ಮನರಂಜನೆ

ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍?

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಇತ್ತೀಚೆಗಷ್ಟೇ ಕೇಳಿಬಂದಿತ್ತು. ಇದೀಗ ಈ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಬಂದಿದೆ.

ಹೌದು, ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್‍ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿದೆ. ಇದರಲ್ಲಿ ಎಷ್ಟು ನಿಜ, ಎಷ್ಟು ಸುಳ್ಳು ಎಂಬುದರ ಕುರಿತು ಇನ್ನೂ ಮಾಹಿತಿ ಸಿಕ್ಕಿಲ್ಲ. ಇತ್ತೀಚೆಗೆ ರಚಿತಾ, ಚೆನ್ನೈಗೆ ಹೋಗಿ ನಿರ್ದೇಶಕ ಲೋಕೇಶ್‍ ಕನಕರಾಜ್‍ ಅವರನ್ನು ಭೇಟಿ ಮಾಡಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರತಂಡದಿಂದ ಇನ್ನೂ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

ರಚಿತಾ ರಾಮ್‍, ಕನ್ನಡದಲ್ಲಿ ಒಂದು ಯಶಸ್ಸು ನೋಡದೆ ಕೆಲವು ವರ್ಷಗಳೇ ಆಗಿವೆ. ಇತ್ತೀಚೆಗೆ ಬಿಡುಗಡೆಯಾಗಿರುವ ರಚಿತಾ ಅಭಿನಯದ ‘ಮ್ಯಾಟ್ನಿ’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’, ‘ಏಕ್‍ ಲವ್‍ ಯಾ’, ‘ಮಾನ್ಸೂನ್‍ ರಾಗ’, ‘ಲವ್‍ ಯೂ ರಚ್ಚು’, ‘ಆಯುಷ್ಮಾನ್‍ ಭವ’ ಸೇರಿದಂತೆ ಯಾವೊಂದು ಚಿತ್ರ ಸಹ ಯಶಸ್ವಿಯಾಗಿಲ್ಲ. ಸದ್ಯ ರಚಿತಾ, ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ನಟಿಸಿದ್ದು, ಅದರ ಬಿಡುಗಡೆಗೆ ಕಾದಿದ್ದಾರೆ. ಅದು ತಮಗೆ ದೊಡ್ಡ ಬ್ರೇಕ್‍ ನೀಡಬಹುದು ಎಂಬ ನಿರೀಕ್ಷೆಯಲ್ಲಲಿದ್ದಾರೆ.

ರಚಿತಾ ಈ ಹಿಂದೆ ‘ಸೂಪರ್‍ ಮಚ್ಚಿ’ ಎಂಬ ತೆಲುಗು ಚಿತ್ರದಲ್ಲಿ ನಟಿಸಿದ್ದರು. ಚಿರಂಜೀವಿ ಅವರ ಮಾಜಿ ಅಳಿಯ ಕಲ್ಯಾಣ್‍ ದೇವ್‍ಗೆ ನಾಯಕಿಯಾಗಿ ನಟಿಸಿದ್ದರು. ಆದರೆ, ಚಿತ್ರ ಸೋತು, ರಚಿತಾ ನಿರೀಕ್ಷೆ ನುಚ್ಚುನೂರಾಯಿತು. ಈಗ ಅವರು ತಮಿಳು ಚಿತ್ರದಲ್ಲಿ, ಅದರಲ್ಲೂ ರಜನಿಕಾಂತ್‍ ಅಭಿನಯದ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್ ಮತ್ತು ಉಪೇಂದ್ರ ಜೊತೆಗೆ ಶ್ರುತಿ ಹಾಸನ್, ಸತ್ಯರಾಜ್‍, ಮಹೇಂದ್ರನ್‍ ಮುಂತಾದವರು ನಟಿಸುತ್ತಿದ್ದಾರೆ. ಲೋಕೇಶ್ ಕನಕರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಸನ್‍ ಪಿಕ್ಚರ್ಸ್ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಈ ಹಿಂದೆ ಸನ್‍ ಪಿಕ್ಚರ್ಸ್ ಸಂಸ್ಥೆಯು ರಜನಿಕಾಂತ್ ಅವರ ‘ಜೈಲರ್‍’ ಮತ್ತು ‘ಅಣ್ಣಾತ್ತೆ’ ಚಿತ್ರಗಳನ್ನು ಸಹ ನಿರ್ಮಿಸಿತ್ತು. ಈ ಚಿತ್ರಕ್ಕೆ ಅನಿರ್ಉದ್ಧ್ ರವಿಚಂದರ್‍ ಸಂಗೀತವಿದೆ.

ಭೂಮಿಕಾ

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

6 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

6 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

6 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

7 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

7 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

7 hours ago