ಕಳೆದ ವರ್ಷ ‘ಟೋಬಿ’ ಸೋಲಿನ ನಂತರ ರಾಜ್ ಬಿ ಶೆಟ್ಟಿ ಒಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ರಾಜ್ ಶೆಟ್ಟಿ, ಮಮ್ಮೂಟ್ಟಿ ಎದುರು ವಿಲನ್ ಆಗಿ ನಟಿಸಿದ್ದರು. ಈ ಚಿತ್ರದಲ್ಲಿ ರಾಜ್ ಶೆಟ್ಟಿ ಪಾತ್ರದ ಮತ್ತು ಪಾತ್ರ ಪೋಷಣೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತಾದರೂ, ಒಟ್ಟಾರೆ ಚಿತ್ರ ದೊಡ್ಡ ಸದ್ದು ಮಾಡಲಿಲ್ಲ.
ಈಗ ರಾಜ್ ಶೆಟ್ಟಿ ಸದ್ದಿಲ್ಲದೆ ‘ರೂಪಾಂತರ’ ಎಂಬ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಈ ಚಿತ್ರದಲ್ಲಿ ಅವರು ಬರೀ ನಟನಷ್ಟೇ ಅಲ್ಲ, ಸಂಭಾಷಣೆಕಾರರೂ ಹೌದು. ಈ ಹಿಂದೆ ‘ಒಂದು ಮೊಟ್ಟೆಯ ಕಥೆ’ ಚಿತ್ರವನ್ನು ನಿರ್ಮಿಸಿದ್ದ ಸುಹಾನ್ ಪ್ರಸಾದ್ ಈ ಚಿತ್ರ ನಿರ್ಮಿಸಿದ್ದಾರೆ. ಆ ಚಿತ್ರಕ್ಕೆ ಛಾಯಾಗ್ರಹಣ ಮತ್ತು ಸಂಗೀತ ಸಂಯೋಜಿಸಿದ್ದ ಪ್ರವೀಣ್ ಶ್ರೀಯಾನ್ ಮತ್ತು ಮಿಥುನ್ ಮುಕುಂದನ್ ಈ ಚಿತ್ರದಲ್ಲೂ ಮುಂದುವರೆದಿದ್ದಾರೆ.
ಈ ಚಿತ್ರದ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯ ಮೂಲಕ ಒಂದಿಷ್ಟು ವಿಷಯಗಳನನು ಹಂಚಿಕೊಂಡಿರುವ ರಾಜ್ ಶೆಟ್ಟಿ, ‘ಕೆಲವು ಸಿನಿಮಾಗಳು ಮನಸ್ಸಿಗೆ ಹತ್ತಿರವಾಗಿರುತ್ತವೆ. ಅಂತಹ ಒಂದು ಸುಂದರವಾದ ಚಿತ್ರ ‘ರೂಪಾಂತರ’. ಈ ಸಿನಿಮಾದ ಭಾಗವಾಗಿರುವುದು ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ರಾಜ್ ಶೆಟ್ಟಿ ಹೇಳಿಕೊಂಡಿದ್ದಾರೆ. ಜೊತೆಗೆ ಈ ಚಿತ್ರದ ಮೊದಲ ನೋಟವನ್ನೂ ಅವರು ಹಂಚಿಕೊಂಡಿದ್ದಾರೆ.
‘ರೂಪಾಂತರ’ ಚಿತ್ರದಲ್ಲಿ ಸಾಕಷ್ಟು ಹೊಸ ಮುಖಗಳಿವೆ. ರಾಜ್ ಶೆಟ್ಟಿ ಜೊತೆಗೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ಮಿಥಿಲೇಶ್ ಎಡವಲತ್.
ರಾಜ್ ಬಿ ಶೆಟ್ಟಿ ಈ ಚಿತ್ರವನ್ನು ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಸ್ ಮೂಲಕ ಅರ್ಪಿಸುವುದರ ಜೊತೆಗೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…