ಮನರಂಜನೆ

ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍

ಕೊನೆಗೂ ಊಹಾಪೋಹಗಳು ನಿಜವಾಗಿವೆ. ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷವೇ ಕೇಳಿಬಂದಿತ್ತು. ಆದರೆ, ಚಿತ್ರತಂಡದವರಾಗಲೀ, ರಚಿತಾ ಆಗಲೀ ಈ ವಿಷಯವನ್ನು ಸ್ಪಷ್ಟಪಡಿಸಿರಲಿಲ್ಲ. ಆ ಸುದ್ದಿ ನಿಜವಾಗಿದ್ದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

‘ಕೂಲಿ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಚೆನ್ನೈನಲ್ಲಿ ನಡೆದಿದೆ. ಈ ಸಮಾರಂಭದಲ್ಲಿ ರಜನಿಕಾಂತ್, ನಾಗಾರ್ಜುನ, ಉಪೇಂದ್ರ, ಆಮೀರ್ ಖಾನ್‍ ಸೇರಿದಂತೆ ಹಲವರು ಭಾಗವಹಿಸಿದ್ದರು. ಎಲ್ಲ ಗಣ್ಯರ ಸಮ್ಮುಖದಲ್ಲಿ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದ್ದು, ಈ ಟ್ರೇಲರ್‌ನಲ್ಲಿ ರಚಿತಾ ರಾಮ್‍ ಅವರನ್ನು ಸಹ ನೋಡಬಹುದು.

ಚಿತ್ರದಲ್ಲಿ ರಚಿತಾ ರಾಮ್‍ ಪಾತ್ರವೇನು? ಅವರು ಎಷ್ಟು ಹೊತ್ತು ಇರುತ್ತಾರೆ? ಮುಂತಾದ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರವಿಲ್ಲ. ಆ ಎಲ್ಲಾ ಪ್ರಶ್ನೆಗಳಿಗೂ ಚಿತ್ರದಲ್ಲೇ ಉತ್ತರ ಕಂಡುಕೊಳ್ಳಬೇಕು. ಸದ್ಯ, ಟ್ರೇಲರ್‌ನಲ್ಲಿ ರಚಿತಾ ಅವರನ್ನು ನೋಡಬಹುದಾಗಿದ್ದು, ಈ ಮೂಲಕ ಅವರು ನಟಿಸಿರುವುದು ಖಾತ್ರಿಯಾಗಿದೆ.

ರಚಿತಾ ಈ ಹಿಂದೆ ‘ಸೂಪರ್ ಮಚ್ಚಿ’ ಎಂಬ ತೆಲುಗು ಚಿತ್ರದಲ್ಲಿ ನಟಿಸಿದ್ದರು. ಚಿರಂಜೀವಿ ಅವರ ಮಾಜಿ ಅಳಿಯ ಕಲ್ಯಾಣ್‍ ದೇವ್‍ಗೆ ನಾಯಕಿಯಾಗಿ ನಟಿಸಿದ್ದರು. ಆದರೆ, ಚಿತ್ರ ಸೋತು, ರಚಿತಾ ನಿರೀಕ್ಷೆ ನುಚ್ಚುನೂರಾಯಿತು. ಈಗ ಅವರು ತಮಿಳು ಚಿತ್ರದಲ್ಲಿ, ಅದರಲ್ಲೂ ರಜನಿಕಾಂತ್‍ ಅಭಿನಯದ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಾದರೂ ಅವರು ಗಮನಸೆಳೆಯುತ್ತಾರಾ ಎಂಬುದನ್ನು ಕಾದು ನೋಡಬೇಕು.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಮತ್ತು ಉಪೇಂದ್ರ ಜೊತೆಗೆ ಶ್ರುತಿ ಹಾಸನ್, ಸತ್ಯರಾಜ್‍, ಆಮೀರ್ ಖಾನ್‍, ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಲೋಕೇಶ್ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿರುವ ಈ ಚಿತ್ರವು ಆಗಸ್ಟ್ 14ರಂದು ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

9 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

10 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

11 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

12 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

12 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

13 hours ago