ಕೊನೆಗೂ ಊಹಾಪೋಹಗಳು ನಿಜವಾಗಿವೆ. ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷವೇ ಕೇಳಿಬಂದಿತ್ತು. ಆದರೆ, ಚಿತ್ರತಂಡದವರಾಗಲೀ, ರಚಿತಾ ಆಗಲೀ ಈ ವಿಷಯವನ್ನು ಸ್ಪಷ್ಟಪಡಿಸಿರಲಿಲ್ಲ. ಆ ಸುದ್ದಿ ನಿಜವಾಗಿದ್ದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
‘ಕೂಲಿ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಚೆನ್ನೈನಲ್ಲಿ ನಡೆದಿದೆ. ಈ ಸಮಾರಂಭದಲ್ಲಿ ರಜನಿಕಾಂತ್, ನಾಗಾರ್ಜುನ, ಉಪೇಂದ್ರ, ಆಮೀರ್ ಖಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಎಲ್ಲ ಗಣ್ಯರ ಸಮ್ಮುಖದಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಟ್ರೇಲರ್ನಲ್ಲಿ ರಚಿತಾ ರಾಮ್ ಅವರನ್ನು ಸಹ ನೋಡಬಹುದು.
ಚಿತ್ರದಲ್ಲಿ ರಚಿತಾ ರಾಮ್ ಪಾತ್ರವೇನು? ಅವರು ಎಷ್ಟು ಹೊತ್ತು ಇರುತ್ತಾರೆ? ಮುಂತಾದ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರವಿಲ್ಲ. ಆ ಎಲ್ಲಾ ಪ್ರಶ್ನೆಗಳಿಗೂ ಚಿತ್ರದಲ್ಲೇ ಉತ್ತರ ಕಂಡುಕೊಳ್ಳಬೇಕು. ಸದ್ಯ, ಟ್ರೇಲರ್ನಲ್ಲಿ ರಚಿತಾ ಅವರನ್ನು ನೋಡಬಹುದಾಗಿದ್ದು, ಈ ಮೂಲಕ ಅವರು ನಟಿಸಿರುವುದು ಖಾತ್ರಿಯಾಗಿದೆ.
ರಚಿತಾ ಈ ಹಿಂದೆ ‘ಸೂಪರ್ ಮಚ್ಚಿ’ ಎಂಬ ತೆಲುಗು ಚಿತ್ರದಲ್ಲಿ ನಟಿಸಿದ್ದರು. ಚಿರಂಜೀವಿ ಅವರ ಮಾಜಿ ಅಳಿಯ ಕಲ್ಯಾಣ್ ದೇವ್ಗೆ ನಾಯಕಿಯಾಗಿ ನಟಿಸಿದ್ದರು. ಆದರೆ, ಚಿತ್ರ ಸೋತು, ರಚಿತಾ ನಿರೀಕ್ಷೆ ನುಚ್ಚುನೂರಾಯಿತು. ಈಗ ಅವರು ತಮಿಳು ಚಿತ್ರದಲ್ಲಿ, ಅದರಲ್ಲೂ ರಜನಿಕಾಂತ್ ಅಭಿನಯದ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಾದರೂ ಅವರು ಗಮನಸೆಳೆಯುತ್ತಾರಾ ಎಂಬುದನ್ನು ಕಾದು ನೋಡಬೇಕು.
‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಮತ್ತು ಉಪೇಂದ್ರ ಜೊತೆಗೆ ಶ್ರುತಿ ಹಾಸನ್, ಸತ್ಯರಾಜ್, ಆಮೀರ್ ಖಾನ್, ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಲೋಕೇಶ್ ಕನಕರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಈ ಚಿತ್ರವನ್ನು ಸನ್ ಪಿಕ್ಚರ್ಸ್ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿರುವ ಈ ಚಿತ್ರವು ಆಗಸ್ಟ್ 14ರಂದು ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…