ಮನರಂಜನೆ

ಅರೇಬಿಕ್‍ ಭಾಷೆಗೆ ರಾಜ್‍ ಬಿ ಶೆಟ್ಟಿ ಅಭಿನಯದ ‘ಟರ್ಬೋ’

ಮಲಯಾಳಂ ಸ್ಟಾರ್‍ ನಟ ಮಮ್ಮೂಟ್ಟಿ ಅಭಿನಯದ ‘ಟರ್ಬೋ’ ಚಿತ್ರದಲ್ಲಿ ಕನ್ನಡಿಗ ರಾಜ್‍ ಬಿ ಶೆಟ್ಟಿ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಹೊಸ ವಿಷಯವೇನಲ್ಲ. ಈಗಾಗಲೇ ಮೇ 24ರಂದು ಚಿತ್ರ ಬಿಡುಗಡೆಯಾಗಿದ್ದು, ರಾಜ್‍ ಅಭಿನಯದ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಈಗ ಈ ಚಿತ್ರವೊಂದು ಹೊಸ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಅರೇಬಿಕ್‍ ಭಾಷೆಗೆ ಡಬ್‍ ಆಗಿದ್ದು, ಅರೇಬಿಕ್ ಭಾಷೆಗೆ ಡಬ್‍ ಆಗಿ ಬಿಡುಗಡೆಯಾಗುತ್ತಿರುವ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ‘ಟರ್ಬೋ’ ಪಾತ್ರವಾಗಿದೆ. ಈ ಚಿತ್ರಕ್ಕೆ 17 ಕಲಾವಿದರು ಡಬ್ ಮಾಡಿದ್ದು, ಆಗಸ್ಟ್ 02ರಂದು ಗಲ್ಫ್ ರಾಷ್ಟ್ರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.

‘ಟರ್ಬೋ’ ಚಿತ್ರವನ್ನು ಗಲ್ಫ್ ದೇಶಗಳಲ್ಲಿ ಟ್ರೂಥ್‍ ಗ್ಲೋಬಲ್‍ ಫಿಲಂಸ್ನ ಸಮದ್‍ ಟ್ರೂಥ್‍ ಬಿಡುಗಡೆ ಮಾಡುತ್ತಿದ್ದಾರೆ. ಈಗಾಗಲೇ ‘ಟರ್ಬೋ’ ಚಿತ್ರದ ಮಲಯಾಳಂ ಅವತರಣಿಕೆಯು ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಚಿತ್ರವನ್ನು ಅರೇಬಿಕ್ ಭಾಷೆಗೆ ಡಬ್‍ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಈ ಪ್ರಯೋಗ ಯಶಸ್ವಿಯಾದರೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಚಿತ್ರಗಳು, ಅದರಲ್ಲೂ ಮಲಯಾಳಂ ಚಿತ್ರಗಳು ಡಬ್‍ ಆಗಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಮಲಯಾಳಂ ನಲ್ಲಿ ‘ಪುಲಿಮುರುಗನ್’, ‘ಮಧುರೈ ರಾಜ’ದಂತಹ ಹಿಟ್‍ ಚಿತ್ರಗಳನ್ನು ನಿರ್ದೇಶಿಸಿರುವ ವೈಶಾಕ್‍, ಈ ಚಿತ್ರವನ್ನು ನಿರ್ದೇಶಿಸಿದ್ದು, ಮಮ್ಮೂಟ್ಟಿ ಕಂಪನಿ ಸಂಸ್ಥೆಯಡಿ ಈ ಚಿತ್ರವನ್ನು ಮಮ್ಮೂಟ್ಟಿ ಅವರೇ ನಿರ್ಮಿಸಿದ್ದಾರೆ. ಮಿಥುನ್ ಮ್ಯಾನುವಲ್ ಥಾಮಸ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ರಾಜ್‍ ಬಿ ಶೆಟ್ಟಿ ಈ ಚಿತ್ರದಲ್ಲಿ ವೆಟ್ರಿವೇಲ್‍ ಷಣ್ಮುಖಂ ಎಂಬ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಅಭಿನಯದ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುವುದರ ಜೊತೆಗೆ, ಅವರಿಗೆ ಹಲವು ಚಿತ್ರಗಳಲ್ಲಿ ಅವಕಾಶ ಸಹ ಸಿಗುತ್ತಿದೆಯಂತೆ. ಆದರೆ, ಕನ್ನಡದಲ್ಲಿ ಒಂದಿಷ್ಟು ಚಿತ್ರಗಳಲ್ಲಿ ಒಳ್ಳೆಯ ಪಾತ್ರಗಳು ಸಿಗುತ್ತಿರುವುದರಿಂದ, ಸದ್ಯ ಕನ್ನಡದಲ್ಲೇ ಬ್ಯುಸಿಯಾಗಿದ್ದಾರೆ ರಾಜ್.

‘ಟರ್ಬೋ’ ಚಿತ್ರದಲ್ಲಿ ಮಮ್ಮೂಟ್ಟಿ ಮತ್ತು ರಾಜ್ ಬಿ ಶೆಟ್ಟಿ ಅಲ್ಲದೆ, ಅಂಜನ ಜಯಪ್ರಕಾಶ್, ತೆಲುಗಿನ ಸುನೀಲ್, ಶಬರೀಶ್ ವರ್ಮಾ, ದಿಲೀಶ್ ಪೋತನ್ ಮುಂತಾದವರು ನಟಿಸಿದ್ದಾರೆ. ಕ್ರಿಸ್ಟೋ ಕ್ಸೇವಿಯರ್‍ ಸಂಗೀತ ಮತ್ತು ವಿಷ್ಣು ಶರ್ಮ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

4 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

4 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

4 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

4 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

5 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

5 hours ago