ಮನರಂಜನೆ

ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍

ಕೊನೆಗೂ ಊಹಾಪೋಹಗಳು ನಿಜವಾಗಿವೆ. ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷವೇ ಕೇಳಿಬಂದಿತ್ತು. ಆದರೆ, ಚಿತ್ರತಂಡದವರಾಗಲೀ, ರಚಿತಾ ಆಗಲೀ ಈ ವಿಷಯವನ್ನು ಸ್ಪಷ್ಟಪಡಿಸಿರಲಿಲ್ಲ. ಆ ಸುದ್ದಿ ನಿಜವಾಗಿದ್ದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

‘ಕೂಲಿ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಚೆನ್ನೈನಲ್ಲಿ ನಡೆದಿದೆ. ಈ ಸಮಾರಂಭದಲ್ಲಿ ರಜನಿಕಾಂತ್, ನಾಗಾರ್ಜುನ, ಉಪೇಂದ್ರ, ಆಮೀರ್ ಖಾನ್‍ ಸೇರಿದಂತೆ ಹಲವರು ಭಾಗವಹಿಸಿದ್ದರು. ಎಲ್ಲ ಗಣ್ಯರ ಸಮ್ಮುಖದಲ್ಲಿ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದ್ದು, ಈ ಟ್ರೇಲರ್‌ನಲ್ಲಿ ರಚಿತಾ ರಾಮ್‍ ಅವರನ್ನು ಸಹ ನೋಡಬಹುದು.

ಚಿತ್ರದಲ್ಲಿ ರಚಿತಾ ರಾಮ್‍ ಪಾತ್ರವೇನು? ಅವರು ಎಷ್ಟು ಹೊತ್ತು ಇರುತ್ತಾರೆ? ಮುಂತಾದ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರವಿಲ್ಲ. ಆ ಎಲ್ಲಾ ಪ್ರಶ್ನೆಗಳಿಗೂ ಚಿತ್ರದಲ್ಲೇ ಉತ್ತರ ಕಂಡುಕೊಳ್ಳಬೇಕು. ಸದ್ಯ, ಟ್ರೇಲರ್‌ನಲ್ಲಿ ರಚಿತಾ ಅವರನ್ನು ನೋಡಬಹುದಾಗಿದ್ದು, ಈ ಮೂಲಕ ಅವರು ನಟಿಸಿರುವುದು ಖಾತ್ರಿಯಾಗಿದೆ.

ರಚಿತಾ ಈ ಹಿಂದೆ ‘ಸೂಪರ್ ಮಚ್ಚಿ’ ಎಂಬ ತೆಲುಗು ಚಿತ್ರದಲ್ಲಿ ನಟಿಸಿದ್ದರು. ಚಿರಂಜೀವಿ ಅವರ ಮಾಜಿ ಅಳಿಯ ಕಲ್ಯಾಣ್‍ ದೇವ್‍ಗೆ ನಾಯಕಿಯಾಗಿ ನಟಿಸಿದ್ದರು. ಆದರೆ, ಚಿತ್ರ ಸೋತು, ರಚಿತಾ ನಿರೀಕ್ಷೆ ನುಚ್ಚುನೂರಾಯಿತು. ಈಗ ಅವರು ತಮಿಳು ಚಿತ್ರದಲ್ಲಿ, ಅದರಲ್ಲೂ ರಜನಿಕಾಂತ್‍ ಅಭಿನಯದ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಾದರೂ ಅವರು ಗಮನಸೆಳೆಯುತ್ತಾರಾ ಎಂಬುದನ್ನು ಕಾದು ನೋಡಬೇಕು.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಮತ್ತು ಉಪೇಂದ್ರ ಜೊತೆಗೆ ಶ್ರುತಿ ಹಾಸನ್, ಸತ್ಯರಾಜ್‍, ಆಮೀರ್ ಖಾನ್‍, ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಲೋಕೇಶ್ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿರುವ ಈ ಚಿತ್ರವು ಆಗಸ್ಟ್ 14ರಂದು ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಕೆರೆಗಳಿಗೆ ಪುನಶ್ಚೇತನ; ವನ್ಯಜೀವಿಗಳಿಗಿಲ್ಲ ನೀರಿನ ಕೊರತೆ

ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…

1 min ago

ವಾಣಿಜ್ಯ ಸಿಲಿಂಡರ್ ಅಭಾವ ಶುರು

ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…

5 mins ago

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

8 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

10 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

10 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

10 hours ago