ಮನರಂಜನೆ

ಬಾಲಿವುಡ್‍ಗೆ ರಾಜ್‍ ಶೆಟ್ಟಿ; ಅನುರಾಗ್‍ ಕಶ್ಯಪ್‍ ಚಿತ್ರದಲ್ಲಿ ನಟನೆ

ರಾಜ್‍ ಬಿ. ಶೆಟ್ಟಿ ಇತ್ತೀಚೆಗೆ ಬಹಳ ಸುದ್ದಿಯಲ್ಲಿದ್ದಾರೆ. ಅವರು ಈಗಾಗಲೇ ಅವರ ಒಂದು ಮಲಯಾಳಂ ಚಿತ್ರ ಬಿಡುಗಡೆಯಾಗಿದೆ. ಇನ್ನೊಂದು ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಕನ್ನಡದಲ್ಲಿ ಇತ್ತೀಚೆಗೆ ‘ರಕ್ಕಸಪುರದೊಳ್‍’ ಎಂಬ ಚಿತ್ರ ಶುರುವಾಗಿದೆ. ಈ ಮಧ್ಯೆ, ಅವರು ಬಾಲಿವುಡ್‍ಗೆ ಹೊರಟು ನಿಂತಿದ್ದಾರೆ.

ಹೌದು, ಹಿಂದಿಯ ಒಂದು ಚಿತ್ರದಲ್ಲಿ ರಾಜ್‍ ಶೆಟ್ಟಿ ನಟಿಸಿದ್ದಾರೆ. ಈ ಕುರಿತು ಕೆಲವು ದಿನಗಳಿಂದ ಗುಸುಗುಸು ಇದ್ದೇ ಇತ್ತು. ಇತ್ತೀಚೆಗೆ ‘ರಕ್ಕಸಪುರದೊಳ್’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ರಾಜ್‍ ಶೆಟ್ಟಿ, ಈ ವಿಷಯ ನಿಜ ಎಂದು ಒಪ್ಪಿಕೊಂಡಿದ್ದಾರೆ. ಬಾಲಿವುಡ್‍ನ ಖ್ಯಾತ ನಿರ್ದೇಶಕ ಅನುರಾಗ್‍ ಕಶ್ಯಪ್‍ ನಿರ್ದೇಶನದ ಚಿತ್ರವೊಂದರಲ್ಲಿ ನಟಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ರಾಜ್ ಶೆಟ್ಟಿ, ‘ನಾನು ಅನುರಾಗ್‍ ಕಶ್ಯಪ್‍ ಅವರ ದೊಡ್ಡ ಅಭಿಮಾನಿ. ಇತ್ತೀಚೆಗೆ ಅವರೊಂದು ಸ್ಟೇಟಸ್‍ ಹಾಕಿದ್ದರು. ಅದನ್ನು ನೋಡಿ, ‘ನಿಮ್ಮ ಚಿತ್ರಕ್ಕೆ ನನ್ನಿಂದ ಏನಾದರೂ ಸಹಾಯವಾಗಬೇಕಿದ್ದರೆ ಹೇಳಿ’ ಎಂದು ಮೆಸೇಜ್‍ ಹಾಕಿದ್ದೆ. ಅದಕ್ಕೆ ಅವರು ಒಂದು ಅತಿಥಿ ಪಾತ್ರದಲ್ಲಿ ನಟಿಸುವುದಕ್ಕೆ ಸಾಧ್ಯವಾ ಎಂದು ಕೇಳಿದ್ದರು. ಅವರ ಚಿತ್ರಗಳಲ್ಲಾದರೆ, ಸುಮ್ಮನೆ ಅಲ್ಲಿಂದ ಇಲ್ಲಿಗೆ ಹಾದು ಹೋಗುವ ಪಾತ್ರದಲ್ಲಾದರೂ ನಾನು ನಟಿಸುವುದಕ್ಕೆ ತಯಾರು. ಅವರಿಗೆ ಅದನ್ನೇ ಹೇಳಿದ್ದೆ. ಏಕೆಂದರೆ, ನಾನು ಅವರಿಂದ ಬಹಳ ವಿಷಯ ಕಲಿತಿದ್ದೇನೆ. ಅವರ ಸಿನಿಮಾ ನೋಡಿ ಬೆಳೆದಿದ್ದೇನೆ ಮತ್ತು ಅವರ ಋಣದಲ್ಲಿದ್ದೇನೆ. ಅವರು ಓಕೆ ಅಂದರು. ಮಿಕ್ಕಂತೆ ಪಾತ್ರದ ಬಗ್ಗೆ ಹೆಚ್ಚು ವಿಷಯ ಗೊತ್ತಿಲ್ಲ. ಸದ್ಯದಲ್ಲೇ ಹೋಗಿ ಚಿತ್ರೀಕರಣದಲ್ಲಿ ಭಾಗವಹಿಸುತ್ತೇನೆ’ ಎಂದರು.

ರಾಜ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಗರುಡ ಗಮನ ಋಷಭ ವಾಹನ’ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ಚಿತ್ರ ನೋಡಿ ಅನುರಾಗ್ ಕಶ್ಯಪ್‍ ಬಹಳ ಒಳ್ಳೆಯ ಮಾತುಗಳನ್ನು ಆಡಿದ್ದರು. ಶೆಟ್ಟಿ ಕೆಲಸವನ್ನು ಹೊಗಳಿದ್ದಾರೆ. ಆದರೆ, ಅದನ್ನು ತಾನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎನ್ನುತ್ತಾರೆ ರಾಜ್‍. ‘ಅದನ್ನು ಗಂಭೀರವಾಗಿ ತೆಗೆದುಕೊಂಡರೆ, ನಾವು ಸಮರಾಗಿ ಆಗಿಬಿಡುತ್ತೀವಿ. ಅವರು ನನ್ನ ಸ್ಫೂರ್ತಿ. ಅವರ ಸಮನಾಗಿ ಗುರುತಿಸಿಕೊಳ್ಳುವ ಯಾವುದೇ ಆಸಕ್ತಿ ಇಲ್ಲ. ನನಗೆ ಅವರ ಕೆಲಸ ಇಷ್ಟ. ನನಗೆ ಅವರು ಮತ್ತೊಮ್ಮೆ ಗೆಲ್ಲಬೇಕು, ಮತ್ತೆ ಅವರು ಒಂದಿಷ್ಟು ಒಳ್ಳೆಯ ಚಿತ್ರಗಳನ್ನು ಕೊಡಬೇಕು ಎಂಬುದಷ್ಟೇ ಆಸೆ. ಎತ್ತರವಿರುವ ಬೆಟ್ಟವನ್ನು ದೂರದಿಂದಲೇ ನೋಡಿ ಖುಷಿಪಡಬೇಕು, ಹತ್ತಿರ ಹೋಗುವ ಪ್ರಯತ್ನ ಮಾಡಬಾರದು’ ಎಂಬುದು ರಾಜ್‍ ಅಭಿಪ್ರಾಯ.

ಭೂಮಿಕಾ

Recent Posts

ಕೆಟ್ಟ ಯುದ್ಧವೊಂದರ ಕೆಲವು ಒಳ್ಳೆಯ ಅಡ್ಡ ಪರಿಣಾಮಗಳು

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…

7 mins ago

ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣೆಗೆ ಕಾರ್ಯತಂತ್ರ

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…

13 mins ago

ಚಿತ್ರರಂಗದಲ್ಲಿ ಭರವಸೆ ಮೂಡಿಸುತ್ತಿರುವ ಕೊತ್ತೇಗಾಲದ ಯುವಕ ಮನ್ವಿತ್

ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ…

18 mins ago

ಒಳಚರಂಡಿ ಅವ್ಯವಸ್ಥೆ ಸರಿಪಡಿಸಿದ ತಿ.ನರಸೀಪುರ ಪುರಸಭೆ

ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ…

21 mins ago

ವಾಣಿಜ್ಯ ಗ್ಯಾಸ್ ಕೊರತೆ; ತರಕಾರಿ ಬೆಲೆ ಕುಸಿತ

ಮೈಸೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಪರಿಣಾಮವಾಗಿ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆಯಾಗಿ…

24 mins ago

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

10 hours ago