ಮನರಂಜನೆ

ಎಂಟು ವರ್ಷಗಳ ನಂತರ ಮತ್ತೆ ಕಾಲೇಜ್‍ ಹುಡುಗಿಯಾದ ರಚಿತಾ ರಾಮ್‍

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ ಸಾಲಿಗೆ ಇದೀಗ ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರ ಸಹ ಸೇರಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ರಚಿತಾ ಬಹಳ ದಿನಗಳ ನಂತರ ಕಾಲೇಜು ಯುವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಅಷ್ಟೇ ಅಲ್ಲ, ಪಾತ್ರಕ್ಕಾಗಿ ತೂಕವನ್ನು ಇಳಿಸಿಕೊಳ್ಳುತ್ತಿದ್ದಾರಂತೆ. ಈ ವಿಷಯವನ್ನು ಸ್ವತಃ ಅವರೇ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘’ಕ್ರಿಮಿನಲ್‍ ಚಿತ್ರದಲ್ಲಿ ಗ್ಲಾಮರ್‍ ಇರುವುದಿಲ್ಲ. ಮೇಕಪ್‍ ಹಾಕೋಕೂ ಬಿಡುತ್ತಿಲ್ಲ. ಈ ಚಿತ್ರದಲ್ಲಿ ಯುವ ಪ್ರೇಮಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಪಾತ್ರಕ್ಕಾಗಿ ಇನ್ನಷ್ಟು ತೂಕ ಇಳಿಸಿಕೊಳ್ಳಬಬೇಕು. ‘ಭರ್ಜರಿ’ಯಲ್ಲಿ ಕಾಲೇಜ್‍ ಹುಡುಗಿಯಾಗಿ ಕಾಣಿಸಿಕೊಂಡಿದ್ದು ಬಿಟ್ಟರೆ, ನಂತರ ಇದೇ ಚಿತ್ರದಲ್ಲಿ ಅಂಥದ್ದೊಂದು ಪಾತ್ರ ಮಾಡುತ್ತಿದ್ದೇನೆ. ಇಲ್ಲಿ ಹೆಚ್ಚು ಮೇಕಪ್‍ ಇರುವುದಿಲ್ಲ. ಒಬ್ಬ ಸರಳ ಹುಡುಗಿಯ ಪಾತ್ರ ಮಾಡುತ್ತಿದ್ದೇನೆ. ನಾನೊಬ್ಬಳೇ ಅಲ್ಲ, ಧ್ರುವ ಸಹ ತೂಕ ಇಳಿಸಿಕೊಳ‍್ಳುತ್ತಿದ್ದಾರೆ. ಇಬ್ಬರೂ ಯಂಗ್‍ ಆಗಿ ಕಾಣಬೇಕು ಎಂಬುದು ನಮ್ಮ ಉದ್ದೇಶ’ ಎನ್ನುತ್ತಾರೆ.

‘ಕ್ರಿಮಿನಲ್‍’ ಚಿತ್ರದಲ್ಲಿ ಪಾರ್ವತಿ ಎಂಬ ಪಾತ್ರ ಮಾಡುತ್ತಿರುವುದಾಗಿ ಹೇಳುವ ರಚಿತಾ, ‘ಚಿತ್ರದಲ್ಲಿ ಧ್ರುವ, ಶಿವ ಎಂಬ ಪಾತ್ರ ಮಾಡಿದರೆ, ನಾನು ಪಾರ್ವತಿ ಎಂಬ ಪಾತ್ರ ಮಾಡುತ್ತಿದ್ದಾರೆ. ಚಿತ್ರದಲ್ಲಿ ಶಿವ-ಪಾರ್ವತಿ ಪ್ರೀತಿ ಜಗಳ, ಗಲಾಟೆ, ಅಳು-ನಗು ಎಲ್ಲವೂ ಇರುತ್ತದೆ. ‘ಕೂಲಿ’ ಚಿತ್ರದ ನಂತರ ಬೇರೆ ತರಹದ ಪಾತ್ರಗಳು ಬರುತ್ತಿವೆ. ಬೇರೆ ತರಹ ನೋಡುತ್ತಿದ್ದಾರೆ. ಈ ಚಿತ್ರದಲ್ಲೂ ವಿಭಿನ್ನ ಪಾತ್ರ ಸಿಕ್ಕಿದೆ. ಈ ಚಿತ್ರಕ್ಕಾಗಿ ಮೊದಲ ಕಾಲ್‍ ಬಂದಿದ್ದು ಧ್ರುವ ಅವರದ್ದು. ಈ ಪಾತ್ರವನ್ನು ನೀವು ಮಾಡಬೇಕು ಎಂದರು. ನಾನೇ ಯಾಕೆ ಎಂದು ಕೇಳಿದೆ. ಈ ಪಾತ್ರಕ್ಕೆ ನೀವೇ ಸೂಕ್ತ, ನಿಮಗೆ ಈ ಪಾತ್ರ ಕಷ್ಟವಾಗುವುದಿಲ್ಲ ಎಂದರು. ಈ ಚಿತ್ರದಲ್ಲಿ ಶಿವ-ಪಾರ್ವತಿ ಬಹಳ ಚೆನ್ನಾಗಿರುತ್ತಾರೆ. ಮುದ್ದುಮುದ್ದಾಗಿ ಇರುತ್ತಾರೆ ಎನ್ನುವುದಕ್ಕಿಂತ ಆ ಕಾಂಬಿನೇಷನ್‍ ಚೆನ್ನಾಗಿದೆ’ ಎನ್ನುತ್ತಾರೆ ರಚಿತಾ.

ಅಂದಹಾಗೆ, ‘ಕ್ರಿಮಿನಲ್‍’ ಚಿತ್ರ ಮುಹೂರ್ತ ಇತ್ತೀಚೆಗೆ ಆಗಿದ್ದು, ಸದ್ಯದಲ್ಲೇ ಚಿತ್ರೀಕರಣ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

4 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

4 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

4 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

5 hours ago