ಮನರಂಜನೆ

ಮೊದಲ ಬಾರಿಗೆ ಪೊಲೀಸ್‍ ಪಾತ್ರದಲ್ಲಿ ರಾಜ್‍ ಶೆಟ್ಟಿ; ‘ರಕ್ಕಸಪುರದೊಳ್‍’ ಪ್ರಾರಂಭ

ರಾಜ್‍ ಬಿ. ಶೆಟ್ಟಿ ಇತ್ತೀಚಿನ ದಿನಗಳಲ್ಲಿ ಹಲವು ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ಅವರು ನೆಗೆಟಿವ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಹೊಸ ಚಿತ್ರವೊಂದರಲ್ಲಿ ಪೊಲೀಸ್‍ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದೇ ‘ರಕ್ಕಸಪುರದೊಳ್‍’.

‘ರಕ್ಕಸಪುರದೊಳ್‍’ ಚಿತ್ರವನ್ನು ಸಾಹಸ ನಿರ್ದೇಶಕ ಕೆ. ರವಿವರ್ಮ ನಿರ್ಮಿಸುತ್ತಿದ್ದು, ‘ಜೋಗಿ’ ಪ್ರೇಮ್‍ ಗರಡಿಯಲ್ಲಿ ಪಳಗಿರುವ ರವಿ ಸಾರಂಗ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮುಹೂರ್ತ ವರಮಹಾಲಕ್ಷ್ಮಿ ಹಬ್ಬದಂದು ನಡೆಯಿತು. ರಕ್ಷಿತ ಪ್ರೇಮ್‍ ಹಾಗೂ ಪ್ರೇಮ್ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡುವುದರ ಜೊತೆಗೆ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು ಪ್ರೇಮ್‍ ದಂಪತಿ.

‘ರಕ್ಕಸಪುರದೊಳ್‍’ ಚಿತ್ರದಲ್ಲಿ ರಾಜ್‍ ಶೆಟ್ಟಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡರೂ, ಇದು ಅದೇ ಮಾಮೂಲೀ ಪೊಲೀಸ್ ಪಾತ್ರವಲ್ಲವಂತೆ. ಈ ಕುರಿತು ಮಾತನಾಡುವ ರಾಜ್‍, ‘ನನ್ನ ಪಾತ್ರಕ್ಕೆ ನನ್ನದೇ ಆದ ಜರ್ನಿ, ಹುಡುಕಾಟ, ನೋವು, ಸುಖ ಎಲ್ಲವೂ ಇದೆ. ಇಲ್ಲಿನ ಪಾತ್ರ ತನ್ನ ಒಳಗಿರುವ ರಾಕ್ಷಸನನ್ನು ಎದುರಿಸಿದಾಗ ಏನಾಗುತ್ತದೆ ಎನ್ನುವುದೇ ಚಿತ್ರದ ಕಥೆ. ಬಹಳ ನೈಜವಾದ ಪಾತ್ರ ಇದು. ಚಿತ್ರದಲ್ಲಿ ನಟಿಸುವುದಕ್ಕೆ ಕೆಲವು ಕಾರಣಗಳಿವೆ. ಚಿತ್ರ ನೋಡಿಸಿಕೊಂಡು ಹೋಗುವ ಗುಣವೂ ಅದರಲ್ಲೊಂದು. ಹಾಗಾಗಿ, ಈ ಚಿತ್ರವನ್ನು ಒಪ್ಪಿಕೊಂಡೆ. ಬರೀ ನನ್ನ ಪಾತ್ರವಷ್ಟೇ ಅಲ್ಲ, ಚಿತ್ರದಲ್ಲಿ ಬಹಳ ಒಳ್ಳೆಯ ಪಾತ್ರಗಳಿವೆ’ ಎಂದರು.

ರವಿ ವರ್ಮಾ ಈ ಹಿಂದೆ ನಿರ್ದೇಶನ ಮಾಡಿದ್ದರು. ಈಗ ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ಇದೊಂದು ಬೇರೆಯದೇ ರೀತಿಯ ಪ್ರಯತ್ನವಾಗಲಿದೆ ಎನ್ನುವ ಅವರು, ‘ರವಿ ಸಾರಂಗ ನನಗೆ ಎರಡು ವರ್ಷಗಳ ಪರಿಚಯ. ಅವರೊಂದು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ರಾಜ್ ಬಿ ಶೆಟ್ಟಿ ಆ ಕಥೆಯನ್ನು ಒಪ್ಪಿ ನಟಿಸುತ್ತಿದ್ದಾರೆ. ಒಂದೊಳ್ಳೆಯ ಚಿತ್ರ ನಿರ್ಮಾಣ ಮಾಡುತ್ತಿರುವ ಖುಷಿಯಿದೆ’ ಎಂದರು.

ನಿರ್ದೇಶಕ ರವಿ ಸಾರಂಗ, ಕಳೆದ 10 ವರ್ಷಗಳಿಂದ ಪ್ರೇಮ್ ‍ಜೊತೆಗೆ ಕೆಲಸ ಮಾಡಿಕೊಂಡಿದ್ದಾರಂತೆ. ಅವರ ಚಿತ್ರಗಳಿಗೆ ಕಥೆ, ಚಿತ್ರಕಥೆ ಮತ್ತು ನಿರ್ದೇಶನದಲ್ಲಿ ಸಹಾಯ ಮಾಡುತ್ತಿದ್ದಾರಂತೆ. ಈಗ ಈ ಚಿತ್ರದ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ‘ಎಲ್ಲರೊಳಗಿರುವ ರಾಕ್ಷಸರ ಕುರಿತಾದ ಕಥೆ ಇದು. ಮನುಷ್ಯನಲ್ಲಿ ಎರಡು ಗುಣಗಳಿರುತ್ತದೆ. ಒಂದು ಒಳ್ಳೆಯದು. ಮತ್ತೊಂದು ಕೆಟ್ಟದ್ದು. ಆ ಕೆಟ್ಟ ಗುಣಗಳನ್ನು ‘ರಕ್ಕಸ’ ಎನ್ನಬಹುದು. ಅದನ್ನು ಹೇಗೆ ನಾಯಕ ಮೀರುತ್ತಾನೆ ಎನ್ನುವುದು ಚಿತ್ರದ ಕಥೆ. ಇದೊಂದು ಕ್ರೈಮ್‍ ಥ್ರಿಲ್ಲರ್‍ ಚಿತ್ರ. ಕೊಳ್ಳೇಗಾಲ ಹಿನ್ನೆಲೆಯ ಕಥೆ ಇದು. ಅಲ್ಲೊಂದು ಊರಿನಲ್ಲಿ ಕಥೆ ನಡೆಯುತ್ತದೆ’ ಎಂದರು.

‘ರಕ್ಕಸಪುರದೊಳ್‍’ ಚಿತ್ರದಲ್ಲಿ ರಾಜ್‍ ಶೆಟ್ಟಿ ಜೊತೆಗೆ ‘ಒಂದು ಸರಳ ಪ್ರೇಮಕಥೆ’ ಚಿತ್ರದ ಖ್ಯಾತಿಯ ಸ್ವಾತಿಷ್ಟ ಕೃಷ್ಣನ್, ಅರ್ಚನಾ ಕೊಟ್ಟಿಗೆ, ಬಿ. ಸುರೇಶ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ‌ ಸಂಗೀತ, ವಿಲಿಯಂ ಡೇವಿಡ್ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago