ಮನರಂಜನೆ

‘ರೂಪಾಂತರ’ಗೊಂಡ ರಾಜ್‍ ಬಿ ಶೆಟ್ಟಿ; ಹಳೆಯ ತಂಡದೊಂದಿಗೆ ಹೊಸ ಚಿತ್ರ

ಕಳೆದ ವರ್ಷ ‘ಟೋಬಿ’ ಸೋಲಿನ ನಂತರ ರಾಜ್‍ ಬಿ ಶೆಟ್ಟಿ ಒಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ರಾಜ್‍ ಶೆಟ್ಟಿ, ಮಮ್ಮೂಟ್ಟಿ ಎದುರು ವಿಲನ್‍ ಆಗಿ ನಟಿಸಿದ್ದರು. ಈ ಚಿತ್ರದಲ್ಲಿ ರಾಜ್‍ ಶೆಟ್ಟಿ ಪಾತ್ರದ ಮತ್ತು ಪಾತ್ರ ಪೋಷಣೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತಾದರೂ, ಒಟ್ಟಾರೆ ಚಿತ್ರ ದೊಡ್ಡ ಸದ್ದು ಮಾಡಲಿಲ್ಲ.

ಈಗ ರಾಜ್‍ ಶೆಟ್ಟಿ ಸದ್ದಿಲ್ಲದೆ ‘ರೂಪಾಂತರ’ ಎಂಬ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಈ ಚಿತ್ರದಲ್ಲಿ ಅವರು ಬರೀ ನಟನಷ್ಟೇ ಅಲ್ಲ, ಸಂಭಾಷಣೆಕಾರರೂ ಹೌದು. ಈ ಹಿಂದೆ ‘ಒಂದು ಮೊಟ್ಟೆಯ ಕಥೆ’ ಚಿತ್ರವನ್ನು ನಿರ್ಮಿಸಿದ್ದ ಸುಹಾನ್ ಪ್ರಸಾದ್ ಈ ಚಿತ್ರ ನಿರ್ಮಿಸಿದ್ದಾರೆ. ಆ ಚಿತ್ರಕ್ಕೆ ಛಾಯಾಗ್ರಹಣ ಮತ್ತು ಸಂಗೀತ ಸಂಯೋಜಿಸಿದ್ದ ಪ್ರವೀಣ್ ಶ್ರೀಯಾನ್ ಮತ್‍ತು ಮಿಥುನ್‍ ಮುಕುಂದನ್‍ ಈ ಚಿತ್ರದಲ್ಲೂ ಮುಂದುವರೆದಿದ್ದಾರೆ.

ಈ ಚಿತ್ರದ ಕುರಿತು ತಮ್ಮ ಇನ್‍ಸ್ಟಾಗ್ರಾಂ ಖಾತೆಯ ಮೂಲಕ ಒಂದಿಷ್ಟು ವಿಷಯಗಳನನು ಹಂಚಿಕೊಂಡಿರುವ ರಾಜ್‍ ಶೆಟ್ಟಿ, ‘ಕೆಲವು ಸಿನಿಮಾಗಳು ಮನಸ್ಸಿಗೆ ಹತ್ತಿರವಾಗಿರುತ್ತವೆ. ಅಂತಹ ಒಂದು ಸುಂದರವಾದ ಚಿತ್ರ ‘ರೂಪಾಂತರ’. ಈ ಸಿನಿಮಾದ ಭಾಗವಾಗಿರುವುದು ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ರಾಜ್‍ ಶೆಟ್ಟಿ ಹೇಳಿಕೊಂಡಿದ್ದಾರೆ. ಜೊತೆಗೆ ಈ ಚಿತ್ರದ ಮೊದಲ ನೋಟವನ್ನೂ ಅವರು ಹಂಚಿಕೊಂಡಿದ್ದಾರೆ.

‘ರೂಪಾಂತರ’ ಚಿತ್ರದಲ್ಲಿ ಸಾಕಷ್ಟು ಹೊಸ ಮುಖಗಳಿವೆ. ರಾಜ್‍ ಶೆಟ್ಟಿ ಜೊತೆಗೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ಮಿಥಿಲೇಶ್ ಎಡವಲತ್.

ರಾಜ್ ಬಿ ಶೆಟ್ಟಿ ಈ ಚಿತ್ರವನ್ನು ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಸ್‍ ಮೂಲಕ ಅರ್ಪಿಸುವುದರ ಜೊತೆಗೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

6 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

6 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

7 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

7 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

7 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

7 hours ago