ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇವಲ ಪವಿತ್ರಾ ಗೌಡಗೆ ಮಾತ್ರವಲ್ಲದೇ ಚಂದನವನದ ಇತರೆ ಕೆಲ ನಟಿಯರಿಗೂ ಸಹ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಉಲ್ಲೇಖಿಸಲಾಗಿದೆ.
ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಹೆಸರು ಮಾಡಿರುವ ರಾಗಿಣಿ ದ್ವಿವೇದಿ ಹಾಗೂ ಶುಭ ಪೂಂಜಾ ಹೆಸರು ಇಲ್ಲಿ ಕೇಳಿಬಂದಿದೆ. ಹೀಗೆ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಇಬ್ಬರೂ ನಟಿಯರೂ ಪ್ರತಿಕ್ರಿಯೆ ನೀಡಿದ್ದು, ಶುಭ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ʼಮಾಧ್ಯಮ ಮಿತ್ರರೇ, ರೇಣುಕಾಸ್ವಾಮಿ ಪ್ರಕರಣದ ವಿಚಾರವಾಗಿ ಬೆಳಗ್ಗೆಯಿಂದ ಕರೆ ಮಾಡುತ್ತಿದ್ದೀರ ಅಂತಹವರಿಗೆ ಈ ಮೂಲಕ ಸ್ಪಷ್ಟನೆ ನೀಡುತ್ತಿದ್ದೇನೆ. ನನ್ನ ಖಾತೆಗೆ ಅಂತಹ ಯಾವುದೇ ಸಂದೇಶವೂ ಬಂದಿಲ್ಲʼ ಎಂದಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗಳ ಜತೆ ಮಾತನಾಡಿರುವ ರಾಗಿಣಿ ದ್ವಿವೇದಿ ʼನನ್ನ ಪ್ರೊಫೈಲ್ ಅನ್ನು ಖಾಸಗಿ ಏಜೆನ್ಸಿಯೊಂದು ನಿರ್ವಹಣೆ ಮಾಡುತ್ತಿದೆ. ಹೀಗಾಗಿ ಅಶ್ಲೀಲ ಸಂದೇಶಗಳು ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅಂತಹ ಸಂದೇಶ ಬಂದರೂ ಸಹ ನಾನು ಓದುವುದಿಲ್ಲ. ನನ್ನ ಗಮನಕ್ಕೆ ಬಂದಂತೆ ಅಂತಹ ಯಾವುದೇ ಕೆಟ್ಟ ಸಂದೇಶವೂ ಬಂದಿಲ್ಲʼ ಎಂದು ಹೇಳಿದ್ದಾರೆ.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…