ಮನರಂಜನೆ

‘ರೂಪಾಂತರ’ಗೊಂಡ ರಾಜ್‍ ಬಿ ಶೆಟ್ಟಿ; ಹಳೆಯ ತಂಡದೊಂದಿಗೆ ಹೊಸ ಚಿತ್ರ

ಕಳೆದ ವರ್ಷ ‘ಟೋಬಿ’ ಸೋಲಿನ ನಂತರ ರಾಜ್‍ ಬಿ ಶೆಟ್ಟಿ ಒಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ರಾಜ್‍ ಶೆಟ್ಟಿ, ಮಮ್ಮೂಟ್ಟಿ ಎದುರು ವಿಲನ್‍ ಆಗಿ ನಟಿಸಿದ್ದರು. ಈ ಚಿತ್ರದಲ್ಲಿ ರಾಜ್‍ ಶೆಟ್ಟಿ ಪಾತ್ರದ ಮತ್ತು ಪಾತ್ರ ಪೋಷಣೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತಾದರೂ, ಒಟ್ಟಾರೆ ಚಿತ್ರ ದೊಡ್ಡ ಸದ್ದು ಮಾಡಲಿಲ್ಲ.

ಈಗ ರಾಜ್‍ ಶೆಟ್ಟಿ ಸದ್ದಿಲ್ಲದೆ ‘ರೂಪಾಂತರ’ ಎಂಬ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಈ ಚಿತ್ರದಲ್ಲಿ ಅವರು ಬರೀ ನಟನಷ್ಟೇ ಅಲ್ಲ, ಸಂಭಾಷಣೆಕಾರರೂ ಹೌದು. ಈ ಹಿಂದೆ ‘ಒಂದು ಮೊಟ್ಟೆಯ ಕಥೆ’ ಚಿತ್ರವನ್ನು ನಿರ್ಮಿಸಿದ್ದ ಸುಹಾನ್ ಪ್ರಸಾದ್ ಈ ಚಿತ್ರ ನಿರ್ಮಿಸಿದ್ದಾರೆ. ಆ ಚಿತ್ರಕ್ಕೆ ಛಾಯಾಗ್ರಹಣ ಮತ್ತು ಸಂಗೀತ ಸಂಯೋಜಿಸಿದ್ದ ಪ್ರವೀಣ್ ಶ್ರೀಯಾನ್ ಮತ್‍ತು ಮಿಥುನ್‍ ಮುಕುಂದನ್‍ ಈ ಚಿತ್ರದಲ್ಲೂ ಮುಂದುವರೆದಿದ್ದಾರೆ.

ಈ ಚಿತ್ರದ ಕುರಿತು ತಮ್ಮ ಇನ್‍ಸ್ಟಾಗ್ರಾಂ ಖಾತೆಯ ಮೂಲಕ ಒಂದಿಷ್ಟು ವಿಷಯಗಳನನು ಹಂಚಿಕೊಂಡಿರುವ ರಾಜ್‍ ಶೆಟ್ಟಿ, ‘ಕೆಲವು ಸಿನಿಮಾಗಳು ಮನಸ್ಸಿಗೆ ಹತ್ತಿರವಾಗಿರುತ್ತವೆ. ಅಂತಹ ಒಂದು ಸುಂದರವಾದ ಚಿತ್ರ ‘ರೂಪಾಂತರ’. ಈ ಸಿನಿಮಾದ ಭಾಗವಾಗಿರುವುದು ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ರಾಜ್‍ ಶೆಟ್ಟಿ ಹೇಳಿಕೊಂಡಿದ್ದಾರೆ. ಜೊತೆಗೆ ಈ ಚಿತ್ರದ ಮೊದಲ ನೋಟವನ್ನೂ ಅವರು ಹಂಚಿಕೊಂಡಿದ್ದಾರೆ.

‘ರೂಪಾಂತರ’ ಚಿತ್ರದಲ್ಲಿ ಸಾಕಷ್ಟು ಹೊಸ ಮುಖಗಳಿವೆ. ರಾಜ್‍ ಶೆಟ್ಟಿ ಜೊತೆಗೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ಮಿಥಿಲೇಶ್ ಎಡವಲತ್.

ರಾಜ್ ಬಿ ಶೆಟ್ಟಿ ಈ ಚಿತ್ರವನ್ನು ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಸ್‍ ಮೂಲಕ ಅರ್ಪಿಸುವುದರ ಜೊತೆಗೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

1 hour ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

2 hours ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

2 hours ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

2 hours ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago