ಮನರಂಜನೆ

‘ಸು ಫ್ರಮ್ ಸೋ’ ಜೊತೆಗೆ ಬಂದ ರಾಜ್ ಬಿ ಶೆಟ್ಟಿ; ಜುಲೈ 25 ರಂದು ತೆರೆಗೆ …

ರಾಜ್‍ ಬಿ. ಶೆಟ್ಟಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದು ವರ್ಷವೇ ಆಗಿದೆ. ಕಳೆದ ವರ್ಷದ ಜುಲೈನಲ್ಲಿ ರಾಜ್‍ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆಯಾಗಿತ್ತು. ಈಗ ಒಂದು ವರ್ಷದ ನಂತರ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಈ ಚಿತ್ರದಲ್ಲಿ ನಟಿಸಿಲ್ಲ, ಬದಲಿಗೆ ಚಿತ್ರವನ್ನು ತಮ್ಮ ಲೈಟರ್ ಬುದ್ಧ ಫಿಲಂಸ್ ಸಂಸ್ಥೆಯಡಿ ನಿರ್ಮಿಸಿದ್ದಾರೆ. ಅದೇ ‘ಸು ಫ್ರಮ್‍ ಸೋ’.

ಹೆಸರು ಕೇಳುತ್ತಿದ್ದಂತೆಯೃ ಸು ಮತ್ತು ಸೋ ಎಂದರೇನು? ಎಂಬ ಪ್ರಶ್ನೆ ಬರಬಹುದು. ಇಲ್ಲಿ ಸು ಎಂದರೆ ಸುಲೋಚನಾ ಮತ್ತು ಸೋ ಎಂದರೆ ಸೋಮೇಶ್ವರ ಎಂದರ್ಥವಂತೆ. ಇದೊಂದು ಹಾರರ್‍ ಕಾಮಿಡಿ ಚಿತ್ರವಾಗಿದ್ದು, ಜೆ.ಪಿ. ತುಮಿನಾಡು ನಿರ್ದೇಶನದ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು ಜುಲೈ.25ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ.

‘ಸು ಫ್ರಮ್ ಸೋ’ ಜೊತೆಗೆ ಬಂದ ರಾಜ್ ಬಿ ಶೆಟ್ಟಿ

ಈ ಚಿತ್ರದ ಕುರಿತು ಮಾತನಾಡುವ ರಾಜ್‍ ಶೆಟ್ಟಿ, ‘ರಂಗಭೂಮಿಯಲ್ಲಿ ಸಾಕಷ್ಟು‌ ಹೆಸರು ಮಾಡಿರುವ ಗೆಳೆಯ ಜೆ.ಪಿ. ತುಮಿನಾಡು ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಚಿತ್ರವಿದು. ಆರು ವರ್ಷಗಳ ಹಿಂದೆಯೇ ಅವರು ಸಿದ್ದ ಮಾಡಿಕೊಂಡಿದ್ದ ಈ ಕಥೆ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ನಾನು ಬಹಳ ಇಷ್ಟಪಡುವ ಕಾಮಿಡಿ ಜಾನರ್‍ನ ಚಿತ್ರವಿದು. ‘ಸು ಫ್ರಮ್ ಸೋ’ ಎಂದರೆ ಸುಲೋಚನ ಹಾಗೂ ಸೋಮೇಶ್ವರ ಎಂದರು. ಮೊದಲನೆಯದು ಪಾತ್ರದ ಹೆಸರಾದರೆ, ಎರಡನೆಯದು ಸ್ಥಳದ ಹೆಸರು. ಬಹುತೇಕ ಹೊಸತಂಡವೇ ಸೇರಿ ಮಾಡಿರುವ ಈ ಚಿತ್ರಕ್ಕೆ ಬೆಳ್ತಂಗಡಿ, ವೇಣೂರು, ಕಕ್ಯಪದವು ಸುತ್ತಮುತ್ತ 50 ದಿನಗಳ ಚಿತ್ರೀಕರಣ ನಡೆದಿದೆ’ ಎಂದರು.

ಸಿನಿಮಾ ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದ ನಾನು, ನಟನಾದೆ ಎಂದ ಜೆ.ಪಿ. ತುಮಿನಾಡು, ‘ಈಗ ಮೊದಲ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ‌. ಇದೊಂದು ಕಾಲ್ಪನಿಕ ಕಥೆ. ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುವ ಕಥೆಯೂ ಹೌದು’ ಎಂದರು.

‘ಸು ಫ್ರಮ್ ಸೋ’ ಚಿತ್ರದಲ್ಲಿ ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಅರ್ಜುನ್ ಕಜೆ ಮುಂತಾದವರು ನಟಿಸಿದ್ದಾರೆ. ಚಂದ್ರಶೇಖರ್ ಅವರ ಛಾಯಾಗ್ರಹಣ, ಸುಮೇಧ್ ಕೆ ಅವರ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

1 hour ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

1 hour ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

2 hours ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

2 hours ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

2 hours ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago