ಮನರಂಜನೆ

‘ರೂಪಾಂತರ’ಗೊಂಡ ರಾಜ್‍ ಬಿ ಶೆಟ್ಟಿ; ಹಳೆಯ ತಂಡದೊಂದಿಗೆ ಹೊಸ ಚಿತ್ರ

ಕಳೆದ ವರ್ಷ ‘ಟೋಬಿ’ ಸೋಲಿನ ನಂತರ ರಾಜ್‍ ಬಿ ಶೆಟ್ಟಿ ಒಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ರಾಜ್‍ ಶೆಟ್ಟಿ, ಮಮ್ಮೂಟ್ಟಿ ಎದುರು ವಿಲನ್‍ ಆಗಿ ನಟಿಸಿದ್ದರು. ಈ ಚಿತ್ರದಲ್ಲಿ ರಾಜ್‍ ಶೆಟ್ಟಿ ಪಾತ್ರದ ಮತ್ತು ಪಾತ್ರ ಪೋಷಣೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತಾದರೂ, ಒಟ್ಟಾರೆ ಚಿತ್ರ ದೊಡ್ಡ ಸದ್ದು ಮಾಡಲಿಲ್ಲ.

ಈಗ ರಾಜ್‍ ಶೆಟ್ಟಿ ಸದ್ದಿಲ್ಲದೆ ‘ರೂಪಾಂತರ’ ಎಂಬ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಈ ಚಿತ್ರದಲ್ಲಿ ಅವರು ಬರೀ ನಟನಷ್ಟೇ ಅಲ್ಲ, ಸಂಭಾಷಣೆಕಾರರೂ ಹೌದು. ಈ ಹಿಂದೆ ‘ಒಂದು ಮೊಟ್ಟೆಯ ಕಥೆ’ ಚಿತ್ರವನ್ನು ನಿರ್ಮಿಸಿದ್ದ ಸುಹಾನ್ ಪ್ರಸಾದ್ ಈ ಚಿತ್ರ ನಿರ್ಮಿಸಿದ್ದಾರೆ. ಆ ಚಿತ್ರಕ್ಕೆ ಛಾಯಾಗ್ರಹಣ ಮತ್ತು ಸಂಗೀತ ಸಂಯೋಜಿಸಿದ್ದ ಪ್ರವೀಣ್ ಶ್ರೀಯಾನ್ ಮತ್‍ತು ಮಿಥುನ್‍ ಮುಕುಂದನ್‍ ಈ ಚಿತ್ರದಲ್ಲೂ ಮುಂದುವರೆದಿದ್ದಾರೆ.

ಈ ಚಿತ್ರದ ಕುರಿತು ತಮ್ಮ ಇನ್‍ಸ್ಟಾಗ್ರಾಂ ಖಾತೆಯ ಮೂಲಕ ಒಂದಿಷ್ಟು ವಿಷಯಗಳನನು ಹಂಚಿಕೊಂಡಿರುವ ರಾಜ್‍ ಶೆಟ್ಟಿ, ‘ಕೆಲವು ಸಿನಿಮಾಗಳು ಮನಸ್ಸಿಗೆ ಹತ್ತಿರವಾಗಿರುತ್ತವೆ. ಅಂತಹ ಒಂದು ಸುಂದರವಾದ ಚಿತ್ರ ‘ರೂಪಾಂತರ’. ಈ ಸಿನಿಮಾದ ಭಾಗವಾಗಿರುವುದು ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ರಾಜ್‍ ಶೆಟ್ಟಿ ಹೇಳಿಕೊಂಡಿದ್ದಾರೆ. ಜೊತೆಗೆ ಈ ಚಿತ್ರದ ಮೊದಲ ನೋಟವನ್ನೂ ಅವರು ಹಂಚಿಕೊಂಡಿದ್ದಾರೆ.

‘ರೂಪಾಂತರ’ ಚಿತ್ರದಲ್ಲಿ ಸಾಕಷ್ಟು ಹೊಸ ಮುಖಗಳಿವೆ. ರಾಜ್‍ ಶೆಟ್ಟಿ ಜೊತೆಗೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ಮಿಥಿಲೇಶ್ ಎಡವಲತ್.

ರಾಜ್ ಬಿ ಶೆಟ್ಟಿ ಈ ಚಿತ್ರವನ್ನು ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಸ್‍ ಮೂಲಕ ಅರ್ಪಿಸುವುದರ ಜೊತೆಗೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

8 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

9 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

9 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

10 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

11 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

12 hours ago