ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇವಲ ಪವಿತ್ರಾ ಗೌಡಗೆ ಮಾತ್ರವಲ್ಲದೇ ಚಂದನವನದ ಇತರೆ ಕೆಲ ನಟಿಯರಿಗೂ ಸಹ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಉಲ್ಲೇಖಿಸಲಾಗಿದೆ.
ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿರುವ ರಾಗಿಣಿ ದ್ವಿವೇದಿ ಹಾಗೂ ಶುಭ ಪೂಂಜಾ ಹೆಸರು ಇಲ್ಲಿ ಕೇಳಿಬಂದಿದೆ. ಹೀಗೆ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಇಬ್ಬರೂ ನಟಿಯರೂ ಪ್ರತಿಕ್ರಿಯೆ ನೀಡಿದ್ದು, ಶುಭ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ʼಮಾಧ್ಯಮ ಮಿತ್ರರೇ, ರೇಣುಕಾಸ್ವಾಮಿ ಪ್ರಕರಣದ ವಿಚಾರವಾಗಿ ಬೆಳಗ್ಗೆಯಿಂದ ಕರೆ ಮಾಡುತ್ತಿದ್ದೀರ ಅಂತಹವರಿಗೆ ಈ ಮೂಲಕ ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಖಾತೆಗೆ ಅಂತಹ ಯಾವುದೇ ಸಂದೇಶವೂ ಬಂದಿಲ್ಲʼ ಎಂದಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗಳ ಜತೆ ಮಾತನಾಡಿರುವ ರಾಗಿಣಿ ದ್ವಿವೇದಿ ʼನನ್ನ ಪ್ರೊಫೈಲ್ ಅನ್ನು ಖಾಸಗಿ ಏಜೆನ್ಸಿಯೊಂದು ನಿರ್ವಹಣೆ ಮಾಡುತ್ತಿದೆ. ಹೀಗಾಗಿ ಅಶ್ಲೀಲ ಸಂದೇಶಗಳು ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅಂತಹ ಸಂದೇಶ ಬಂದರೂ ಸಹ ನಾನು ಓದುವುದಿಲ್ಲ. ನನ್ನ ಗಮನಕ್ಕೆ ಬಂದಂತೆ ಅಂತಹ ಯಾವುದೇ ಕೆಟ್ಟ ಸಂದೇಶವೂ ಬಂದಿಲ್ಲʼ ಎಂದು ಹೇಳಿದ್ದಾರೆ.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…