ಮನರಂಜನೆ

‘ಸು ಫ್ರಮ್ ಸೋ’ ಜೊತೆಗೆ ಬಂದ ರಾಜ್ ಬಿ ಶೆಟ್ಟಿ; ಜುಲೈ 25 ರಂದು ತೆರೆಗೆ …

ರಾಜ್‍ ಬಿ. ಶೆಟ್ಟಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದು ವರ್ಷವೇ ಆಗಿದೆ. ಕಳೆದ ವರ್ಷದ ಜುಲೈನಲ್ಲಿ ರಾಜ್‍ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆಯಾಗಿತ್ತು. ಈಗ ಒಂದು ವರ್ಷದ ನಂತರ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಈ ಚಿತ್ರದಲ್ಲಿ ನಟಿಸಿಲ್ಲ, ಬದಲಿಗೆ ಚಿತ್ರವನ್ನು ತಮ್ಮ ಲೈಟರ್ ಬುದ್ಧ ಫಿಲಂಸ್ ಸಂಸ್ಥೆಯಡಿ ನಿರ್ಮಿಸಿದ್ದಾರೆ. ಅದೇ ‘ಸು ಫ್ರಮ್‍ ಸೋ’.

ಹೆಸರು ಕೇಳುತ್ತಿದ್ದಂತೆಯೃ ಸು ಮತ್ತು ಸೋ ಎಂದರೇನು? ಎಂಬ ಪ್ರಶ್ನೆ ಬರಬಹುದು. ಇಲ್ಲಿ ಸು ಎಂದರೆ ಸುಲೋಚನಾ ಮತ್ತು ಸೋ ಎಂದರೆ ಸೋಮೇಶ್ವರ ಎಂದರ್ಥವಂತೆ. ಇದೊಂದು ಹಾರರ್‍ ಕಾಮಿಡಿ ಚಿತ್ರವಾಗಿದ್ದು, ಜೆ.ಪಿ. ತುಮಿನಾಡು ನಿರ್ದೇಶನದ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು ಜುಲೈ.25ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ.

‘ಸು ಫ್ರಮ್ ಸೋ’ ಜೊತೆಗೆ ಬಂದ ರಾಜ್ ಬಿ ಶೆಟ್ಟಿ

ಈ ಚಿತ್ರದ ಕುರಿತು ಮಾತನಾಡುವ ರಾಜ್‍ ಶೆಟ್ಟಿ, ‘ರಂಗಭೂಮಿಯಲ್ಲಿ ಸಾಕಷ್ಟು‌ ಹೆಸರು ಮಾಡಿರುವ ಗೆಳೆಯ ಜೆ.ಪಿ. ತುಮಿನಾಡು ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಚಿತ್ರವಿದು. ಆರು ವರ್ಷಗಳ ಹಿಂದೆಯೇ ಅವರು ಸಿದ್ದ ಮಾಡಿಕೊಂಡಿದ್ದ ಈ ಕಥೆ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ನಾನು ಬಹಳ ಇಷ್ಟಪಡುವ ಕಾಮಿಡಿ ಜಾನರ್‍ನ ಚಿತ್ರವಿದು. ‘ಸು ಫ್ರಮ್ ಸೋ’ ಎಂದರೆ ಸುಲೋಚನ ಹಾಗೂ ಸೋಮೇಶ್ವರ ಎಂದರು. ಮೊದಲನೆಯದು ಪಾತ್ರದ ಹೆಸರಾದರೆ, ಎರಡನೆಯದು ಸ್ಥಳದ ಹೆಸರು. ಬಹುತೇಕ ಹೊಸತಂಡವೇ ಸೇರಿ ಮಾಡಿರುವ ಈ ಚಿತ್ರಕ್ಕೆ ಬೆಳ್ತಂಗಡಿ, ವೇಣೂರು, ಕಕ್ಯಪದವು ಸುತ್ತಮುತ್ತ 50 ದಿನಗಳ ಚಿತ್ರೀಕರಣ ನಡೆದಿದೆ’ ಎಂದರು.

ಸಿನಿಮಾ ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದ ನಾನು, ನಟನಾದೆ ಎಂದ ಜೆ.ಪಿ. ತುಮಿನಾಡು, ‘ಈಗ ಮೊದಲ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ‌. ಇದೊಂದು ಕಾಲ್ಪನಿಕ ಕಥೆ. ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುವ ಕಥೆಯೂ ಹೌದು’ ಎಂದರು.

‘ಸು ಫ್ರಮ್ ಸೋ’ ಚಿತ್ರದಲ್ಲಿ ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಅರ್ಜುನ್ ಕಜೆ ಮುಂತಾದವರು ನಟಿಸಿದ್ದಾರೆ. ಚಂದ್ರಶೇಖರ್ ಅವರ ಛಾಯಾಗ್ರಹಣ, ಸುಮೇಧ್ ಕೆ ಅವರ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

8 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

8 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

9 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

9 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

9 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

9 hours ago