ಮನರಂಜನೆ

ಎಂಟು ವರ್ಷಗಳ ನಂತರ ಮತ್ತೆ ಕಾಲೇಜ್‍ ಹುಡುಗಿಯಾದ ರಚಿತಾ ರಾಮ್‍

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ ಸಾಲಿಗೆ ಇದೀಗ ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರ ಸಹ ಸೇರಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ರಚಿತಾ ಬಹಳ ದಿನಗಳ ನಂತರ ಕಾಲೇಜು ಯುವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಅಷ್ಟೇ ಅಲ್ಲ, ಪಾತ್ರಕ್ಕಾಗಿ ತೂಕವನ್ನು ಇಳಿಸಿಕೊಳ್ಳುತ್ತಿದ್ದಾರಂತೆ. ಈ ವಿಷಯವನ್ನು ಸ್ವತಃ ಅವರೇ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘’ಕ್ರಿಮಿನಲ್‍ ಚಿತ್ರದಲ್ಲಿ ಗ್ಲಾಮರ್‍ ಇರುವುದಿಲ್ಲ. ಮೇಕಪ್‍ ಹಾಕೋಕೂ ಬಿಡುತ್ತಿಲ್ಲ. ಈ ಚಿತ್ರದಲ್ಲಿ ಯುವ ಪ್ರೇಮಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಪಾತ್ರಕ್ಕಾಗಿ ಇನ್ನಷ್ಟು ತೂಕ ಇಳಿಸಿಕೊಳ್ಳಬಬೇಕು. ‘ಭರ್ಜರಿ’ಯಲ್ಲಿ ಕಾಲೇಜ್‍ ಹುಡುಗಿಯಾಗಿ ಕಾಣಿಸಿಕೊಂಡಿದ್ದು ಬಿಟ್ಟರೆ, ನಂತರ ಇದೇ ಚಿತ್ರದಲ್ಲಿ ಅಂಥದ್ದೊಂದು ಪಾತ್ರ ಮಾಡುತ್ತಿದ್ದೇನೆ. ಇಲ್ಲಿ ಹೆಚ್ಚು ಮೇಕಪ್‍ ಇರುವುದಿಲ್ಲ. ಒಬ್ಬ ಸರಳ ಹುಡುಗಿಯ ಪಾತ್ರ ಮಾಡುತ್ತಿದ್ದೇನೆ. ನಾನೊಬ್ಬಳೇ ಅಲ್ಲ, ಧ್ರುವ ಸಹ ತೂಕ ಇಳಿಸಿಕೊಳ‍್ಳುತ್ತಿದ್ದಾರೆ. ಇಬ್ಬರೂ ಯಂಗ್‍ ಆಗಿ ಕಾಣಬೇಕು ಎಂಬುದು ನಮ್ಮ ಉದ್ದೇಶ’ ಎನ್ನುತ್ತಾರೆ.

‘ಕ್ರಿಮಿನಲ್‍’ ಚಿತ್ರದಲ್ಲಿ ಪಾರ್ವತಿ ಎಂಬ ಪಾತ್ರ ಮಾಡುತ್ತಿರುವುದಾಗಿ ಹೇಳುವ ರಚಿತಾ, ‘ಚಿತ್ರದಲ್ಲಿ ಧ್ರುವ, ಶಿವ ಎಂಬ ಪಾತ್ರ ಮಾಡಿದರೆ, ನಾನು ಪಾರ್ವತಿ ಎಂಬ ಪಾತ್ರ ಮಾಡುತ್ತಿದ್ದಾರೆ. ಚಿತ್ರದಲ್ಲಿ ಶಿವ-ಪಾರ್ವತಿ ಪ್ರೀತಿ ಜಗಳ, ಗಲಾಟೆ, ಅಳು-ನಗು ಎಲ್ಲವೂ ಇರುತ್ತದೆ. ‘ಕೂಲಿ’ ಚಿತ್ರದ ನಂತರ ಬೇರೆ ತರಹದ ಪಾತ್ರಗಳು ಬರುತ್ತಿವೆ. ಬೇರೆ ತರಹ ನೋಡುತ್ತಿದ್ದಾರೆ. ಈ ಚಿತ್ರದಲ್ಲೂ ವಿಭಿನ್ನ ಪಾತ್ರ ಸಿಕ್ಕಿದೆ. ಈ ಚಿತ್ರಕ್ಕಾಗಿ ಮೊದಲ ಕಾಲ್‍ ಬಂದಿದ್ದು ಧ್ರುವ ಅವರದ್ದು. ಈ ಪಾತ್ರವನ್ನು ನೀವು ಮಾಡಬೇಕು ಎಂದರು. ನಾನೇ ಯಾಕೆ ಎಂದು ಕೇಳಿದೆ. ಈ ಪಾತ್ರಕ್ಕೆ ನೀವೇ ಸೂಕ್ತ, ನಿಮಗೆ ಈ ಪಾತ್ರ ಕಷ್ಟವಾಗುವುದಿಲ್ಲ ಎಂದರು. ಈ ಚಿತ್ರದಲ್ಲಿ ಶಿವ-ಪಾರ್ವತಿ ಬಹಳ ಚೆನ್ನಾಗಿರುತ್ತಾರೆ. ಮುದ್ದುಮುದ್ದಾಗಿ ಇರುತ್ತಾರೆ ಎನ್ನುವುದಕ್ಕಿಂತ ಆ ಕಾಂಬಿನೇಷನ್‍ ಚೆನ್ನಾಗಿದೆ’ ಎನ್ನುತ್ತಾರೆ ರಚಿತಾ.

ಅಂದಹಾಗೆ, ‘ಕ್ರಿಮಿನಲ್‍’ ಚಿತ್ರ ಮುಹೂರ್ತ ಇತ್ತೀಚೆಗೆ ಆಗಿದ್ದು, ಸದ್ಯದಲ್ಲೇ ಚಿತ್ರೀಕರಣ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago