ಮನರಂಜನೆ

‘ಸು ಫ್ರಮ್ ಸೋ’ ಜೊತೆಗೆ ಬಂದ ರಾಜ್ ಬಿ ಶೆಟ್ಟಿ; ಜುಲೈ 25 ರಂದು ತೆರೆಗೆ …

ರಾಜ್‍ ಬಿ. ಶೆಟ್ಟಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದು ವರ್ಷವೇ ಆಗಿದೆ. ಕಳೆದ ವರ್ಷದ ಜುಲೈನಲ್ಲಿ ರಾಜ್‍ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆಯಾಗಿತ್ತು. ಈಗ ಒಂದು ವರ್ಷದ ನಂತರ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಈ ಚಿತ್ರದಲ್ಲಿ ನಟಿಸಿಲ್ಲ, ಬದಲಿಗೆ ಚಿತ್ರವನ್ನು ತಮ್ಮ ಲೈಟರ್ ಬುದ್ಧ ಫಿಲಂಸ್ ಸಂಸ್ಥೆಯಡಿ ನಿರ್ಮಿಸಿದ್ದಾರೆ. ಅದೇ ‘ಸು ಫ್ರಮ್‍ ಸೋ’.

ಹೆಸರು ಕೇಳುತ್ತಿದ್ದಂತೆಯೃ ಸು ಮತ್ತು ಸೋ ಎಂದರೇನು? ಎಂಬ ಪ್ರಶ್ನೆ ಬರಬಹುದು. ಇಲ್ಲಿ ಸು ಎಂದರೆ ಸುಲೋಚನಾ ಮತ್ತು ಸೋ ಎಂದರೆ ಸೋಮೇಶ್ವರ ಎಂದರ್ಥವಂತೆ. ಇದೊಂದು ಹಾರರ್‍ ಕಾಮಿಡಿ ಚಿತ್ರವಾಗಿದ್ದು, ಜೆ.ಪಿ. ತುಮಿನಾಡು ನಿರ್ದೇಶನದ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು ಜುಲೈ.25ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ.

‘ಸು ಫ್ರಮ್ ಸೋ’ ಜೊತೆಗೆ ಬಂದ ರಾಜ್ ಬಿ ಶೆಟ್ಟಿ

ಈ ಚಿತ್ರದ ಕುರಿತು ಮಾತನಾಡುವ ರಾಜ್‍ ಶೆಟ್ಟಿ, ‘ರಂಗಭೂಮಿಯಲ್ಲಿ ಸಾಕಷ್ಟು‌ ಹೆಸರು ಮಾಡಿರುವ ಗೆಳೆಯ ಜೆ.ಪಿ. ತುಮಿನಾಡು ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಚಿತ್ರವಿದು. ಆರು ವರ್ಷಗಳ ಹಿಂದೆಯೇ ಅವರು ಸಿದ್ದ ಮಾಡಿಕೊಂಡಿದ್ದ ಈ ಕಥೆ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ನಾನು ಬಹಳ ಇಷ್ಟಪಡುವ ಕಾಮಿಡಿ ಜಾನರ್‍ನ ಚಿತ್ರವಿದು. ‘ಸು ಫ್ರಮ್ ಸೋ’ ಎಂದರೆ ಸುಲೋಚನ ಹಾಗೂ ಸೋಮೇಶ್ವರ ಎಂದರು. ಮೊದಲನೆಯದು ಪಾತ್ರದ ಹೆಸರಾದರೆ, ಎರಡನೆಯದು ಸ್ಥಳದ ಹೆಸರು. ಬಹುತೇಕ ಹೊಸತಂಡವೇ ಸೇರಿ ಮಾಡಿರುವ ಈ ಚಿತ್ರಕ್ಕೆ ಬೆಳ್ತಂಗಡಿ, ವೇಣೂರು, ಕಕ್ಯಪದವು ಸುತ್ತಮುತ್ತ 50 ದಿನಗಳ ಚಿತ್ರೀಕರಣ ನಡೆದಿದೆ’ ಎಂದರು.

ಸಿನಿಮಾ ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದ ನಾನು, ನಟನಾದೆ ಎಂದ ಜೆ.ಪಿ. ತುಮಿನಾಡು, ‘ಈಗ ಮೊದಲ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ‌. ಇದೊಂದು ಕಾಲ್ಪನಿಕ ಕಥೆ. ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುವ ಕಥೆಯೂ ಹೌದು’ ಎಂದರು.

‘ಸು ಫ್ರಮ್ ಸೋ’ ಚಿತ್ರದಲ್ಲಿ ಜೆ.ಪಿ. ತುಮಿನಾಡು, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡು, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಅರ್ಜುನ್ ಕಜೆ ಮುಂತಾದವರು ನಟಿಸಿದ್ದಾರೆ. ಚಂದ್ರಶೇಖರ್ ಅವರ ಛಾಯಾಗ್ರಹಣ, ಸುಮೇಧ್ ಕೆ ಅವರ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago