ಮಲಯಾಳಂ ಸ್ಟಾರ್ ನಟ ಮಮ್ಮೂಟ್ಟಿ ಅಭಿನಯದ ‘ಟರ್ಬೋ’ ಚಿತ್ರದಲ್ಲಿ ಕನ್ನಡಿಗ ರಾಜ್ ಬಿ ಶೆಟ್ಟಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಹೊಸ ವಿಷಯವೇನಲ್ಲ. ಈಗಾಗಲೇ ಮೇ 24ರಂದು ಚಿತ್ರ ಬಿಡುಗಡೆಯಾಗಿದ್ದು, ರಾಜ್ ಅಭಿನಯದ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಈಗ ಈ ಚಿತ್ರವೊಂದು ಹೊಸ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಅರೇಬಿಕ್ ಭಾಷೆಗೆ ಡಬ್ ಆಗಿದ್ದು, ಅರೇಬಿಕ್ ಭಾಷೆಗೆ ಡಬ್ ಆಗಿ ಬಿಡುಗಡೆಯಾಗುತ್ತಿರುವ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ‘ಟರ್ಬೋ’ ಪಾತ್ರವಾಗಿದೆ. ಈ ಚಿತ್ರಕ್ಕೆ 17 ಕಲಾವಿದರು ಡಬ್ ಮಾಡಿದ್ದು, ಆಗಸ್ಟ್ 02ರಂದು ಗಲ್ಫ್ ರಾಷ್ಟ್ರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.
‘ಟರ್ಬೋ’ ಚಿತ್ರವನ್ನು ಗಲ್ಫ್ ದೇಶಗಳಲ್ಲಿ ಟ್ರೂಥ್ ಗ್ಲೋಬಲ್ ಫಿಲಂಸ್ನ ಸಮದ್ ಟ್ರೂಥ್ ಬಿಡುಗಡೆ ಮಾಡುತ್ತಿದ್ದಾರೆ. ಈಗಾಗಲೇ ‘ಟರ್ಬೋ’ ಚಿತ್ರದ ಮಲಯಾಳಂ ಅವತರಣಿಕೆಯು ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಚಿತ್ರವನ್ನು ಅರೇಬಿಕ್ ಭಾಷೆಗೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಈ ಪ್ರಯೋಗ ಯಶಸ್ವಿಯಾದರೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಚಿತ್ರಗಳು, ಅದರಲ್ಲೂ ಮಲಯಾಳಂ ಚಿತ್ರಗಳು ಡಬ್ ಆಗಿ ಬಿಡುಗಡೆ ಆಗುವ ಸಾಧ್ಯತೆ ಇದೆ.
ಮಲಯಾಳಂ ನಲ್ಲಿ ‘ಪುಲಿಮುರುಗನ್’, ‘ಮಧುರೈ ರಾಜ’ದಂತಹ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ವೈಶಾಕ್, ಈ ಚಿತ್ರವನ್ನು ನಿರ್ದೇಶಿಸಿದ್ದು, ಮಮ್ಮೂಟ್ಟಿ ಕಂಪನಿ ಸಂಸ್ಥೆಯಡಿ ಈ ಚಿತ್ರವನ್ನು ಮಮ್ಮೂಟ್ಟಿ ಅವರೇ ನಿರ್ಮಿಸಿದ್ದಾರೆ. ಮಿಥುನ್ ಮ್ಯಾನುವಲ್ ಥಾಮಸ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ರಾಜ್ ಬಿ ಶೆಟ್ಟಿ ಈ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಖಂ ಎಂಬ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಅಭಿನಯದ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುವುದರ ಜೊತೆಗೆ, ಅವರಿಗೆ ಹಲವು ಚಿತ್ರಗಳಲ್ಲಿ ಅವಕಾಶ ಸಹ ಸಿಗುತ್ತಿದೆಯಂತೆ. ಆದರೆ, ಕನ್ನಡದಲ್ಲಿ ಒಂದಿಷ್ಟು ಚಿತ್ರಗಳಲ್ಲಿ ಒಳ್ಳೆಯ ಪಾತ್ರಗಳು ಸಿಗುತ್ತಿರುವುದರಿಂದ, ಸದ್ಯ ಕನ್ನಡದಲ್ಲೇ ಬ್ಯುಸಿಯಾಗಿದ್ದಾರೆ ರಾಜ್.
‘ಟರ್ಬೋ’ ಚಿತ್ರದಲ್ಲಿ ಮಮ್ಮೂಟ್ಟಿ ಮತ್ತು ರಾಜ್ ಬಿ ಶೆಟ್ಟಿ ಅಲ್ಲದೆ, ಅಂಜನ ಜಯಪ್ರಕಾಶ್, ತೆಲುಗಿನ ಸುನೀಲ್, ಶಬರೀಶ್ ವರ್ಮಾ, ದಿಲೀಶ್ ಪೋತನ್ ಮುಂತಾದವರು ನಟಿಸಿದ್ದಾರೆ. ಕ್ರಿಸ್ಟೋ ಕ್ಸೇವಿಯರ್ ಸಂಗೀತ ಮತ್ತು ವಿಷ್ಣು ಶರ್ಮ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…