ಮನರಂಜನೆ

ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರಕ್ಕೆ ರಚಿತಾ ರಾಮ್‍ ನಾಯಕಿ

ರಚಿತಾ ರಾಮ್‍ ಅಭಿನಯದ ‘ಶಬರಿ’, ‘ಲವ್‍ ಮೀ ಆರ್‍ ಹೆಟ್‍ ಮೀ’ ಚಿತ್ರಗಳ ಸುದ್ದಿಯೇ ಇಲ್ಲ. ಈ ಚಿತ್ರಗಳ ಚಿತ್ರೀಕರಣ ಆಗಿದೆಯಾದರೂ, ಮುಂದೇನು ಗೊತ್ತಿಲ್ಲ. ಇನ್ನು, ‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ಹೊರತುಪಡಿಸಿದರೆ ರಚಿತಾ ಯಾವೊಂದು ಚಿತ್ರವನ್ನೂ ಒಪ್ಪಿರಲಿಲ್ಲ. ರಚಿತಾ ಮುಂದಿನ ನಡೆಯೇನು? ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಝೈದ್ ಖಾನ್‍ ಅಭಿನಯದ ‘ಕಲ್ಟ್’ ಚಿತ್ರಕ್ಕೆ ರಚಿತಾ ಇದೀಗ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

‘ಬನಾರಸ್’ ಬಿಡುಗಡೆಯಾಗಿ ಒಂದೂವರೆ ವರ್ಷಗಳಾದರೂ ಆ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಝೈದ್‍ ಖಾನ್‍ ಯಾವೊಂದು ಚಿತ್ರದಲ್ಲೂ ಕಾಣಿಸಿಕೊಂಡಿರಲಿಲ್ಲ. ಒಂದೊಳ್ಳೆಯ ಕಥೆ ಮತ್ತು ಪಾತ್ರಕ್ಕಾಗಿ ಹುಡುಕಾಟ ನಡೆಸುತ್ತಿರುವುದಾಗಿ ಹೇಳಿದ್ದ ಝೈದ್‍, ಈ ವರ್ಷದ ಆರಂಭದಲ್ಲಿ ‘ಕಲ್ಟ್’ ಎಂಬ ಚಿತ್ರ ಒಪ್ಪಿದ್ದರು. ಯುಗಾದಿಯ ಪ್ರಯುಕ್ತ ಪೋಸ್ಟರ್‍ ಬಿಡುಗಡೆ ಆಗಿತ್ತು. ಆ ನಂತರ ಚಿತ್ರತಂಡದಿಂದ ಯಾವೊಂದು ಸುದ್ದಿಯೂ ಇರಲಿಲ್ಲ. ಇದೀಗ ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿದೆ.

ಈ ಚಿತ್ರವನ್ನು ‘ಉಪಾಧ್ಯಕ್ಷ’ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ರಚಿಸಿದ್ದು, ಈ ಚಿತ್ರದಲ್ಲಿ ಝೈದ್‍ ಖಾನ್‍ ವಿಭಿನ್ನ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರಕ್ಕೆ ‘ಬ್ಲಡಿ ಲವ್‍’ ಎಂಬ ಟ್ಯಾಗ್‍ಲೈನ್‍ ಇದ್ದು, ಚಿತ್ರದ ಕಥೆ ಏನಿರಬಹುದು ಎಂಬ ಕುತೂಹಲ ಶುರುವಾಗಿದೆ.

ಆಶ್ರಿತ್ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಜೆ.ಎಸ್. ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ಈ ಚಿತ್ರಕ್ಕಿದೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

ಭೂಮಿಕಾ

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

6 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

6 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

6 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

9 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

9 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

9 hours ago