nanu matu gunda
ನಾಯಿ ಮತ್ತು ಅದರ ಮಾಲೀಕನ ನಡುವಿನ ಅವಿನಾಭಾವ ಸಂಬಂಧದ ಕಥೆಯಿದ್ದ ಚಿತ್ರ ‘ನಾನು ಮತ್ತು ಗುಂಡ’ ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಶಿವರಾಜ್ ಕೆ.ಆರ್.ಪೇಟೆ ನಾಯಕನಾಗಿ ನಟಿಸಿದ ಆ ಚಿತ್ರವನ್ನು ರಘು ಹಾಸನ್ ನಿರ್ಮಿಸಿದ್ದರು. ಈಗ ರಘು, ‘ನಾನು ಮತ್ತು ಗುಂಡ’ ಚಿತ್ರದ ಮುಂದುವರೆದ ಭಾಗವಾದ ‘ನಾನು ಮತ್ತು ಗುಂಡ 2’ ಚಿತ್ರ ನಿರ್ಮಿಸಿ-ನಿರ್ದೇಶಿಸಿದ್ದು, ಆ ಚಿತ್ರವೀಗ ಸೆಪ್ಟೆಂಬರ್ 5ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಅದಕ್ಕೂ ಮೊದಲು ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರ ಪ್ರಸಾದ್ ರಚಿಸಿ, ವಿಜಯಪ್ರಕಾಶ್ ಹಾಡಿರುವ ‘ಓಂ ಶಿವಾಯ, ನಮೋ ಶಿವಾಯ…’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಕೇಶ್ ಆಡಿಗ ಮತ್ತು ರಚನಾ ಇಂದರ್ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ರಘು ಹಾಸನ್, ‘ಹೊಡಿಬಡಿ ಕಥೆಗಳನ್ನು ಬಿಟ್ಟು ಭಾವನಾತ್ಮಕವಾಗಿ ಏನಾದರೂ ಮಾಡಬೇಕೆಂದಾಗ ಹುಟ್ಟಿದ್ದೇ ಗುಂಡನ ಕಥೆ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ ಸೂಚಿಸದೆ ‘ಯು/ಎ’ ಕೊಟ್ಟಿದೆ. ಮೊದಲ ಚಿತ್ರದಲ್ಲಿ ಶಂಕರ ನಿಧನನಾದ ಮೇಲೆ ಆತನ ಮಗನಿಂದ ಕಥೆ ಮುಂದುರೆಯುತ್ತದೆ. ರಾಕೇಶ್ ಅಡಿಗ, ಶಂಕರನ ಮಗನಾಗಿ ನಟಿಸಿದ್ದು, ಆತನಿಗೆ ನಾಯಿಯೇ ಪ್ರಪಂಚ. ಸಾಮಾಜಿಕ ಕಳಕಳಿ ಜೊತೆಗೆ ದೈವಿಕ ಅಂಶಗಳಿರುವ ಈ ಚಿತ್ರಕ್ಕೆ ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು, ಬೆಂಗಳುರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ’ ಎಂದರು.
‘ನಾನು ಮತ್ತು ಗುಂಡ 2’ ಚಿತ್ರಕ್ಕೆ ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದು, ತನ್ವಿಕ್ ಛಾಯಾಗ್ರಹಣ ಮಾಡಿದ್ದಾರೆ.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…