ಮನರಂಜನೆ

ಬಾಲಿವುಡ್‍ಗೆ ರಾಜ್‍ ಶೆಟ್ಟಿ; ಅನುರಾಗ್‍ ಕಶ್ಯಪ್‍ ಚಿತ್ರದಲ್ಲಿ ನಟನೆ

ರಾಜ್‍ ಬಿ. ಶೆಟ್ಟಿ ಇತ್ತೀಚೆಗೆ ಬಹಳ ಸುದ್ದಿಯಲ್ಲಿದ್ದಾರೆ. ಅವರು ಈಗಾಗಲೇ ಅವರ ಒಂದು ಮಲಯಾಳಂ ಚಿತ್ರ ಬಿಡುಗಡೆಯಾಗಿದೆ. ಇನ್ನೊಂದು ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಕನ್ನಡದಲ್ಲಿ ಇತ್ತೀಚೆಗೆ ‘ರಕ್ಕಸಪುರದೊಳ್‍’ ಎಂಬ ಚಿತ್ರ ಶುರುವಾಗಿದೆ. ಈ ಮಧ್ಯೆ, ಅವರು ಬಾಲಿವುಡ್‍ಗೆ ಹೊರಟು ನಿಂತಿದ್ದಾರೆ.

ಹೌದು, ಹಿಂದಿಯ ಒಂದು ಚಿತ್ರದಲ್ಲಿ ರಾಜ್‍ ಶೆಟ್ಟಿ ನಟಿಸಿದ್ದಾರೆ. ಈ ಕುರಿತು ಕೆಲವು ದಿನಗಳಿಂದ ಗುಸುಗುಸು ಇದ್ದೇ ಇತ್ತು. ಇತ್ತೀಚೆಗೆ ‘ರಕ್ಕಸಪುರದೊಳ್’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ರಾಜ್‍ ಶೆಟ್ಟಿ, ಈ ವಿಷಯ ನಿಜ ಎಂದು ಒಪ್ಪಿಕೊಂಡಿದ್ದಾರೆ. ಬಾಲಿವುಡ್‍ನ ಖ್ಯಾತ ನಿರ್ದೇಶಕ ಅನುರಾಗ್‍ ಕಶ್ಯಪ್‍ ನಿರ್ದೇಶನದ ಚಿತ್ರವೊಂದರಲ್ಲಿ ನಟಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ರಾಜ್ ಶೆಟ್ಟಿ, ‘ನಾನು ಅನುರಾಗ್‍ ಕಶ್ಯಪ್‍ ಅವರ ದೊಡ್ಡ ಅಭಿಮಾನಿ. ಇತ್ತೀಚೆಗೆ ಅವರೊಂದು ಸ್ಟೇಟಸ್‍ ಹಾಕಿದ್ದರು. ಅದನ್ನು ನೋಡಿ, ‘ನಿಮ್ಮ ಚಿತ್ರಕ್ಕೆ ನನ್ನಿಂದ ಏನಾದರೂ ಸಹಾಯವಾಗಬೇಕಿದ್ದರೆ ಹೇಳಿ’ ಎಂದು ಮೆಸೇಜ್‍ ಹಾಕಿದ್ದೆ. ಅದಕ್ಕೆ ಅವರು ಒಂದು ಅತಿಥಿ ಪಾತ್ರದಲ್ಲಿ ನಟಿಸುವುದಕ್ಕೆ ಸಾಧ್ಯವಾ ಎಂದು ಕೇಳಿದ್ದರು. ಅವರ ಚಿತ್ರಗಳಲ್ಲಾದರೆ, ಸುಮ್ಮನೆ ಅಲ್ಲಿಂದ ಇಲ್ಲಿಗೆ ಹಾದು ಹೋಗುವ ಪಾತ್ರದಲ್ಲಾದರೂ ನಾನು ನಟಿಸುವುದಕ್ಕೆ ತಯಾರು. ಅವರಿಗೆ ಅದನ್ನೇ ಹೇಳಿದ್ದೆ. ಏಕೆಂದರೆ, ನಾನು ಅವರಿಂದ ಬಹಳ ವಿಷಯ ಕಲಿತಿದ್ದೇನೆ. ಅವರ ಸಿನಿಮಾ ನೋಡಿ ಬೆಳೆದಿದ್ದೇನೆ ಮತ್ತು ಅವರ ಋಣದಲ್ಲಿದ್ದೇನೆ. ಅವರು ಓಕೆ ಅಂದರು. ಮಿಕ್ಕಂತೆ ಪಾತ್ರದ ಬಗ್ಗೆ ಹೆಚ್ಚು ವಿಷಯ ಗೊತ್ತಿಲ್ಲ. ಸದ್ಯದಲ್ಲೇ ಹೋಗಿ ಚಿತ್ರೀಕರಣದಲ್ಲಿ ಭಾಗವಹಿಸುತ್ತೇನೆ’ ಎಂದರು.

ರಾಜ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಗರುಡ ಗಮನ ಋಷಭ ವಾಹನ’ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ಚಿತ್ರ ನೋಡಿ ಅನುರಾಗ್ ಕಶ್ಯಪ್‍ ಬಹಳ ಒಳ್ಳೆಯ ಮಾತುಗಳನ್ನು ಆಡಿದ್ದರು. ಶೆಟ್ಟಿ ಕೆಲಸವನ್ನು ಹೊಗಳಿದ್ದಾರೆ. ಆದರೆ, ಅದನ್ನು ತಾನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎನ್ನುತ್ತಾರೆ ರಾಜ್‍. ‘ಅದನ್ನು ಗಂಭೀರವಾಗಿ ತೆಗೆದುಕೊಂಡರೆ, ನಾವು ಸಮರಾಗಿ ಆಗಿಬಿಡುತ್ತೀವಿ. ಅವರು ನನ್ನ ಸ್ಫೂರ್ತಿ. ಅವರ ಸಮನಾಗಿ ಗುರುತಿಸಿಕೊಳ್ಳುವ ಯಾವುದೇ ಆಸಕ್ತಿ ಇಲ್ಲ. ನನಗೆ ಅವರ ಕೆಲಸ ಇಷ್ಟ. ನನಗೆ ಅವರು ಮತ್ತೊಮ್ಮೆ ಗೆಲ್ಲಬೇಕು, ಮತ್ತೆ ಅವರು ಒಂದಿಷ್ಟು ಒಳ್ಳೆಯ ಚಿತ್ರಗಳನ್ನು ಕೊಡಬೇಕು ಎಂಬುದಷ್ಟೇ ಆಸೆ. ಎತ್ತರವಿರುವ ಬೆಟ್ಟವನ್ನು ದೂರದಿಂದಲೇ ನೋಡಿ ಖುಷಿಪಡಬೇಕು, ಹತ್ತಿರ ಹೋಗುವ ಪ್ರಯತ್ನ ಮಾಡಬಾರದು’ ಎಂಬುದು ರಾಜ್‍ ಅಭಿಪ್ರಾಯ.

ಭೂಮಿಕಾ

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago