ಮನರಂಜನೆ

‘ರೂಪಾಂತರ’ಗೊಂಡ ರಾಜ್‍ ಬಿ ಶೆಟ್ಟಿ; ಹಳೆಯ ತಂಡದೊಂದಿಗೆ ಹೊಸ ಚಿತ್ರ

ಕಳೆದ ವರ್ಷ ‘ಟೋಬಿ’ ಸೋಲಿನ ನಂತರ ರಾಜ್‍ ಬಿ ಶೆಟ್ಟಿ ಒಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ರಾಜ್‍ ಶೆಟ್ಟಿ, ಮಮ್ಮೂಟ್ಟಿ ಎದುರು ವಿಲನ್‍ ಆಗಿ ನಟಿಸಿದ್ದರು. ಈ ಚಿತ್ರದಲ್ಲಿ ರಾಜ್‍ ಶೆಟ್ಟಿ ಪಾತ್ರದ ಮತ್ತು ಪಾತ್ರ ಪೋಷಣೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತಾದರೂ, ಒಟ್ಟಾರೆ ಚಿತ್ರ ದೊಡ್ಡ ಸದ್ದು ಮಾಡಲಿಲ್ಲ.

ಈಗ ರಾಜ್‍ ಶೆಟ್ಟಿ ಸದ್ದಿಲ್ಲದೆ ‘ರೂಪಾಂತರ’ ಎಂಬ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಈ ಚಿತ್ರದಲ್ಲಿ ಅವರು ಬರೀ ನಟನಷ್ಟೇ ಅಲ್ಲ, ಸಂಭಾಷಣೆಕಾರರೂ ಹೌದು. ಈ ಹಿಂದೆ ‘ಒಂದು ಮೊಟ್ಟೆಯ ಕಥೆ’ ಚಿತ್ರವನ್ನು ನಿರ್ಮಿಸಿದ್ದ ಸುಹಾನ್ ಪ್ರಸಾದ್ ಈ ಚಿತ್ರ ನಿರ್ಮಿಸಿದ್ದಾರೆ. ಆ ಚಿತ್ರಕ್ಕೆ ಛಾಯಾಗ್ರಹಣ ಮತ್ತು ಸಂಗೀತ ಸಂಯೋಜಿಸಿದ್ದ ಪ್ರವೀಣ್ ಶ್ರೀಯಾನ್ ಮತ್‍ತು ಮಿಥುನ್‍ ಮುಕುಂದನ್‍ ಈ ಚಿತ್ರದಲ್ಲೂ ಮುಂದುವರೆದಿದ್ದಾರೆ.

ಈ ಚಿತ್ರದ ಕುರಿತು ತಮ್ಮ ಇನ್‍ಸ್ಟಾಗ್ರಾಂ ಖಾತೆಯ ಮೂಲಕ ಒಂದಿಷ್ಟು ವಿಷಯಗಳನನು ಹಂಚಿಕೊಂಡಿರುವ ರಾಜ್‍ ಶೆಟ್ಟಿ, ‘ಕೆಲವು ಸಿನಿಮಾಗಳು ಮನಸ್ಸಿಗೆ ಹತ್ತಿರವಾಗಿರುತ್ತವೆ. ಅಂತಹ ಒಂದು ಸುಂದರವಾದ ಚಿತ್ರ ‘ರೂಪಾಂತರ’. ಈ ಸಿನಿಮಾದ ಭಾಗವಾಗಿರುವುದು ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ರಾಜ್‍ ಶೆಟ್ಟಿ ಹೇಳಿಕೊಂಡಿದ್ದಾರೆ. ಜೊತೆಗೆ ಈ ಚಿತ್ರದ ಮೊದಲ ನೋಟವನ್ನೂ ಅವರು ಹಂಚಿಕೊಂಡಿದ್ದಾರೆ.

‘ರೂಪಾಂತರ’ ಚಿತ್ರದಲ್ಲಿ ಸಾಕಷ್ಟು ಹೊಸ ಮುಖಗಳಿವೆ. ರಾಜ್‍ ಶೆಟ್ಟಿ ಜೊತೆಗೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ಮಿಥಿಲೇಶ್ ಎಡವಲತ್.

ರಾಜ್ ಬಿ ಶೆಟ್ಟಿ ಈ ಚಿತ್ರವನ್ನು ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಸ್‍ ಮೂಲಕ ಅರ್ಪಿಸುವುದರ ಜೊತೆಗೆ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago