ಮನರಂಜನೆ

ಮಾವೀರ’ನಾದ ರಾಜ್‍ ಬಿ. ಶೆಟ್ಟಿ; ‘ಕರಾವಳಿ’ ಚಿತ್ರದಲ್ಲೊಂದು ವಿಭಿನ್ನ ಪಾತ್ರ

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ‍ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್‍ ಶೆಟ್ಟಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಇತ್ತೀಚೆಗೆ ಚಿತ್ರದಲ್ಲಿನ ರಾಜ್ ಬಿ. ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ರಿಲೀಸ್ ಆಗಿದೆ. ಎರಡು ಕೋಣಗಳ ಮಧ್ಯೆ ನಿಂತು ದಿಟ್ಟಿಸಿ ನೋಡುತ್ತಿರುವ ರಾಜ್ ಬಿ ಶೆಟ್ಟಿ, ಒಂದು ಕೈಯಲ್ಲಿ ಪಂಜು ಹಿಡಿದು ಕಾಣಿಸಿಕೊಂಡಿದ್ದಾರೆ. ರಾಜ್ ಲುಕ್ ನೋಡುತ್ತಿದ್ದರೆ ಕಂಬಳ ಓಡಿಸುವ ಓಟಗಾರನ ಅಥವಾ ಕಂಬಳ ನಡೆಸುವ ಕುಟುಂಬದವನ ಪಾತ್ರವಿರಬಹುದು ಎಂದು ಚರ್ಚೆಯಾಗುತ್ತಿದೆ. ರಾಜ್ ಪಾತ್ರದ ಬಗ್ಗೆ ಸಿನಿಮಾತಂಡ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

‘ಕರಾವಳಿ’ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆಯಾಗಿದ್ದು, ಪಕ್ಕಾ ಗ್ರಾಮೀಣ ಹಿನ್ನೆಲಯಲ್ಲಿ ಚಿತ್ರ ಮೂಡಿಬರುತ್ತಿದೆ. ಚಿತ್ರದಲ್ಲಿ ಪ್ರಜ್ವಲ್‍ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಗೆ ನಟ ಮಿತ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಮೇಶ್ ಇಂದಿರ ಅವರ ಪಾತ್ರ ಕೂಡ ಸಿಕ್ಕಾಪಟ್ಟೆ ಪವರ್‌ ಫುಲ್ ಆಗಿದೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.

‘ಕರಾವಳಿ’ ಹೆಸರೇ ಹೇಳುವ ಹಾಗೆ ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ. ಈ ಸಿನಿಮಾ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ಸಹಯೋಗದೊಂದಿಗೆ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯು ಸದಾನಂದನ್‍ ಛಾಯಾಗ್ರಹಣವಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಪ್‍ರಾರಂಭವಾಗಿದೆ.

ಚಂದ್ರಶೇಖರ್ ಬಂಡಿಯಪ್ಪ ಕಥೆ ಇರುವ ಈ ಚಿತ್ರವು, ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

2 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

2 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

2 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

5 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

5 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

5 hours ago