ಮನರಂಜನೆ

ಎಂಟು ವರ್ಷಗಳ ನಂತರ ಮತ್ತೆ ಕಾಲೇಜ್‍ ಹುಡುಗಿಯಾದ ರಚಿತಾ ರಾಮ್‍

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ ಸಾಲಿಗೆ ಇದೀಗ ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರ ಸಹ ಸೇರಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ರಚಿತಾ ಬಹಳ ದಿನಗಳ ನಂತರ ಕಾಲೇಜು ಯುವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಅಷ್ಟೇ ಅಲ್ಲ, ಪಾತ್ರಕ್ಕಾಗಿ ತೂಕವನ್ನು ಇಳಿಸಿಕೊಳ್ಳುತ್ತಿದ್ದಾರಂತೆ. ಈ ವಿಷಯವನ್ನು ಸ್ವತಃ ಅವರೇ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘’ಕ್ರಿಮಿನಲ್‍ ಚಿತ್ರದಲ್ಲಿ ಗ್ಲಾಮರ್‍ ಇರುವುದಿಲ್ಲ. ಮೇಕಪ್‍ ಹಾಕೋಕೂ ಬಿಡುತ್ತಿಲ್ಲ. ಈ ಚಿತ್ರದಲ್ಲಿ ಯುವ ಪ್ರೇಮಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಪಾತ್ರಕ್ಕಾಗಿ ಇನ್ನಷ್ಟು ತೂಕ ಇಳಿಸಿಕೊಳ್ಳಬಬೇಕು. ‘ಭರ್ಜರಿ’ಯಲ್ಲಿ ಕಾಲೇಜ್‍ ಹುಡುಗಿಯಾಗಿ ಕಾಣಿಸಿಕೊಂಡಿದ್ದು ಬಿಟ್ಟರೆ, ನಂತರ ಇದೇ ಚಿತ್ರದಲ್ಲಿ ಅಂಥದ್ದೊಂದು ಪಾತ್ರ ಮಾಡುತ್ತಿದ್ದೇನೆ. ಇಲ್ಲಿ ಹೆಚ್ಚು ಮೇಕಪ್‍ ಇರುವುದಿಲ್ಲ. ಒಬ್ಬ ಸರಳ ಹುಡುಗಿಯ ಪಾತ್ರ ಮಾಡುತ್ತಿದ್ದೇನೆ. ನಾನೊಬ್ಬಳೇ ಅಲ್ಲ, ಧ್ರುವ ಸಹ ತೂಕ ಇಳಿಸಿಕೊಳ‍್ಳುತ್ತಿದ್ದಾರೆ. ಇಬ್ಬರೂ ಯಂಗ್‍ ಆಗಿ ಕಾಣಬೇಕು ಎಂಬುದು ನಮ್ಮ ಉದ್ದೇಶ’ ಎನ್ನುತ್ತಾರೆ.

‘ಕ್ರಿಮಿನಲ್‍’ ಚಿತ್ರದಲ್ಲಿ ಪಾರ್ವತಿ ಎಂಬ ಪಾತ್ರ ಮಾಡುತ್ತಿರುವುದಾಗಿ ಹೇಳುವ ರಚಿತಾ, ‘ಚಿತ್ರದಲ್ಲಿ ಧ್ರುವ, ಶಿವ ಎಂಬ ಪಾತ್ರ ಮಾಡಿದರೆ, ನಾನು ಪಾರ್ವತಿ ಎಂಬ ಪಾತ್ರ ಮಾಡುತ್ತಿದ್ದಾರೆ. ಚಿತ್ರದಲ್ಲಿ ಶಿವ-ಪಾರ್ವತಿ ಪ್ರೀತಿ ಜಗಳ, ಗಲಾಟೆ, ಅಳು-ನಗು ಎಲ್ಲವೂ ಇರುತ್ತದೆ. ‘ಕೂಲಿ’ ಚಿತ್ರದ ನಂತರ ಬೇರೆ ತರಹದ ಪಾತ್ರಗಳು ಬರುತ್ತಿವೆ. ಬೇರೆ ತರಹ ನೋಡುತ್ತಿದ್ದಾರೆ. ಈ ಚಿತ್ರದಲ್ಲೂ ವಿಭಿನ್ನ ಪಾತ್ರ ಸಿಕ್ಕಿದೆ. ಈ ಚಿತ್ರಕ್ಕಾಗಿ ಮೊದಲ ಕಾಲ್‍ ಬಂದಿದ್ದು ಧ್ರುವ ಅವರದ್ದು. ಈ ಪಾತ್ರವನ್ನು ನೀವು ಮಾಡಬೇಕು ಎಂದರು. ನಾನೇ ಯಾಕೆ ಎಂದು ಕೇಳಿದೆ. ಈ ಪಾತ್ರಕ್ಕೆ ನೀವೇ ಸೂಕ್ತ, ನಿಮಗೆ ಈ ಪಾತ್ರ ಕಷ್ಟವಾಗುವುದಿಲ್ಲ ಎಂದರು. ಈ ಚಿತ್ರದಲ್ಲಿ ಶಿವ-ಪಾರ್ವತಿ ಬಹಳ ಚೆನ್ನಾಗಿರುತ್ತಾರೆ. ಮುದ್ದುಮುದ್ದಾಗಿ ಇರುತ್ತಾರೆ ಎನ್ನುವುದಕ್ಕಿಂತ ಆ ಕಾಂಬಿನೇಷನ್‍ ಚೆನ್ನಾಗಿದೆ’ ಎನ್ನುತ್ತಾರೆ ರಚಿತಾ.

ಅಂದಹಾಗೆ, ‘ಕ್ರಿಮಿನಲ್‍’ ಚಿತ್ರ ಮುಹೂರ್ತ ಇತ್ತೀಚೆಗೆ ಆಗಿದ್ದು, ಸದ್ಯದಲ್ಲೇ ಚಿತ್ರೀಕರಣ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago