ಮನರಂಜನೆ

ನಾಗಶೇಖರ್‍ ನೀಡಿದ ಹೇಳಿಕೆಗಳಿಂದ ನೋವಾಗಿದೆ ಎಂದ ರಚಿತಾ ರಾಮ್‍

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರದ ಕುರಿತು ರಚಿತಾ ರಾಮ್‍ ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ನಿರ್ದೇಶಕ ನಾಗಶೇಖರ್‍, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲ, ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

ಈ ಕುರಿತು ರಚಿತಾ ರಾಮ್‍ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಶುಕ್ರವಾರ ಸೋಷಿಯಲ್‍ ಮೀಡಿಯಾದಲ್ಲಿ ವೀಡಿಯೋ ಬಿಡುಗಡೆ ಮಾಡಿರುವ ರಚಿತಾ, ಮೊದಲ ಬಾರಿಗೆ ರಚಿತಾ ಮೌನ ಮುರಿದಿದ್ದಾರೆ. ಈ ವೀಡಿಯೋದಲ್ಲಿ ತಮ್ಮ ಮೇಲಿನ ಎಲ್ಲಾ ಆರೋಪಗಳಿಗೆ ಉತ್ತರ ನೀಡಿದ್ದಾರೆ.

ನಾಗಶೇಖರ್‍ ಆರೋಪಗಳಿಂದ ತಮಗೆ ತುಂಬಾ ನೋವಾಗಿದೆ ಎಂದಿರುವ ರಚಿತಾ, ಆ ಚಿತ್ರದ ನಿರ್ದೇಶಕರು, ನಿರ್ಮಾಪಕರು ಹಾಗೂ ಹೀರೋ ಇತ್ತೀಚೆಗೆ ಕೆಲವು ಸಂದರ್ಶನಗಳಲ್ಲಿ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅವರು ಬಳಸಿದ ಪದಗಳಿಂದ ನನಗೆ ತುಂಬ ನೋವಾಗಿದೆ. ಇದೇ ತಂಡದ ಜೊತೆ ನಾನು ಸುಮಾರು ಒಂದು ಮುಕ್ಕಾಲು ವರ್ಷ ಸಿನಿಮಾ ಮಾಡಿದ್ದೇನೆ. ಚಿತ್ರದ ಮೊದಲ ಬಿಡುಗಡೆಗೂ ಮೊದಲು ನಡೆದ ಪತ್ರಿಕಾಗೋಷ್ಠಿಗಳಲ್ಲಿ ನನ್ನ ಬದ್ಧತೆ ಮತ್ತು ನಟನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದೇ ನನ್ನ ತಂಡ ಇಂದು ನನ್ನ ಬಗ್ಗೆ ತುಂಬ ಕೆಟ್ಟದಾಗಿ ಮಾತನಾಡುತ್ತಿದೆ. ಈ ಮಾತನ್ನು ಅಂದೇ ಆಡಬೇಕಿತ್ತು. ಅಂದು ಯಾಕೆ ಹೊಗಳಿದರು? ಈಗ ಯಾಕೆ ಈ ರೀತಿ ಮಾತನಾಡುತ್ತಿದ್ದಾರೆ?’ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಈ ಚಿತ್ರಕ್ಕೆ ಇವರೇ ನಾಯಕಿ, ನಿರ್ಮಾಪಕಿ, ನಿರ್ದೇಶಕಿ, ಸಾಹಸ ನಿರ್ದೇಶಕಿ …

‘ಸಂಜು ವೆಡ್ಸ್ ಗೀತಾ 2’ ಚಿತ್ರೀಕರಣ ಮಾಡುವಾಗ, ಇನ್ನೊಂದು ಚಿತ್ರದ ಪ್ರಚಾರಕ್ಕೆ ಹೋಗುವುದಕ್ಕೆ ಚಿತ್ರತಂಡದವರು ಬಿಟ್ಟಿರಲಿಲ್ಲ ಎಂದು ಆರೋಪಿಸಿರುವ ರಚಿತಾ, ‘’ಸಂಜು ವೆಡ್ಸ್ ಗೀತಾ 2’ ಚಿತ್ರೀಕರಣದಲ್ಲಿ ಭಾಗವಹಿಸುವ ಸಂದರ್ಭದಲ್ಲಿ ನನ್ನ ಇನ್ನೊಂದು ಚಿತ್ರ ಬಿಡುಗಡೆಗೆ ಸಿದ್ಧವಿತ್ತು. ಆ ಚಿತ್ರದ ಪ್ರಚಾರಕ್ಕೆ ಹೋಗುವುದಕ್ಕೆ ಈ ತಂಡದವರು ಬಿಟ್ಟಿರಲಿಲ್ಲ. ಒಂದು ದಿನ ಪ್ರಚಾರಕ್ಕೆ ಹೋಗಲು ನಾಗಶೇಖರ್‍ ಮತ್ತು ಕಿಟ್ಟಿ ಅವರಲ್ಲಿ ಕೇಳಿಕೊಂಡರೂ, ನನಗೆ ಪ್ರಮೋಷನ್ಗೆ ಹೋಗಲು ಬಿಡಲಿಲ್ಲ’ ಎಂದಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಮಾಡಬೇಕಾಗಿದ್ದನ್ನು ಸಂಪೂರ್ಣವಾಗಿ ಮಾಡಿದ್ದೇನೆ ಎನ್ನುವ ರಚಿತಾ, ‘ನನ್ನ ಇನ್ನೊಂದು ಚಿತ್ರದ ಚಿತ್ರೀಕರಣ ನಡೆಯುತ್ತಿರುವುದರಿಂದ ಆದ್ಯತೆ ನೀಡಬೇಕಿದೆ. ಈ ವಿಷಯದಲ್ಲಿ ನಾನು ತಪ್ಪು ಮಾಡಿದ್ದೇನೆ ಅಂತ ನನಗೆ ಅನಿಸುತ್ತಿಲ್ಲ. ರೀ-ರಿಲೀಸ್ ಸಮಯದಲ್ಲಿ ಪ್ರಚಾರದಲ್ಲಿ ಭಾಗವಹಿಸಲು ಆಗದೇ ಇದ್ದುದರಿಂದ ಹೋಗೋದಕ್ಕೆ ಸಾಧ್ಯವಾಗದ ಕಾರಣ, ನಾನು ಇನ್‍ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ್ದೆ. ರೀಲ್ಸ್ ಕೂಡ ಮಾಡಿದ್ದೆ’ ಎಂದಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡದವರ ಬಳಿ ಕ್ಷಮೆ ಕ್ಷಮೆ ಕೇಳುವುದಿಲ್ಲ ಎಂದಿರುವ ರಚಿತಾ, ‘ನಾನು ತಪ್ಪು ಮಾಡಿದ್ದರೆ, ಚಿಕ್ಕ ಮಕ್ಕಳಿಗೂ ಕಾಲಿಗೆ ಬೀಳುತ್ತೇನೆ. ಇಲ್ಲ ಅಂದರೆ ದೇವರು ಬಂದರೂ ಕ್ಷಮೆ ಕೇಳಲ್ಲ. ನನ್ನ ಅಭಿಮಾನಿಗಳಿಗೆ ನೋವಾಗಿದ್ದರೆ ನಾನು ಅವರಲ್ಲಿ ಮಾತ್ರ ಕ್ಷಮೆ ಕೇಳುತ್ತೇನೆ, ಬೇರೆಯವರಿಗೆ ಕೇಳುವುದಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago