ಮನರಂಜನೆ

ಎಂಟು ವರ್ಷಗಳ ನಂತರ ಮತ್ತೆ ಕಾಲೇಜ್‍ ಹುಡುಗಿಯಾದ ರಚಿತಾ ರಾಮ್‍

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ ಸಾಲಿಗೆ ಇದೀಗ ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರ ಸಹ ಸೇರಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ರಚಿತಾ ಬಹಳ ದಿನಗಳ ನಂತರ ಕಾಲೇಜು ಯುವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಅಷ್ಟೇ ಅಲ್ಲ, ಪಾತ್ರಕ್ಕಾಗಿ ತೂಕವನ್ನು ಇಳಿಸಿಕೊಳ್ಳುತ್ತಿದ್ದಾರಂತೆ. ಈ ವಿಷಯವನ್ನು ಸ್ವತಃ ಅವರೇ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘’ಕ್ರಿಮಿನಲ್‍ ಚಿತ್ರದಲ್ಲಿ ಗ್ಲಾಮರ್‍ ಇರುವುದಿಲ್ಲ. ಮೇಕಪ್‍ ಹಾಕೋಕೂ ಬಿಡುತ್ತಿಲ್ಲ. ಈ ಚಿತ್ರದಲ್ಲಿ ಯುವ ಪ್ರೇಮಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಪಾತ್ರಕ್ಕಾಗಿ ಇನ್ನಷ್ಟು ತೂಕ ಇಳಿಸಿಕೊಳ್ಳಬಬೇಕು. ‘ಭರ್ಜರಿ’ಯಲ್ಲಿ ಕಾಲೇಜ್‍ ಹುಡುಗಿಯಾಗಿ ಕಾಣಿಸಿಕೊಂಡಿದ್ದು ಬಿಟ್ಟರೆ, ನಂತರ ಇದೇ ಚಿತ್ರದಲ್ಲಿ ಅಂಥದ್ದೊಂದು ಪಾತ್ರ ಮಾಡುತ್ತಿದ್ದೇನೆ. ಇಲ್ಲಿ ಹೆಚ್ಚು ಮೇಕಪ್‍ ಇರುವುದಿಲ್ಲ. ಒಬ್ಬ ಸರಳ ಹುಡುಗಿಯ ಪಾತ್ರ ಮಾಡುತ್ತಿದ್ದೇನೆ. ನಾನೊಬ್ಬಳೇ ಅಲ್ಲ, ಧ್ರುವ ಸಹ ತೂಕ ಇಳಿಸಿಕೊಳ‍್ಳುತ್ತಿದ್ದಾರೆ. ಇಬ್ಬರೂ ಯಂಗ್‍ ಆಗಿ ಕಾಣಬೇಕು ಎಂಬುದು ನಮ್ಮ ಉದ್ದೇಶ’ ಎನ್ನುತ್ತಾರೆ.

‘ಕ್ರಿಮಿನಲ್‍’ ಚಿತ್ರದಲ್ಲಿ ಪಾರ್ವತಿ ಎಂಬ ಪಾತ್ರ ಮಾಡುತ್ತಿರುವುದಾಗಿ ಹೇಳುವ ರಚಿತಾ, ‘ಚಿತ್ರದಲ್ಲಿ ಧ್ರುವ, ಶಿವ ಎಂಬ ಪಾತ್ರ ಮಾಡಿದರೆ, ನಾನು ಪಾರ್ವತಿ ಎಂಬ ಪಾತ್ರ ಮಾಡುತ್ತಿದ್ದಾರೆ. ಚಿತ್ರದಲ್ಲಿ ಶಿವ-ಪಾರ್ವತಿ ಪ್ರೀತಿ ಜಗಳ, ಗಲಾಟೆ, ಅಳು-ನಗು ಎಲ್ಲವೂ ಇರುತ್ತದೆ. ‘ಕೂಲಿ’ ಚಿತ್ರದ ನಂತರ ಬೇರೆ ತರಹದ ಪಾತ್ರಗಳು ಬರುತ್ತಿವೆ. ಬೇರೆ ತರಹ ನೋಡುತ್ತಿದ್ದಾರೆ. ಈ ಚಿತ್ರದಲ್ಲೂ ವಿಭಿನ್ನ ಪಾತ್ರ ಸಿಕ್ಕಿದೆ. ಈ ಚಿತ್ರಕ್ಕಾಗಿ ಮೊದಲ ಕಾಲ್‍ ಬಂದಿದ್ದು ಧ್ರುವ ಅವರದ್ದು. ಈ ಪಾತ್ರವನ್ನು ನೀವು ಮಾಡಬೇಕು ಎಂದರು. ನಾನೇ ಯಾಕೆ ಎಂದು ಕೇಳಿದೆ. ಈ ಪಾತ್ರಕ್ಕೆ ನೀವೇ ಸೂಕ್ತ, ನಿಮಗೆ ಈ ಪಾತ್ರ ಕಷ್ಟವಾಗುವುದಿಲ್ಲ ಎಂದರು. ಈ ಚಿತ್ರದಲ್ಲಿ ಶಿವ-ಪಾರ್ವತಿ ಬಹಳ ಚೆನ್ನಾಗಿರುತ್ತಾರೆ. ಮುದ್ದುಮುದ್ದಾಗಿ ಇರುತ್ತಾರೆ ಎನ್ನುವುದಕ್ಕಿಂತ ಆ ಕಾಂಬಿನೇಷನ್‍ ಚೆನ್ನಾಗಿದೆ’ ಎನ್ನುತ್ತಾರೆ ರಚಿತಾ.

ಅಂದಹಾಗೆ, ‘ಕ್ರಿಮಿನಲ್‍’ ಚಿತ್ರ ಮುಹೂರ್ತ ಇತ್ತೀಚೆಗೆ ಆಗಿದ್ದು, ಸದ್ಯದಲ್ಲೇ ಚಿತ್ರೀಕರಣ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

29 mins ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

41 mins ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

58 mins ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

1 hour ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

1 hour ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

2 hours ago