ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’.
ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ ಮತ್ತು ಇದಕ್ಕೂ ಹಲವು ಕಾದಂಬರಿಗಳನ್ನು ತೆರೆಗೆ ತಂದಿರುವ ಕೋಡ್ಲು, ಇದೀಗ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿಯನ್ನಾಧರಿಸಿ ‘ಶಾನುಭೋಗರ ಮಗಳು’ ಎಂಬ ಚಿತ್ರವನ್ನು ಮಾಡಿದ್ದಾರೆ. ಈ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯು ಇತ್ತೀಚೆಗೆ ವೀಕ್ಷಿಸಿದ್ದು, ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರವನ್ನು ನೀಡಿದೆ.
ಇದೊಂದು ಪೀರಿಯಡ್ ಚಿತ್ರವಾಗಿದ್ದು, ಟಿಪ್ಪು ಸುಲ್ತಾನ್ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಈ ಚಿತ್ರದಲ್ಲಿ ‘ಶಾನುಭೋಗರ ಮಗಳಾಗಿ’ ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಅಭಿನಯಿಸಿದ್ದಾರೆ. ಈ ಹಿಂದೆ ರಾಗಿಣಿ, ಪುನೀತ್ ರಾಜಕುಮಾರ್ ನಿರ್ಮಾಣದ ‘ಲಾ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರ ನೇರವಾಗಿ ಅಮೇಜಾನ್ ಪ್ರೈಮ್ನಲ್ಲಿ ಬಿಡುಗಡೆಯಾಗಿತ್ತು. ಈಗ ‘ಶಾನುಭೋಗರ ಮಗಳು’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಇನ್ನು, ನಟ ಕಿಶೋರ್ ಈ ಚಿತ್ರದಲ್ಲಿ ಟಿಪ್ಪು ಸುಲ್ತಾನ್ ಆಗಿ ಕಾಣಿಸಿಕೊಂಡಿರುವುದು ವಿಶೇಷ.
ಬೆಂಗಳೂರು, ಶ್ರೀರಂಗಪಟ್ಟಣ, ಚನ್ನಪಟ್ಟಣ, ಚಿಕ್ಕಬಳ್ಳಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿರುವ ಈ ಚಿತ್ರದಲ್ಲಿ ರಾಗಿಣಿ ಮತ್ತು ಕಿಶೋರ್ ಜೊತೆಗೆ ನಿರಂಜನ್ ಶೆಟ್ಟಿ, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ ಮುಂತಾದವರು ನಟಿಸಿದ್ದಾರೆ.
ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ನಿರ್ಮಿಸಿರುವ ಈ ಚಿತ್ರಕ್ಕೆ ಹಿರಿಯ ಸಂಭಾಷಣೆಕಾರ ಬಿ.ಎ. ಮಧು ಸಂಭಾಷಣೆ ರಚಿಸಿದ್ದಾರೆ. ಇನ್ನು, ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ರಮೇಶ್ ಕೃಷ್ಣನ್ ಸಂಗೀತ ಮತ್ತು ಬಿ.ಎಸ್. ಕೆಂಪರಾಜ್ ಅವರ ಸಂಕಲನವಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…