nanu matu gunda
ನಾಯಿ ಮತ್ತು ಅದರ ಮಾಲೀಕನ ನಡುವಿನ ಅವಿನಾಭಾವ ಸಂಬಂಧದ ಕಥೆಯಿದ್ದ ಚಿತ್ರ ‘ನಾನು ಮತ್ತು ಗುಂಡ’ ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಶಿವರಾಜ್ ಕೆ.ಆರ್.ಪೇಟೆ ನಾಯಕನಾಗಿ ನಟಿಸಿದ ಆ ಚಿತ್ರವನ್ನು ರಘು ಹಾಸನ್ ನಿರ್ಮಿಸಿದ್ದರು. ಈಗ ರಘು, ‘ನಾನು ಮತ್ತು ಗುಂಡ’ ಚಿತ್ರದ ಮುಂದುವರೆದ ಭಾಗವಾದ ‘ನಾನು ಮತ್ತು ಗುಂಡ 2’ ಚಿತ್ರ ನಿರ್ಮಿಸಿ-ನಿರ್ದೇಶಿಸಿದ್ದು, ಆ ಚಿತ್ರವೀಗ ಸೆಪ್ಟೆಂಬರ್ 5ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅದಕ್ಕೂ ಮೊದಲು ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರ ಪ್ರಸಾದ್ ರಚಿಸಿ, ವಿಜಯಪ್ರಕಾಶ್ ಹಾಡಿರುವ ‘ಓಂ ಶಿವಾಯ, ನಮೋ ಶಿವಾಯ…’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಕೇಶ್ ಆಡಿಗ ಮತ್ತು ರಚನಾ ಇಂದರ್ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ರಘು ಹಾಸನ್, ‘ಹೊಡಿಬಡಿ ಕಥೆಗಳನ್ನು ಬಿಟ್ಟು ಭಾವನಾತ್ಮಕವಾಗಿ ಏನಾದರೂ ಮಾಡಬೇಕೆಂದಾಗ ಹುಟ್ಟಿದ್ದೇ ಗುಂಡನ ಕಥೆ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ ಸೂಚಿಸದೆ ‘ಯು/ಎ’ ಕೊಟ್ಟಿದೆ. ಮೊದಲ ಚಿತ್ರದಲ್ಲಿ ಶಂಕರ ನಿಧನನಾದ ಮೇಲೆ ಆತನ ಮಗನಿಂದ ಕಥೆ ಮುಂದುರೆಯುತ್ತದೆ. ರಾಕೇಶ್ ಅಡಿಗ, ಶಂಕರನ ಮಗನಾಗಿ ನಟಿಸಿದ್ದು, ಆತನಿಗೆ ನಾಯಿಯೇ ಪ್ರಪಂಚ. ಸಾಮಾಜಿಕ ಕಳಕಳಿ ಜೊತೆಗೆ ದೈವಿಕ ಅಂಶಗಳಿರುವ ಈ ಚಿತ್ರಕ್ಕೆ ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು, ಬೆಂಗಳುರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ’ ಎಂದರು.
‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದು, ತನ್ವಿಕ್ ಛಾಯಾಗ್ರಹಣ ಮಾಡಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…