ಮನರಂಜನೆ

ಕಲಾವಿದೆಯಾಗಿ ರಚಿತಾ ತನ್ನ ಕರ್ತವ್ಯ ಮಾಡಿಲ್ಲ: ಶ್ರೀನಗರ ಕಿಟ್ಟಿ ಬೇಸರ

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ನಟಿ ರಚಿತಾ ರಾಮ್‍ ವಿರುದ್ಧ ಚಿತ್ರತಂಡದವರು ಕರ್ನಾಟಕ ಚಲನಚಿತ್ರ ವಾಣಿಜ್ಯ ದೂರು ದಾಖಲಿಸಿದ್ದರು. ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಆ ಚಿತ್ರದ ನಿರ್ದೇಶಕರು, ನಿರ್ಮಾಪಕರು ಹಾಗೂ ಹೀರೋ ಇತ್ತೀಚೆಗೆ ಕೆಲವು ಸಂದರ್ಶನಗಳಲ್ಲಿ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಮತ್ತು ಅವರು ನೀಡಿದ ಹೇಳಿಕೆಗಳಿಂದ ನನಗೆ ತುಂಬ ನೋವಾಗಿದೆ ಎಂದು ರಚಿತಾ ರಾಮ್‍ ಸಹ ಹೇಳಿಕೊಂಡಿದ್ದರು.

ಈಗ ಈ ಪ್ರಕರಣದ ಬಗ್ಗೆ ಶ್ರೀನಗರ ಕಿಟ್ಟಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಒಂದು ಚಿತ್ರದ ಪ್ರಚಾರ ಮಾಡುವುದು ಚಿತ್ರದ ನಟ-ನಟಿಯರ ಜವಾಬ್ದಾರಿ ಮತ್ತು ಕರ್ತವ್ಯ. ರಚಿತಾ ಆ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ನಾವು ಕಲಾವಿದರು ಚಿತ್ರರಂಗದಿಂದ ಊಟ ಮಾಡುತ್ತಿದ್ದೇವೆ, ಅದರಿಂದ ಬದುಕಿದ್ದೇವೆ. ಸಿನಿಮಾದ ಪ್ರಚಾರ ಮಾಡೋದು, ನಮ್ಮ ಜವಾಬ್ದಾರಿ ಆಗಿರುತ್ತದೆ. ಆ ಜವಾಬ್ದಾರಿಯನ್ನು ರಚಿತಾ ಸರಿಯಾಗಿ ನಿರ್ವಹಿಸಿಲ್ಲ. ವಿಷಯದಲ್ಲಿ ಆಕೆಯ ಬಗ್ಗೆ ಅಸಮಾಧಾನವಿದೆ. ಇದರಲ್ಲಿ ಅವರ ಬೇಜವಾಬ್ದಾರಿತನ ಕಾಣುತ್ತಿದೆ. ದಯಮಾಡಿ ಮುಂದಿನ ಚಿತ್ರದಲ್ಲಿ ಕೆಲಸ ಮಾಡುವಾಗ, ಚಿತ್ರತಂಡದ ಜೊತೆಗೆ ನಿಂತು ಪ್ರಚಾರ ಮಾಡುವುದು ನಿಮ್ಮ ಕರ್ತವ್ಯ’ ಎಂದು ಹೇಳಿದ್ದಾರೆ.

‌ಅದ್ಯಾವುದು..? ರಚಿತಾ ರಾಮ್‌ ಮೇಲೆ ಫಿಲ್ಮ್‌ ಚೇಂಬರ್‌ನಲ್ಲಿ ಎರಡು ಪ್ರಕರಣ ದಾಖಲಾಗಿದೆ..

ಪ್ರಚಾರದ ವಿಷಯದಲ್ಲಿ ಆಕೆಯ ಟ್ರ್ಯಾಕ್‍ ರೆಕಾರ್ಡ್ ಚೆನ್ನಾಗಿಲ್ಲ ಎಂಬುದು ಮೊದಲೇ ಚರ್ಚೆಯಾಗಿತ್ತು ಎನ್ನುವ ಕಿಟ್ಟಿ, ‘ಇದಕ್ಕೂ ಮೊದಲು ಬೇರೆ ಚಿತ್ರಗಳ ಪ್ರಚಾರಕ್ಕೆ ರಚಿತಾ ಬರದಿರುವ ಬಗ್ಗೆ ಮಾತು ಕೇಳಿಬಂದಿತ್ತು. ಆಕೆಯ ಟ್ರ್ಯಾಕ್‍ ರೆಕಾರ್ಡ್ ಚೆನ್ನಾಗಿಲ್ಲ, ಯೋಚನೆ ಮಾಡಿ ಮುಂದುವರೆಯಿರಿ ಎಂದು ನಾನು ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಹೇಳಿದ್ದೆ. ಮೊದಲು ಅಗ್ರೀಮೆಂಟ್‍ ಮಾಡಿಕೊಳ್ಳಿ ಎಂದಿದ್ದೆ. ಅವರು ಪ್ರಯತ್ನಿಸಿದರೂ, ಕೊಟ್ಟಿರುವ ಅಗ್ರೀಮೆಂಟ್‍ಗೆ ಆಕೆ ಸೈನ್‍ ಮಾಡಿರಲಿಲ್ಲ. ಆಕೆಯ ಬಳಿ ಸಹಿ ಹಾಕಿಸಿಕೊಂಡಿದ್ದರೆ ಈ ಸಮಸ್ಯೆಗಳು ಇರುತ್ತಿರಲಿಲ್ಲ. ಇದರಲ್ಲಿ ಇವರದ್ದೂ ಬೇಜವಾಬ್ದಾರಿತನವಿದೆ’ ಎಂದಿದ್ದಾರೆ.

ಈ ತರಹದ ಬೆಳವಣಿಗೆ ಚಿತ್ರರಂಗಕ್ಕೆ ಪೂರಕವಲ್ಲ ಎಂದಿರುವ ಕಿಟ್ಟಿ, ‘ನಾನು ಸಾಕಷ್ಟು ನಟಿಯರ ಜೊತೆಗೆ ಕೆಲಸ ಮಾಡಿದ್ದೇನೆ. ಆದರೆ, ಯಾವತ್ತೂ ಹೀಗೆ ಆಗಿಲ್ಲ. ಪ್ರಚಾರಕ್ಕೆ ಬರಬೇಕು ಎಂದಾಗ ಪ್ರೀತಿಯಿಂದ ಬಂದು ಅವರು ತಮ್ಮ ಕೆಲಸ ಮಾಡಿಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ನನಗೆ ಇಂಥದ್ದೊಂದು ಅನುಭವವಾಗುತ್ತಿರುವುದು ಈ ತರಹದ ಬೆಳವಣಿಗೆ ಚಿತ್ರರಂಗಕ್ಕೆ ಪೂರಕವಲ್ಲ’ ಎಂದು ಹೇಳಿದ್ದಾರೆ.

ಆರೋಪಕ್ಕೆ ರಚಿತಾ ರಾಮ್‌ ಕೊಟ್ಟ ಪ್ರತಿಕ್ರಿಯೆ ಇಲ್ಲಿದೆ..

ಆಂದೋಲನ ಡೆಸ್ಕ್

Recent Posts

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

1 min ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

31 mins ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

3 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

4 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

4 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

4 hours ago