ಎಸ್. ನಾರಾಯಣ್ ನಿರ್ದೇಶನದ, ‘ದುನಿಯಾ’ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಮಾರುತ’ ಚಿತ್ರವು ಅಕ್ಟೋಬರ್ 31ರಂದು ಬಿಡುಗಡೆ ಆಗಬೇಕಿತ್ತು. ಇದೀಗ ಚಿತ್ರವು ಮೂರು ವಾರ ಮುಂದಕ್ಕೆ ಹೋಗಿದೆ.
ರಿಷಭ್ ಶೆಟ್ಟಿ ಅಭಿನಯದ ‘ಕಾಂತರ – ಚಾಪ್ಟರ್ 1’ ಚಿತ್ರವು ಎರಡು ವಾರಗಳ ಹಿಂದೆ ಬಿಡುಗಡೆಯಾಗಿ, ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ರಾಜ್ಯದ ಇನ್ನೂ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳ ಅಭಾವವಿರುವ ಕಾರಣ ಚಿತ್ರತಂಡವು ‘ಮಾರುತ’ ಚಿತ್ರದ ಬಿಡುಗಡೆಯನ್ನು ಮೂರು ವಾರ ಮುಂದೂಡಿದೆ. ಅ.31ರ ಬದಲು ಚಿತ್ರವು ಇದೀಗ ನವೆಂಬರ್ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಈ ಚಿತ್ರದಲ್ಲೊಂದು ಗಂಭೀರ ಸಂದೇಶವನ್ನು ನಾರಾಯಣ್ ಹೇಳುವ ಪ್ರಯತ್ನ ಮಾಡಿದ್ದಾರಂತೆ. ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ ಎಂದು ನಾರಾಯಣ್ ಇತ್ತೀಚೆಗೆ ಈ ಚಿತ್ರದ ಕುರಿತು ಹೇಳಿಕೊಂಡಿದ್ದರು.
ಈಶ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ. ಮಂಜು ಮತ್ತು ರಮೇಶ್ ಯಾದವ್ ನಿರ್ಮಿಸಿರುವ ‘ಮಾರುತ’ ಚಿತ್ರಕ್ಕೆ ಎಸ್. ನಾರಾಯಣ್ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ ಸಂಗೀತವನ್ನೂ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ಶ್ರೇಯಸ್ ಮಂಜು, ಬೃಂದಾ ಆಚಾರ್ಯ, ತಾರಾ, ರಂಗಾಯಣ ರಘು, ಸಾಧು ಕೋಕಿಲ, ಕಲ್ಯಾಣಿ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಸುಜಯ್ ಶಾಸ್ತ್ರಿ ಮುಂತಾದವರ ಜೊತೆಗೆ ರವಿಚಂದ್ರನ್ ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…