ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇವಲ ಪವಿತ್ರಾ ಗೌಡಗೆ ಮಾತ್ರವಲ್ಲದೇ ಚಂದನವನದ ಇತರೆ ಕೆಲ ನಟಿಯರಿಗೂ ಸಹ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಉಲ್ಲೇಖಿಸಲಾಗಿದೆ.
ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿರುವ ರಾಗಿಣಿ ದ್ವಿವೇದಿ ಹಾಗೂ ಶುಭ ಪೂಂಜಾ ಹೆಸರು ಇಲ್ಲಿ ಕೇಳಿಬಂದಿದೆ. ಹೀಗೆ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಇಬ್ಬರೂ ನಟಿಯರೂ ಪ್ರತಿಕ್ರಿಯೆ ನೀಡಿದ್ದು, ಶುಭ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ʼಮಾಧ್ಯಮ ಮಿತ್ರರೇ, ರೇಣುಕಾಸ್ವಾಮಿ ಪ್ರಕರಣದ ವಿಚಾರವಾಗಿ ಬೆಳಗ್ಗೆಯಿಂದ ಕರೆ ಮಾಡುತ್ತಿದ್ದೀರ ಅಂತಹವರಿಗೆ ಈ ಮೂಲಕ ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಖಾತೆಗೆ ಅಂತಹ ಯಾವುದೇ ಸಂದೇಶವೂ ಬಂದಿಲ್ಲʼ ಎಂದಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗಳ ಜತೆ ಮಾತನಾಡಿರುವ ರಾಗಿಣಿ ದ್ವಿವೇದಿ ʼನನ್ನ ಪ್ರೊಫೈಲ್ ಅನ್ನು ಖಾಸಗಿ ಏಜೆನ್ಸಿಯೊಂದು ನಿರ್ವಹಣೆ ಮಾಡುತ್ತಿದೆ. ಹೀಗಾಗಿ ಅಶ್ಲೀಲ ಸಂದೇಶಗಳು ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅಂತಹ ಸಂದೇಶ ಬಂದರೂ ಸಹ ನಾನು ಓದುವುದಿಲ್ಲ. ನನ್ನ ಗಮನಕ್ಕೆ ಬಂದಂತೆ ಅಂತಹ ಯಾವುದೇ ಕೆಟ್ಟ ಸಂದೇಶವೂ ಬಂದಿಲ್ಲʼ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…