ಯಾಂಟಸಿ ಎಲ್ಲವೂ ಹೆಚ್ಚಿರುತ್ತದೆ. ಆದರೆ, ಇದು ಕಂಟೆಂಟ್ ಇರುವ ಕ್ರೈಂ ಥ್ರಿಲ್ಲರ್‍ ಚಿತ್ರವಂತೆ. ಚಿತ್ರದಲ್ಲಿ ಗುರು ಸೋಮಸುಂದರಂ ಮತ್ತು ನಿಹಾರಿಕಾ ಕೊನಿಡೆಲಾ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಅಚ್ಯುತ್‍ ಕುಮಾರ್‍, ಲಿಝಿ ಆ್ಯಂಟೋನಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಪ್ರೀ-ಪ್ರೊಡಕ್ಷನ್ ಕೆಲಸಗಳು ಒಂದು ಹಂತಕ್ಕೆ ಬಂದಿದ್ದು, ಚಿತ್ರೀಕರಣ ಮಾತ್ರ ಬಾಕಿ ಇದೆ.

ವಿಶೇಷವೆಂದರೆ, ಒಂದು ಕಾಲಕ್ಕೆ ದಯಾಳ್‍ ಚಿತ್ರಗಳಿಗೆ ಆರ್. ಚಂದ್ರು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಈಗ ದಯಾಳ್‍, ಅದೇ ಚಂದ್ರು ನಿರ್ಮಾಣದಲ್ಲಿ ಚಿತ್ರ ನಿರ್ಮಿಸುತ್ತಿರುವುದು ವಿಶೇಷ.

ಈ ಮಧ್ಯೆ, ಚಂದ್ರು ನಿರ್ಮಾಣದ ‘ಫಾದರ್‍’ ಚಿತ್ರಕ್ಕೂ ದಯಾಳ್‍ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಅವರು ‘ಗಾಳಿಪಟ’ ಮತ್ತು ‘ಸಂತು ಸ್ಟ್ರೇಟ್‍ ಫಾರ್ವರ್ಡ್’ ಚಿತ್ರಗಳ ಕಾರ್ಯಕಾರಿ ನಿರ್ಮಾಪಕರಾಗಿದ್ದವರು. ಈಗ ಮೂರನೆಯ ಬಾರಿಗೆ ದಯಾಳ್‍, ‘ಫಾದರ್‍’ ಚಿತ್ರವನ್ನು ಕಾರ್ಯಕಾರಿ ನಿರ್ಮಾಪಕರಾಗಿ ಮುನ್ನಡೆಸುತ್ತಿದ್ದಾರೆ.

ಭೂಮಿಕಾ

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

10 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

13 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

17 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

20 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

20 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

20 hours ago