ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇವಲ ಪವಿತ್ರಾ ಗೌಡಗೆ ಮಾತ್ರವಲ್ಲದೇ ಚಂದನವನದ ಇತರೆ ಕೆಲ ನಟಿಯರಿಗೂ ಸಹ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಉಲ್ಲೇಖಿಸಲಾಗಿದೆ.
ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿರುವ ರಾಗಿಣಿ ದ್ವಿವೇದಿ ಹಾಗೂ ಶುಭ ಪೂಂಜಾ ಹೆಸರು ಇಲ್ಲಿ ಕೇಳಿಬಂದಿದೆ. ಹೀಗೆ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಇಬ್ಬರೂ ನಟಿಯರೂ ಪ್ರತಿಕ್ರಿಯೆ ನೀಡಿದ್ದು, ಶುಭ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ʼಮಾಧ್ಯಮ ಮಿತ್ರರೇ, ರೇಣುಕಾಸ್ವಾಮಿ ಪ್ರಕರಣದ ವಿಚಾರವಾಗಿ ಬೆಳಗ್ಗೆಯಿಂದ ಕರೆ ಮಾಡುತ್ತಿದ್ದೀರ ಅಂತಹವರಿಗೆ ಈ ಮೂಲಕ ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಖಾತೆಗೆ ಅಂತಹ ಯಾವುದೇ ಸಂದೇಶವೂ ಬಂದಿಲ್ಲʼ ಎಂದಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗಳ ಜತೆ ಮಾತನಾಡಿರುವ ರಾಗಿಣಿ ದ್ವಿವೇದಿ ʼನನ್ನ ಪ್ರೊಫೈಲ್ ಅನ್ನು ಖಾಸಗಿ ಏಜೆನ್ಸಿಯೊಂದು ನಿರ್ವಹಣೆ ಮಾಡುತ್ತಿದೆ. ಹೀಗಾಗಿ ಅಶ್ಲೀಲ ಸಂದೇಶಗಳು ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅಂತಹ ಸಂದೇಶ ಬಂದರೂ ಸಹ ನಾನು ಓದುವುದಿಲ್ಲ. ನನ್ನ ಗಮನಕ್ಕೆ ಬಂದಂತೆ ಅಂತಹ ಯಾವುದೇ ಕೆಟ್ಟ ಸಂದೇಶವೂ ಬಂದಿಲ್ಲʼ ಎಂದು ಹೇಳಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…