ಮನರಂಜನೆ

‘ಫೈರ್ ಫ್ಲೈ’ಗೆ ಸಿಕ್ಕಳು ನಾಯಕಿ; ವಂಶಿಗೆ ಜೋಡಿಯಾದ ರಚನಾ ಇಂದರ್

ಶಿವರಾಜಕುಮಾರ್ ಪುತ್ರಿ ನಿವೇದಿತಾ ಮೊದಲ ಬಾರಿಗೆ ನಿರ್ಮಿಸುತ್ತಿರುವ ‘ಫೈರ್ ಫ್ಲೈ’ ಚಿತ್ರವು ದೀಪಾವಳಿಗೆ ಬಿಡುಗಡೆಯಾಗಲಿದೆ ಎಂದು ಈಗಾಗಲೇ ಘೋಷಣೆಯಾಗಿದೆ. ಈಗಾಗಲೇ ಚಿತ್ರತಂಡವು ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ, ಮೂಗು ಸುರೇಶ್‍ ಮುಂತಾದವರ ಪಾತ್ರಗಳನ್ನು ಪರಿಚಯಿಸಿದೆ. ಆದರೆ, ನಾಯಕಿ ಯಾರು ಎಂಬ ವಿಷಯವು ಇದುವರೆಗೂ ಗೌಪ್ಯವಾಗಿಯೇ ಇತ್ತು. ಈಗ ಈ ಚಿತ್ರದಲ್ಲಿ ನಾಯಕಿಯಾಗಿ ರಚನಾ ಇಂದರ್‍ ನಟಿಸಿದ್ದಾರೆ.

‘ಲವ್ ಮಾಕ್‌ಟೇಲ್‌’, ‘ಹರಿಕಥೆ ಅಲ್ಲ ಗಿರಿಕಥೆ’, ‘ತ್ರಿಬಲ್‌ ರೈಡಿಂಗ್’ ಸಿನಿಮಾಗಳಲ್ಲಿ ಬಬ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚನಾ ಇಂದರ್ ಈ ಚಿತ್ರದಲ್ಲಿ ವಂಶಿಗೆ ಜೋಡಿಯಾಗಿ ಅಭಿನಯಿಸಿದ್ದಾರೆ.‌ ನೇಹಾ ಎಂಬ ಪಾತ್ರದಲ್ಲಿ ರಚನಾ ಬಣ್ಣ ಹಚ್ಚಿದ್ದು, ತಮ್ಮ ಪಾತ್ರದ ಬಗ್ಗೆ ಬಹಳ ಖುಷಿಯಿಂದ ಮಾತನಾಡಿದ್ದಾರೆ.

‘ಸಿನಿಮಾದಲ್ಲಿ ನೇಹಾ ಎಂಬ ಪಾತ್ರ ಮಾಡಿದ್ದೇನೆ. ನೇಹಾ ಬದುಕನ್ನು ತುಂಬಾ ಇಷ್ಟಪಡುತ್ತಾಳೆ. ಎಂಜಾಯ್ ಮಾಡುತ್ತಾಳೆ. ಭವಿಷ್ಯದ ಬಗ್ಗೆ ಯೋಚನೆ ಮಾಡೋದಿಲ್ಲ. ಸಿನಿಮಾವನ್ನು ನಾನು ನೋಡಲು ಕಾತರಳಾಗಿದ್ದಾನೆ. ಚಿತ್ರದ ಒಂದಷ್ಟು ಕ್ಲಿಪ್ಸ್ ನೋಡಿದಾಗ ಮನರಂಜನೆ ನೀಡುವ ಸಿನಿಮಾ ಎನಿಸಿತು. ವಂಶಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ದೀಪಾವಳಿಗೆ ನಮ್ಮ ಚಿತ್ರ ತೆರೆಗೆ ಬರುತ್ತಿದೆ’ ಎಂದಿದ್ದಾರೆ.

‘ಫೈರ್ ಫ್ಲೈ’ ಚಿತ್ರವನ್ನು ವಂಶಿ ಮೊದಲ ಬಾರಿಗೆ ನಿರ್ದೇಶಿಸುತ್ತಿರುವುದಷ್ಟೇ ಅಲ್ಲ, ಕನ್ನಡ ಚಿತ್ರರಂಗಕ್ಕೆ ನಾಯಕನಾಗಿಯೂ ಪರಿಚಯವಾಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ಮತ್ತು ರಘು ನಿಡುವಳ್ಳಿ ಸಂಭಾಷಣೆ ಇದೆ.

‘ಫೈರ್ ಫ್ಲೈ’ ಚಿತ್ರವನ್ನು ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಮೂಲಕ ನಿವೇದಿತಾ ಶಿವರಾಜಕುಮಾರ್‍ ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

2 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

8 hours ago