ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’.
ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ ಮತ್ತು ಇದಕ್ಕೂ ಹಲವು ಕಾದಂಬರಿಗಳನ್ನು ತೆರೆಗೆ ತಂದಿರುವ ಕೋಡ್ಲು, ಇದೀಗ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿಯನ್ನಾಧರಿಸಿ ‘ಶಾನುಭೋಗರ ಮಗಳು’ ಎಂಬ ಚಿತ್ರವನ್ನು ಮಾಡಿದ್ದಾರೆ. ಈ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯು ಇತ್ತೀಚೆಗೆ ವೀಕ್ಷಿಸಿದ್ದು, ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರವನ್ನು ನೀಡಿದೆ.
ಇದೊಂದು ಪೀರಿಯಡ್ ಚಿತ್ರವಾಗಿದ್ದು, ಟಿಪ್ಪು ಸುಲ್ತಾನ್ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಈ ಚಿತ್ರದಲ್ಲಿ ‘ಶಾನುಭೋಗರ ಮಗಳಾಗಿ’ ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಅಭಿನಯಿಸಿದ್ದಾರೆ. ಈ ಹಿಂದೆ ರಾಗಿಣಿ, ಪುನೀತ್ ರಾಜಕುಮಾರ್ ನಿರ್ಮಾಣದ ‘ಲಾ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರ ನೇರವಾಗಿ ಅಮೇಜಾನ್ ಪ್ರೈಮ್ನಲ್ಲಿ ಬಿಡುಗಡೆಯಾಗಿತ್ತು. ಈಗ ‘ಶಾನುಭೋಗರ ಮಗಳು’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಇನ್ನು, ನಟ ಕಿಶೋರ್ ಈ ಚಿತ್ರದಲ್ಲಿ ಟಿಪ್ಪು ಸುಲ್ತಾನ್ ಆಗಿ ಕಾಣಿಸಿಕೊಂಡಿರುವುದು ವಿಶೇಷ.
ಬೆಂಗಳೂರು, ಶ್ರೀರಂಗಪಟ್ಟಣ, ಚನ್ನಪಟ್ಟಣ, ಚಿಕ್ಕಬಳ್ಳಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿರುವ ಈ ಚಿತ್ರದಲ್ಲಿ ರಾಗಿಣಿ ಮತ್ತು ಕಿಶೋರ್ ಜೊತೆಗೆ ನಿರಂಜನ್ ಶೆಟ್ಟಿ, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ ಮುಂತಾದವರು ನಟಿಸಿದ್ದಾರೆ.
ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ನಿರ್ಮಿಸಿರುವ ಈ ಚಿತ್ರಕ್ಕೆ ಹಿರಿಯ ಸಂಭಾಷಣೆಕಾರ ಬಿ.ಎ. ಮಧು ಸಂಭಾಷಣೆ ರಚಿಸಿದ್ದಾರೆ. ಇನ್ನು, ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ರಮೇಶ್ ಕೃಷ್ಣನ್ ಸಂಗೀತ ಮತ್ತು ಬಿ.ಎಸ್. ಕೆಂಪರಾಜ್ ಅವರ ಸಂಕಲನವಿದೆ.
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…
ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್…
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್ ರದ್ದುಗೊಳಿಸಿದ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…