ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’.
ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ ಮತ್ತು ಇದಕ್ಕೂ ಹಲವು ಕಾದಂಬರಿಗಳನ್ನು ತೆರೆಗೆ ತಂದಿರುವ ಕೋಡ್ಲು, ಇದೀಗ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿಯನ್ನಾಧರಿಸಿ ‘ಶಾನುಭೋಗರ ಮಗಳು’ ಎಂಬ ಚಿತ್ರವನ್ನು ಮಾಡಿದ್ದಾರೆ. ಈ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯು ಇತ್ತೀಚೆಗೆ ವೀಕ್ಷಿಸಿದ್ದು, ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರವನ್ನು ನೀಡಿದೆ.
ಇದೊಂದು ಪೀರಿಯಡ್ ಚಿತ್ರವಾಗಿದ್ದು, ಟಿಪ್ಪು ಸುಲ್ತಾನ್ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಈ ಚಿತ್ರದಲ್ಲಿ ‘ಶಾನುಭೋಗರ ಮಗಳಾಗಿ’ ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಅಭಿನಯಿಸಿದ್ದಾರೆ. ಈ ಹಿಂದೆ ರಾಗಿಣಿ, ಪುನೀತ್ ರಾಜಕುಮಾರ್ ನಿರ್ಮಾಣದ ‘ಲಾ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರ ನೇರವಾಗಿ ಅಮೇಜಾನ್ ಪ್ರೈಮ್ನಲ್ಲಿ ಬಿಡುಗಡೆಯಾಗಿತ್ತು. ಈಗ ‘ಶಾನುಭೋಗರ ಮಗಳು’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಇನ್ನು, ನಟ ಕಿಶೋರ್ ಈ ಚಿತ್ರದಲ್ಲಿ ಟಿಪ್ಪು ಸುಲ್ತಾನ್ ಆಗಿ ಕಾಣಿಸಿಕೊಂಡಿರುವುದು ವಿಶೇಷ.
ಬೆಂಗಳೂರು, ಶ್ರೀರಂಗಪಟ್ಟಣ, ಚನ್ನಪಟ್ಟಣ, ಚಿಕ್ಕಬಳ್ಳಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿರುವ ಈ ಚಿತ್ರದಲ್ಲಿ ರಾಗಿಣಿ ಮತ್ತು ಕಿಶೋರ್ ಜೊತೆಗೆ ನಿರಂಜನ್ ಶೆಟ್ಟಿ, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ ಮುಂತಾದವರು ನಟಿಸಿದ್ದಾರೆ.
ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ನಿರ್ಮಿಸಿರುವ ಈ ಚಿತ್ರಕ್ಕೆ ಹಿರಿಯ ಸಂಭಾಷಣೆಕಾರ ಬಿ.ಎ. ಮಧು ಸಂಭಾಷಣೆ ರಚಿಸಿದ್ದಾರೆ. ಇನ್ನು, ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ರಮೇಶ್ ಕೃಷ್ಣನ್ ಸಂಗೀತ ಮತ್ತು ಬಿ.ಎಸ್. ಕೆಂಪರಾಜ್ ಅವರ ಸಂಕಲನವಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…