ಮನರಂಜನೆ

‘ಶಾನುಭೋಗರ ಮಗಳಾ’ದ ರಾಗಿಣಿ ಚಂದ್ರನ್‍; ಸದ್ಯದಲ್ಲೇ ಚಿತ್ರ ತೆರೆಗೆ

ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’.

ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ ಮತ್ತು ಇದಕ್ಕೂ ಹಲವು ಕಾದಂಬರಿಗಳನ್ನು ತೆರೆಗೆ ತಂದಿರುವ ಕೋಡ್ಲು, ಇದೀಗ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿಯನ್ನಾಧರಿಸಿ ‘ಶಾನುಭೋಗರ ಮಗಳು’ ಎಂಬ ಚಿತ್ರವನ್ನು ಮಾಡಿದ್ದಾರೆ. ಈ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯು ಇತ್ತೀಚೆಗೆ ವೀಕ್ಷಿಸಿದ್ದು, ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರವನ್ನು ನೀಡಿದೆ.

ಇದೊಂದು ಪೀರಿಯಡ್‍ ಚಿತ್ರವಾಗಿದ್ದು, ಟಿಪ್ಪು ಸುಲ್ತಾನ್‍ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಈ ಚಿತ್ರದಲ್ಲಿ ‘ಶಾನುಭೋಗರ ಮಗಳಾಗಿ’ ಪ್ರಜ್ವಲ್‍ ಪತ್ನಿ ರಾಗಿಣಿ ಚಂದ್ರನ್‍ ಅಭಿನಯಿಸಿದ್ದಾರೆ. ಈ ಹಿಂದೆ ರಾಗಿಣಿ, ಪುನೀತ್‍ ರಾಜಕುಮಾರ್‍ ನಿರ್ಮಾಣದ ‘ಲಾ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರ ನೇರವಾಗಿ ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾಗಿತ್ತು. ಈಗ ‘ಶಾನುಭೋಗರ ಮಗಳು’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಇನ್ನು, ನಟ ಕಿಶೋರ್ ಈ ಚಿತ್ರದಲ್ಲಿ ಟಿಪ್ಪು ಸುಲ್ತಾನ್‍ ಆಗಿ ಕಾಣಿಸಿಕೊಂಡಿರುವುದು ವಿಶೇಷ.

ಬೆಂಗಳೂರು, ಶ್ರೀರಂಗಪಟ್ಟಣ, ಚನ್ನಪಟ್ಟಣ, ಚಿಕ್ಕಬಳ್ಳಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿರುವ ಈ ಚಿತ್ರದಲ್ಲಿ ರಾಗಿಣಿ ಮತ್ತು ಕಿಶೋರ್‍ ಜೊತೆಗೆ ನಿರಂಜನ್ ಶೆಟ್ಟಿ, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ ಮುಂತಾದವರು ನಟಿಸಿದ್ದಾರೆ.

ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ನಿರ್ಮಿಸಿರುವ ಈ ಚಿತ್ರಕ್ಕೆ ಹಿರಿಯ ಸಂಭಾಷಣೆಕಾರ ಬಿ.ಎ. ಮಧು ಸಂಭಾಷಣೆ ರಚಿಸಿದ್ದಾರೆ. ಇನ್ನು, ಚಿತ್ರಕ್ಕೆ ಜೈ ಆನಂದ್‍ ಛಾಯಾಗ್ರಹಣ, ರಮೇಶ್‍ ಕೃಷ್ಣನ್‍ ಸಂಗೀತ ಮತ್ತು ಬಿ.ಎಸ್‍. ಕೆಂಪರಾಜ್‍ ಅವರ ಸಂಕಲನವಿದೆ.

ಭೂಮಿಕಾ

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

3 hours ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

3 hours ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

3 hours ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

3 hours ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

3 hours ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

3 hours ago