ಮನರಂಜನೆ

ಅರೇಬಿಕ್‍ ಭಾಷೆಗೆ ರಾಜ್‍ ಬಿ ಶೆಟ್ಟಿ ಅಭಿನಯದ ‘ಟರ್ಬೋ’

ಮಲಯಾಳಂ ಸ್ಟಾರ್‍ ನಟ ಮಮ್ಮೂಟ್ಟಿ ಅಭಿನಯದ ‘ಟರ್ಬೋ’ ಚಿತ್ರದಲ್ಲಿ ಕನ್ನಡಿಗ ರಾಜ್‍ ಬಿ ಶೆಟ್ಟಿ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಹೊಸ ವಿಷಯವೇನಲ್ಲ. ಈಗಾಗಲೇ ಮೇ 24ರಂದು ಚಿತ್ರ ಬಿಡುಗಡೆಯಾಗಿದ್ದು, ರಾಜ್‍ ಅಭಿನಯದ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಈಗ ಈ ಚಿತ್ರವೊಂದು ಹೊಸ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಅರೇಬಿಕ್‍ ಭಾಷೆಗೆ ಡಬ್‍ ಆಗಿದ್ದು, ಅರೇಬಿಕ್ ಭಾಷೆಗೆ ಡಬ್‍ ಆಗಿ ಬಿಡುಗಡೆಯಾಗುತ್ತಿರುವ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ‘ಟರ್ಬೋ’ ಪಾತ್ರವಾಗಿದೆ. ಈ ಚಿತ್ರಕ್ಕೆ 17 ಕಲಾವಿದರು ಡಬ್ ಮಾಡಿದ್ದು, ಆಗಸ್ಟ್ 02ರಂದು ಗಲ್ಫ್ ರಾಷ್ಟ್ರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.

‘ಟರ್ಬೋ’ ಚಿತ್ರವನ್ನು ಗಲ್ಫ್ ದೇಶಗಳಲ್ಲಿ ಟ್ರೂಥ್‍ ಗ್ಲೋಬಲ್‍ ಫಿಲಂಸ್ನ ಸಮದ್‍ ಟ್ರೂಥ್‍ ಬಿಡುಗಡೆ ಮಾಡುತ್ತಿದ್ದಾರೆ. ಈಗಾಗಲೇ ‘ಟರ್ಬೋ’ ಚಿತ್ರದ ಮಲಯಾಳಂ ಅವತರಣಿಕೆಯು ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಚಿತ್ರವನ್ನು ಅರೇಬಿಕ್ ಭಾಷೆಗೆ ಡಬ್‍ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಈ ಪ್ರಯೋಗ ಯಶಸ್ವಿಯಾದರೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಚಿತ್ರಗಳು, ಅದರಲ್ಲೂ ಮಲಯಾಳಂ ಚಿತ್ರಗಳು ಡಬ್‍ ಆಗಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಮಲಯಾಳಂ ನಲ್ಲಿ ‘ಪುಲಿಮುರುಗನ್’, ‘ಮಧುರೈ ರಾಜ’ದಂತಹ ಹಿಟ್‍ ಚಿತ್ರಗಳನ್ನು ನಿರ್ದೇಶಿಸಿರುವ ವೈಶಾಕ್‍, ಈ ಚಿತ್ರವನ್ನು ನಿರ್ದೇಶಿಸಿದ್ದು, ಮಮ್ಮೂಟ್ಟಿ ಕಂಪನಿ ಸಂಸ್ಥೆಯಡಿ ಈ ಚಿತ್ರವನ್ನು ಮಮ್ಮೂಟ್ಟಿ ಅವರೇ ನಿರ್ಮಿಸಿದ್ದಾರೆ. ಮಿಥುನ್ ಮ್ಯಾನುವಲ್ ಥಾಮಸ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ರಾಜ್‍ ಬಿ ಶೆಟ್ಟಿ ಈ ಚಿತ್ರದಲ್ಲಿ ವೆಟ್ರಿವೇಲ್‍ ಷಣ್ಮುಖಂ ಎಂಬ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಅಭಿನಯದ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುವುದರ ಜೊತೆಗೆ, ಅವರಿಗೆ ಹಲವು ಚಿತ್ರಗಳಲ್ಲಿ ಅವಕಾಶ ಸಹ ಸಿಗುತ್ತಿದೆಯಂತೆ. ಆದರೆ, ಕನ್ನಡದಲ್ಲಿ ಒಂದಿಷ್ಟು ಚಿತ್ರಗಳಲ್ಲಿ ಒಳ್ಳೆಯ ಪಾತ್ರಗಳು ಸಿಗುತ್ತಿರುವುದರಿಂದ, ಸದ್ಯ ಕನ್ನಡದಲ್ಲೇ ಬ್ಯುಸಿಯಾಗಿದ್ದಾರೆ ರಾಜ್.

‘ಟರ್ಬೋ’ ಚಿತ್ರದಲ್ಲಿ ಮಮ್ಮೂಟ್ಟಿ ಮತ್ತು ರಾಜ್ ಬಿ ಶೆಟ್ಟಿ ಅಲ್ಲದೆ, ಅಂಜನ ಜಯಪ್ರಕಾಶ್, ತೆಲುಗಿನ ಸುನೀಲ್, ಶಬರೀಶ್ ವರ್ಮಾ, ದಿಲೀಶ್ ಪೋತನ್ ಮುಂತಾದವರು ನಟಿಸಿದ್ದಾರೆ. ಕ್ರಿಸ್ಟೋ ಕ್ಸೇವಿಯರ್‍ ಸಂಗೀತ ಮತ್ತು ವಿಷ್ಣು ಶರ್ಮ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

11 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

19 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago