ಮನರಂಜನೆ

ನಾಗಶೇಖರ್‍ ನೀಡಿದ ಹೇಳಿಕೆಗಳಿಂದ ನೋವಾಗಿದೆ ಎಂದ ರಚಿತಾ ರಾಮ್‍

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರದ ಕುರಿತು ರಚಿತಾ ರಾಮ್‍ ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ನಿರ್ದೇಶಕ ನಾಗಶೇಖರ್‍, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲ, ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

ಈ ಕುರಿತು ರಚಿತಾ ರಾಮ್‍ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಶುಕ್ರವಾರ ಸೋಷಿಯಲ್‍ ಮೀಡಿಯಾದಲ್ಲಿ ವೀಡಿಯೋ ಬಿಡುಗಡೆ ಮಾಡಿರುವ ರಚಿತಾ, ಮೊದಲ ಬಾರಿಗೆ ರಚಿತಾ ಮೌನ ಮುರಿದಿದ್ದಾರೆ. ಈ ವೀಡಿಯೋದಲ್ಲಿ ತಮ್ಮ ಮೇಲಿನ ಎಲ್ಲಾ ಆರೋಪಗಳಿಗೆ ಉತ್ತರ ನೀಡಿದ್ದಾರೆ.

ನಾಗಶೇಖರ್‍ ಆರೋಪಗಳಿಂದ ತಮಗೆ ತುಂಬಾ ನೋವಾಗಿದೆ ಎಂದಿರುವ ರಚಿತಾ, ಆ ಚಿತ್ರದ ನಿರ್ದೇಶಕರು, ನಿರ್ಮಾಪಕರು ಹಾಗೂ ಹೀರೋ ಇತ್ತೀಚೆಗೆ ಕೆಲವು ಸಂದರ್ಶನಗಳಲ್ಲಿ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅವರು ಬಳಸಿದ ಪದಗಳಿಂದ ನನಗೆ ತುಂಬ ನೋವಾಗಿದೆ. ಇದೇ ತಂಡದ ಜೊತೆ ನಾನು ಸುಮಾರು ಒಂದು ಮುಕ್ಕಾಲು ವರ್ಷ ಸಿನಿಮಾ ಮಾಡಿದ್ದೇನೆ. ಚಿತ್ರದ ಮೊದಲ ಬಿಡುಗಡೆಗೂ ಮೊದಲು ನಡೆದ ಪತ್ರಿಕಾಗೋಷ್ಠಿಗಳಲ್ಲಿ ನನ್ನ ಬದ್ಧತೆ ಮತ್ತು ನಟನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದೇ ನನ್ನ ತಂಡ ಇಂದು ನನ್ನ ಬಗ್ಗೆ ತುಂಬ ಕೆಟ್ಟದಾಗಿ ಮಾತನಾಡುತ್ತಿದೆ. ಈ ಮಾತನ್ನು ಅಂದೇ ಆಡಬೇಕಿತ್ತು. ಅಂದು ಯಾಕೆ ಹೊಗಳಿದರು? ಈಗ ಯಾಕೆ ಈ ರೀತಿ ಮಾತನಾಡುತ್ತಿದ್ದಾರೆ?’ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಈ ಚಿತ್ರಕ್ಕೆ ಇವರೇ ನಾಯಕಿ, ನಿರ್ಮಾಪಕಿ, ನಿರ್ದೇಶಕಿ, ಸಾಹಸ ನಿರ್ದೇಶಕಿ …

‘ಸಂಜು ವೆಡ್ಸ್ ಗೀತಾ 2’ ಚಿತ್ರೀಕರಣ ಮಾಡುವಾಗ, ಇನ್ನೊಂದು ಚಿತ್ರದ ಪ್ರಚಾರಕ್ಕೆ ಹೋಗುವುದಕ್ಕೆ ಚಿತ್ರತಂಡದವರು ಬಿಟ್ಟಿರಲಿಲ್ಲ ಎಂದು ಆರೋಪಿಸಿರುವ ರಚಿತಾ, ‘’ಸಂಜು ವೆಡ್ಸ್ ಗೀತಾ 2’ ಚಿತ್ರೀಕರಣದಲ್ಲಿ ಭಾಗವಹಿಸುವ ಸಂದರ್ಭದಲ್ಲಿ ನನ್ನ ಇನ್ನೊಂದು ಚಿತ್ರ ಬಿಡುಗಡೆಗೆ ಸಿದ್ಧವಿತ್ತು. ಆ ಚಿತ್ರದ ಪ್ರಚಾರಕ್ಕೆ ಹೋಗುವುದಕ್ಕೆ ಈ ತಂಡದವರು ಬಿಟ್ಟಿರಲಿಲ್ಲ. ಒಂದು ದಿನ ಪ್ರಚಾರಕ್ಕೆ ಹೋಗಲು ನಾಗಶೇಖರ್‍ ಮತ್ತು ಕಿಟ್ಟಿ ಅವರಲ್ಲಿ ಕೇಳಿಕೊಂಡರೂ, ನನಗೆ ಪ್ರಮೋಷನ್ಗೆ ಹೋಗಲು ಬಿಡಲಿಲ್ಲ’ ಎಂದಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆ ಮಾಡಬೇಕಾಗಿದ್ದನ್ನು ಸಂಪೂರ್ಣವಾಗಿ ಮಾಡಿದ್ದೇನೆ ಎನ್ನುವ ರಚಿತಾ, ‘ನನ್ನ ಇನ್ನೊಂದು ಚಿತ್ರದ ಚಿತ್ರೀಕರಣ ನಡೆಯುತ್ತಿರುವುದರಿಂದ ಆದ್ಯತೆ ನೀಡಬೇಕಿದೆ. ಈ ವಿಷಯದಲ್ಲಿ ನಾನು ತಪ್ಪು ಮಾಡಿದ್ದೇನೆ ಅಂತ ನನಗೆ ಅನಿಸುತ್ತಿಲ್ಲ. ರೀ-ರಿಲೀಸ್ ಸಮಯದಲ್ಲಿ ಪ್ರಚಾರದಲ್ಲಿ ಭಾಗವಹಿಸಲು ಆಗದೇ ಇದ್ದುದರಿಂದ ಹೋಗೋದಕ್ಕೆ ಸಾಧ್ಯವಾಗದ ಕಾರಣ, ನಾನು ಇನ್‍ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ್ದೆ. ರೀಲ್ಸ್ ಕೂಡ ಮಾಡಿದ್ದೆ’ ಎಂದಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡದವರ ಬಳಿ ಕ್ಷಮೆ ಕ್ಷಮೆ ಕೇಳುವುದಿಲ್ಲ ಎಂದಿರುವ ರಚಿತಾ, ‘ನಾನು ತಪ್ಪು ಮಾಡಿದ್ದರೆ, ಚಿಕ್ಕ ಮಕ್ಕಳಿಗೂ ಕಾಲಿಗೆ ಬೀಳುತ್ತೇನೆ. ಇಲ್ಲ ಅಂದರೆ ದೇವರು ಬಂದರೂ ಕ್ಷಮೆ ಕೇಳಲ್ಲ. ನನ್ನ ಅಭಿಮಾನಿಗಳಿಗೆ ನೋವಾಗಿದ್ದರೆ ನಾನು ಅವರಲ್ಲಿ ಮಾತ್ರ ಕ್ಷಮೆ ಕೇಳುತ್ತೇನೆ, ಬೇರೆಯವರಿಗೆ ಕೇಳುವುದಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

53 mins ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

1 hour ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

2 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

2 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

3 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

3 hours ago