ಮನರಂಜನೆ

ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍

ಕೊನೆಗೂ ಊಹಾಪೋಹಗಳು ನಿಜವಾಗಿವೆ. ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷವೇ ಕೇಳಿಬಂದಿತ್ತು. ಆದರೆ, ಚಿತ್ರತಂಡದವರಾಗಲೀ, ರಚಿತಾ ಆಗಲೀ ಈ ವಿಷಯವನ್ನು ಸ್ಪಷ್ಟಪಡಿಸಿರಲಿಲ್ಲ. ಆ ಸುದ್ದಿ ನಿಜವಾಗಿದ್ದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

‘ಕೂಲಿ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಚೆನ್ನೈನಲ್ಲಿ ನಡೆದಿದೆ. ಈ ಸಮಾರಂಭದಲ್ಲಿ ರಜನಿಕಾಂತ್, ನಾಗಾರ್ಜುನ, ಉಪೇಂದ್ರ, ಆಮೀರ್ ಖಾನ್‍ ಸೇರಿದಂತೆ ಹಲವರು ಭಾಗವಹಿಸಿದ್ದರು. ಎಲ್ಲ ಗಣ್ಯರ ಸಮ್ಮುಖದಲ್ಲಿ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದ್ದು, ಈ ಟ್ರೇಲರ್‌ನಲ್ಲಿ ರಚಿತಾ ರಾಮ್‍ ಅವರನ್ನು ಸಹ ನೋಡಬಹುದು.

ಚಿತ್ರದಲ್ಲಿ ರಚಿತಾ ರಾಮ್‍ ಪಾತ್ರವೇನು? ಅವರು ಎಷ್ಟು ಹೊತ್ತು ಇರುತ್ತಾರೆ? ಮುಂತಾದ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರವಿಲ್ಲ. ಆ ಎಲ್ಲಾ ಪ್ರಶ್ನೆಗಳಿಗೂ ಚಿತ್ರದಲ್ಲೇ ಉತ್ತರ ಕಂಡುಕೊಳ್ಳಬೇಕು. ಸದ್ಯ, ಟ್ರೇಲರ್‌ನಲ್ಲಿ ರಚಿತಾ ಅವರನ್ನು ನೋಡಬಹುದಾಗಿದ್ದು, ಈ ಮೂಲಕ ಅವರು ನಟಿಸಿರುವುದು ಖಾತ್ರಿಯಾಗಿದೆ.

ರಚಿತಾ ಈ ಹಿಂದೆ ‘ಸೂಪರ್ ಮಚ್ಚಿ’ ಎಂಬ ತೆಲುಗು ಚಿತ್ರದಲ್ಲಿ ನಟಿಸಿದ್ದರು. ಚಿರಂಜೀವಿ ಅವರ ಮಾಜಿ ಅಳಿಯ ಕಲ್ಯಾಣ್‍ ದೇವ್‍ಗೆ ನಾಯಕಿಯಾಗಿ ನಟಿಸಿದ್ದರು. ಆದರೆ, ಚಿತ್ರ ಸೋತು, ರಚಿತಾ ನಿರೀಕ್ಷೆ ನುಚ್ಚುನೂರಾಯಿತು. ಈಗ ಅವರು ತಮಿಳು ಚಿತ್ರದಲ್ಲಿ, ಅದರಲ್ಲೂ ರಜನಿಕಾಂತ್‍ ಅಭಿನಯದ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಾದರೂ ಅವರು ಗಮನಸೆಳೆಯುತ್ತಾರಾ ಎಂಬುದನ್ನು ಕಾದು ನೋಡಬೇಕು.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಮತ್ತು ಉಪೇಂದ್ರ ಜೊತೆಗೆ ಶ್ರುತಿ ಹಾಸನ್, ಸತ್ಯರಾಜ್‍, ಆಮೀರ್ ಖಾನ್‍, ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಲೋಕೇಶ್ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿರುವ ಈ ಚಿತ್ರವು ಆಗಸ್ಟ್ 14ರಂದು ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

46 mins ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

1 hour ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

1 hour ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

2 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago