ಮನರಂಜನೆ

ಬಾಲಿವುಡ್‍ಗೆ ರಾಜ್‍ ಶೆಟ್ಟಿ; ಅನುರಾಗ್‍ ಕಶ್ಯಪ್‍ ಚಿತ್ರದಲ್ಲಿ ನಟನೆ

ರಾಜ್‍ ಬಿ. ಶೆಟ್ಟಿ ಇತ್ತೀಚೆಗೆ ಬಹಳ ಸುದ್ದಿಯಲ್ಲಿದ್ದಾರೆ. ಅವರು ಈಗಾಗಲೇ ಅವರ ಒಂದು ಮಲಯಾಳಂ ಚಿತ್ರ ಬಿಡುಗಡೆಯಾಗಿದೆ. ಇನ್ನೊಂದು ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಕನ್ನಡದಲ್ಲಿ ಇತ್ತೀಚೆಗೆ ‘ರಕ್ಕಸಪುರದೊಳ್‍’ ಎಂಬ ಚಿತ್ರ ಶುರುವಾಗಿದೆ. ಈ ಮಧ್ಯೆ, ಅವರು ಬಾಲಿವುಡ್‍ಗೆ ಹೊರಟು ನಿಂತಿದ್ದಾರೆ.

ಹೌದು, ಹಿಂದಿಯ ಒಂದು ಚಿತ್ರದಲ್ಲಿ ರಾಜ್‍ ಶೆಟ್ಟಿ ನಟಿಸಿದ್ದಾರೆ. ಈ ಕುರಿತು ಕೆಲವು ದಿನಗಳಿಂದ ಗುಸುಗುಸು ಇದ್ದೇ ಇತ್ತು. ಇತ್ತೀಚೆಗೆ ‘ರಕ್ಕಸಪುರದೊಳ್’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ರಾಜ್‍ ಶೆಟ್ಟಿ, ಈ ವಿಷಯ ನಿಜ ಎಂದು ಒಪ್ಪಿಕೊಂಡಿದ್ದಾರೆ. ಬಾಲಿವುಡ್‍ನ ಖ್ಯಾತ ನಿರ್ದೇಶಕ ಅನುರಾಗ್‍ ಕಶ್ಯಪ್‍ ನಿರ್ದೇಶನದ ಚಿತ್ರವೊಂದರಲ್ಲಿ ನಟಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ರಾಜ್ ಶೆಟ್ಟಿ, ‘ನಾನು ಅನುರಾಗ್‍ ಕಶ್ಯಪ್‍ ಅವರ ದೊಡ್ಡ ಅಭಿಮಾನಿ. ಇತ್ತೀಚೆಗೆ ಅವರೊಂದು ಸ್ಟೇಟಸ್‍ ಹಾಕಿದ್ದರು. ಅದನ್ನು ನೋಡಿ, ‘ನಿಮ್ಮ ಚಿತ್ರಕ್ಕೆ ನನ್ನಿಂದ ಏನಾದರೂ ಸಹಾಯವಾಗಬೇಕಿದ್ದರೆ ಹೇಳಿ’ ಎಂದು ಮೆಸೇಜ್‍ ಹಾಕಿದ್ದೆ. ಅದಕ್ಕೆ ಅವರು ಒಂದು ಅತಿಥಿ ಪಾತ್ರದಲ್ಲಿ ನಟಿಸುವುದಕ್ಕೆ ಸಾಧ್ಯವಾ ಎಂದು ಕೇಳಿದ್ದರು. ಅವರ ಚಿತ್ರಗಳಲ್ಲಾದರೆ, ಸುಮ್ಮನೆ ಅಲ್ಲಿಂದ ಇಲ್ಲಿಗೆ ಹಾದು ಹೋಗುವ ಪಾತ್ರದಲ್ಲಾದರೂ ನಾನು ನಟಿಸುವುದಕ್ಕೆ ತಯಾರು. ಅವರಿಗೆ ಅದನ್ನೇ ಹೇಳಿದ್ದೆ. ಏಕೆಂದರೆ, ನಾನು ಅವರಿಂದ ಬಹಳ ವಿಷಯ ಕಲಿತಿದ್ದೇನೆ. ಅವರ ಸಿನಿಮಾ ನೋಡಿ ಬೆಳೆದಿದ್ದೇನೆ ಮತ್ತು ಅವರ ಋಣದಲ್ಲಿದ್ದೇನೆ. ಅವರು ಓಕೆ ಅಂದರು. ಮಿಕ್ಕಂತೆ ಪಾತ್ರದ ಬಗ್ಗೆ ಹೆಚ್ಚು ವಿಷಯ ಗೊತ್ತಿಲ್ಲ. ಸದ್ಯದಲ್ಲೇ ಹೋಗಿ ಚಿತ್ರೀಕರಣದಲ್ಲಿ ಭಾಗವಹಿಸುತ್ತೇನೆ’ ಎಂದರು.

ರಾಜ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಗರುಡ ಗಮನ ಋಷಭ ವಾಹನ’ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ಚಿತ್ರ ನೋಡಿ ಅನುರಾಗ್ ಕಶ್ಯಪ್‍ ಬಹಳ ಒಳ್ಳೆಯ ಮಾತುಗಳನ್ನು ಆಡಿದ್ದರು. ಶೆಟ್ಟಿ ಕೆಲಸವನ್ನು ಹೊಗಳಿದ್ದಾರೆ. ಆದರೆ, ಅದನ್ನು ತಾನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎನ್ನುತ್ತಾರೆ ರಾಜ್‍. ‘ಅದನ್ನು ಗಂಭೀರವಾಗಿ ತೆಗೆದುಕೊಂಡರೆ, ನಾವು ಸಮರಾಗಿ ಆಗಿಬಿಡುತ್ತೀವಿ. ಅವರು ನನ್ನ ಸ್ಫೂರ್ತಿ. ಅವರ ಸಮನಾಗಿ ಗುರುತಿಸಿಕೊಳ್ಳುವ ಯಾವುದೇ ಆಸಕ್ತಿ ಇಲ್ಲ. ನನಗೆ ಅವರ ಕೆಲಸ ಇಷ್ಟ. ನನಗೆ ಅವರು ಮತ್ತೊಮ್ಮೆ ಗೆಲ್ಲಬೇಕು, ಮತ್ತೆ ಅವರು ಒಂದಿಷ್ಟು ಒಳ್ಳೆಯ ಚಿತ್ರಗಳನ್ನು ಕೊಡಬೇಕು ಎಂಬುದಷ್ಟೇ ಆಸೆ. ಎತ್ತರವಿರುವ ಬೆಟ್ಟವನ್ನು ದೂರದಿಂದಲೇ ನೋಡಿ ಖುಷಿಪಡಬೇಕು, ಹತ್ತಿರ ಹೋಗುವ ಪ್ರಯತ್ನ ಮಾಡಬಾರದು’ ಎಂಬುದು ರಾಜ್‍ ಅಭಿಪ್ರಾಯ.

ಭೂಮಿಕಾ

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

58 mins ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 hour ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

6 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

6 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

6 hours ago