ಮನರಂಜನೆ

‘ಶಾನುಭೋಗರ ಮಗಳಾ’ದ ರಾಗಿಣಿ ಚಂದ್ರನ್‍; ಸದ್ಯದಲ್ಲೇ ಚಿತ್ರ ತೆರೆಗೆ

ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’.

ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ ಮತ್ತು ಇದಕ್ಕೂ ಹಲವು ಕಾದಂಬರಿಗಳನ್ನು ತೆರೆಗೆ ತಂದಿರುವ ಕೋಡ್ಲು, ಇದೀಗ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿಯನ್ನಾಧರಿಸಿ ‘ಶಾನುಭೋಗರ ಮಗಳು’ ಎಂಬ ಚಿತ್ರವನ್ನು ಮಾಡಿದ್ದಾರೆ. ಈ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯು ಇತ್ತೀಚೆಗೆ ವೀಕ್ಷಿಸಿದ್ದು, ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರವನ್ನು ನೀಡಿದೆ.

ಇದೊಂದು ಪೀರಿಯಡ್‍ ಚಿತ್ರವಾಗಿದ್ದು, ಟಿಪ್ಪು ಸುಲ್ತಾನ್‍ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಈ ಚಿತ್ರದಲ್ಲಿ ‘ಶಾನುಭೋಗರ ಮಗಳಾಗಿ’ ಪ್ರಜ್ವಲ್‍ ಪತ್ನಿ ರಾಗಿಣಿ ಚಂದ್ರನ್‍ ಅಭಿನಯಿಸಿದ್ದಾರೆ. ಈ ಹಿಂದೆ ರಾಗಿಣಿ, ಪುನೀತ್‍ ರಾಜಕುಮಾರ್‍ ನಿರ್ಮಾಣದ ‘ಲಾ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರ ನೇರವಾಗಿ ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾಗಿತ್ತು. ಈಗ ‘ಶಾನುಭೋಗರ ಮಗಳು’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಇನ್ನು, ನಟ ಕಿಶೋರ್ ಈ ಚಿತ್ರದಲ್ಲಿ ಟಿಪ್ಪು ಸುಲ್ತಾನ್‍ ಆಗಿ ಕಾಣಿಸಿಕೊಂಡಿರುವುದು ವಿಶೇಷ.

ಬೆಂಗಳೂರು, ಶ್ರೀರಂಗಪಟ್ಟಣ, ಚನ್ನಪಟ್ಟಣ, ಚಿಕ್ಕಬಳ್ಳಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿರುವ ಈ ಚಿತ್ರದಲ್ಲಿ ರಾಗಿಣಿ ಮತ್ತು ಕಿಶೋರ್‍ ಜೊತೆಗೆ ನಿರಂಜನ್ ಶೆಟ್ಟಿ, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ ಮುಂತಾದವರು ನಟಿಸಿದ್ದಾರೆ.

ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ನಿರ್ಮಿಸಿರುವ ಈ ಚಿತ್ರಕ್ಕೆ ಹಿರಿಯ ಸಂಭಾಷಣೆಕಾರ ಬಿ.ಎ. ಮಧು ಸಂಭಾಷಣೆ ರಚಿಸಿದ್ದಾರೆ. ಇನ್ನು, ಚಿತ್ರಕ್ಕೆ ಜೈ ಆನಂದ್‍ ಛಾಯಾಗ್ರಹಣ, ರಮೇಶ್‍ ಕೃಷ್ಣನ್‍ ಸಂಗೀತ ಮತ್ತು ಬಿ.ಎಸ್‍. ಕೆಂಪರಾಜ್‍ ಅವರ ಸಂಕಲನವಿದೆ.

ಭೂಮಿಕಾ

Recent Posts

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

46 seconds ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

14 mins ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

38 mins ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

42 mins ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

55 mins ago

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

3 hours ago