ಮನರಂಜನೆ

ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍?

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಇತ್ತೀಚೆಗಷ್ಟೇ ಕೇಳಿಬಂದಿತ್ತು. ಇದೀಗ ಈ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಬಂದಿದೆ.

ಹೌದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿದೆ. ಇದರಲ್ಲಿ ಎಷ್ಟು ನಿಜ, ಎಷ್ಟು ಸುಳ್ಳು ಎಂಬುದರ ಕುರಿತು ಇನ್ನೂ ಮಾಹಿತಿ ಸಿಕ್ಕಿಲ್ಲ. ಇತ್ತೀಚೆಗೆ ರಚಿತಾ, ಚೆನ್ನೈಗೆ ಹೋಗಿ ನಿರ್ದೇಶಕ ಲೋಕೇಶ್‍ ಕನಕರಾಜ್‍ ಅವರನ್ನು ಭೇಟಿ ಮಾಡಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರತಂಡದಿಂದ ಇನ್ನೂ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

ರಚಿತಾ ರಾಮ್‍, ಕನ್ನಡದಲ್ಲಿ ಒಂದು ಯಶಸ್ಸು ನೋಡದೆ ಕೆಲವು ವರ್ಷಗಳೇ ಆಗಿವೆ. ಇತ್ತೀಚೆಗೆ ಬಿಡುಗಡೆಯಾಗಿರುವ ರಚಿತಾ ಅಭಿನಯದ ‘ಮ್ಯಾಟ್ನಿ’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’, ‘ಏಕ್‍ ಲವ್‍ ಯಾ’, ‘ಮಾನ್ಸೂನ್‍ ರಾಗ’, ‘ಲವ್‍ ಯೂ ರಚ್ಚು’, ‘ಆಯುಷ್ಮಾನ್‍ ಭವ’ ಸೇರಿದಂತೆ ಯಾವೊಂದು ಚಿತ್ರ ಸಹ ಯಶಸ್ವಿಯಾಗಿಲ್ಲ. ಸದ್ಯ ರಚಿತಾ, ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ನಟಿಸಿದ್ದು, ಅದರ ಬಿಡುಗಡೆಗೆ ಕಾದಿದ್ದಾರೆ. ಅದು ತಮಗೆ ದೊಡ್ಡ ಬ್ರೇಕ್‍ ನೀಡಬಹುದು ಎಂಬ ನಿರೀಕ್ಷೆಯಲ್ಲಲಿದ್ದಾರೆ.

ರಚಿತಾ ಈ ಹಿಂದೆ ‘ಸೂಪರ್‍ ಮಚ್ಚಿ’ ಎಂಬ ತೆಲುಗು ಚಿತ್ರದಲ್ಲಿ ನಟಿಸಿದ್ದರು. ಚಿರಂಜೀವಿ ಅವರ ಮಾಜಿ ಅಳಿಯ ಕಲ್ಯಾಣ್‍ ದೇವ್‍ಗೆ ನಾಯಕಿಯಾಗಿ ನಟಿಸಿದ್ದರು. ಆದರೆ, ಚಿತ್ರ ಸೋತು, ರಚಿತಾ ನಿರೀಕ್ಷೆ ನುಚ್ಚುನೂರಾಯಿತು. ಈಗ ಅವರು ತಮಿಳು ಚಿತ್ರದಲ್ಲಿ, ಅದರಲ್ಲೂ ರಜನಿಕಾಂತ್‍ ಅಭಿನಯದ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಮತ್ತು ಉಪೇಂದ್ರ ಜೊತೆಗೆ ಶ್ರುತಿ ಹಾಸನ್, ಸತ್ಯರಾಜ್‍, ಮಹೇಂದ್ರನ್‍ ಮುಂತಾದವರು ನಟಿಸುತ್ತಿದ್ದಾರೆ. ಲೋಕೇಶ್ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಈ ಹಿಂದೆ ಸನ್‍ ಪಿಕ್ಚರ್ಸ್ ಸಂಸ್ಥೆಯು ರಜನಿಕಾಂತ್ ಅವರ ‘ಜೈಲರ್‍’ ಮತ್ತು ‘ಅಣ್ಣಾತ್ತೆ’ ಚಿತ್ರಗಳನ್ನು ಸಹ ನಿರ್ಮಿಸಿತ್ತು. ಈ ಚಿತ್ರಕ್ಕೆ ಅನಿರ್ಉದ್ಧ್ ರವಿಚಂದರ್‍ ಸಂಗೀತವಿದೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago