ಮನರಂಜನೆ

‘ಶಾನುಭೋಗರ ಮಗಳಾ’ದ ರಾಗಿಣಿ ಚಂದ್ರನ್‍; ಸದ್ಯದಲ್ಲೇ ಚಿತ್ರ ತೆರೆಗೆ

ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’.

ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ ಮತ್ತು ಇದಕ್ಕೂ ಹಲವು ಕಾದಂಬರಿಗಳನ್ನು ತೆರೆಗೆ ತಂದಿರುವ ಕೋಡ್ಲು, ಇದೀಗ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿಯನ್ನಾಧರಿಸಿ ‘ಶಾನುಭೋಗರ ಮಗಳು’ ಎಂಬ ಚಿತ್ರವನ್ನು ಮಾಡಿದ್ದಾರೆ. ಈ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯು ಇತ್ತೀಚೆಗೆ ವೀಕ್ಷಿಸಿದ್ದು, ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರವನ್ನು ನೀಡಿದೆ.

ಇದೊಂದು ಪೀರಿಯಡ್‍ ಚಿತ್ರವಾಗಿದ್ದು, ಟಿಪ್ಪು ಸುಲ್ತಾನ್‍ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಈ ಚಿತ್ರದಲ್ಲಿ ‘ಶಾನುಭೋಗರ ಮಗಳಾಗಿ’ ಪ್ರಜ್ವಲ್‍ ಪತ್ನಿ ರಾಗಿಣಿ ಚಂದ್ರನ್‍ ಅಭಿನಯಿಸಿದ್ದಾರೆ. ಈ ಹಿಂದೆ ರಾಗಿಣಿ, ಪುನೀತ್‍ ರಾಜಕುಮಾರ್‍ ನಿರ್ಮಾಣದ ‘ಲಾ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರ ನೇರವಾಗಿ ಅಮೇಜಾನ್‍ ಪ್ರೈಮ್‍ನಲ್ಲಿ ಬಿಡುಗಡೆಯಾಗಿತ್ತು. ಈಗ ‘ಶಾನುಭೋಗರ ಮಗಳು’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಇನ್ನು, ನಟ ಕಿಶೋರ್ ಈ ಚಿತ್ರದಲ್ಲಿ ಟಿಪ್ಪು ಸುಲ್ತಾನ್‍ ಆಗಿ ಕಾಣಿಸಿಕೊಂಡಿರುವುದು ವಿಶೇಷ.

ಬೆಂಗಳೂರು, ಶ್ರೀರಂಗಪಟ್ಟಣ, ಚನ್ನಪಟ್ಟಣ, ಚಿಕ್ಕಬಳ್ಳಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿರುವ ಈ ಚಿತ್ರದಲ್ಲಿ ರಾಗಿಣಿ ಮತ್ತು ಕಿಶೋರ್‍ ಜೊತೆಗೆ ನಿರಂಜನ್ ಶೆಟ್ಟಿ, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ ಮುಂತಾದವರು ನಟಿಸಿದ್ದಾರೆ.

ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ನಿರ್ಮಿಸಿರುವ ಈ ಚಿತ್ರಕ್ಕೆ ಹಿರಿಯ ಸಂಭಾಷಣೆಕಾರ ಬಿ.ಎ. ಮಧು ಸಂಭಾಷಣೆ ರಚಿಸಿದ್ದಾರೆ. ಇನ್ನು, ಚಿತ್ರಕ್ಕೆ ಜೈ ಆನಂದ್‍ ಛಾಯಾಗ್ರಹಣ, ರಮೇಶ್‍ ಕೃಷ್ಣನ್‍ ಸಂಗೀತ ಮತ್ತು ಬಿ.ಎಸ್‍. ಕೆಂಪರಾಜ್‍ ಅವರ ಸಂಕಲನವಿದೆ.

ಭೂಮಿಕಾ

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

20 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago