ಮನರಂಜನೆ

ಬಾಲಿವುಡ್‍ಗೆ ರಾಜ್‍ ಶೆಟ್ಟಿ; ಅನುರಾಗ್‍ ಕಶ್ಯಪ್‍ ಚಿತ್ರದಲ್ಲಿ ನಟನೆ

ರಾಜ್‍ ಬಿ. ಶೆಟ್ಟಿ ಇತ್ತೀಚೆಗೆ ಬಹಳ ಸುದ್ದಿಯಲ್ಲಿದ್ದಾರೆ. ಅವರು ಈಗಾಗಲೇ ಅವರ ಒಂದು ಮಲಯಾಳಂ ಚಿತ್ರ ಬಿಡುಗಡೆಯಾಗಿದೆ. ಇನ್ನೊಂದು ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಕನ್ನಡದಲ್ಲಿ ಇತ್ತೀಚೆಗೆ ‘ರಕ್ಕಸಪುರದೊಳ್‍’ ಎಂಬ ಚಿತ್ರ ಶುರುವಾಗಿದೆ. ಈ ಮಧ್ಯೆ, ಅವರು ಬಾಲಿವುಡ್‍ಗೆ ಹೊರಟು ನಿಂತಿದ್ದಾರೆ.

ಹೌದು, ಹಿಂದಿಯ ಒಂದು ಚಿತ್ರದಲ್ಲಿ ರಾಜ್‍ ಶೆಟ್ಟಿ ನಟಿಸಿದ್ದಾರೆ. ಈ ಕುರಿತು ಕೆಲವು ದಿನಗಳಿಂದ ಗುಸುಗುಸು ಇದ್ದೇ ಇತ್ತು. ಇತ್ತೀಚೆಗೆ ‘ರಕ್ಕಸಪುರದೊಳ್’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ರಾಜ್‍ ಶೆಟ್ಟಿ, ಈ ವಿಷಯ ನಿಜ ಎಂದು ಒಪ್ಪಿಕೊಂಡಿದ್ದಾರೆ. ಬಾಲಿವುಡ್‍ನ ಖ್ಯಾತ ನಿರ್ದೇಶಕ ಅನುರಾಗ್‍ ಕಶ್ಯಪ್‍ ನಿರ್ದೇಶನದ ಚಿತ್ರವೊಂದರಲ್ಲಿ ನಟಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ರಾಜ್ ಶೆಟ್ಟಿ, ‘ನಾನು ಅನುರಾಗ್‍ ಕಶ್ಯಪ್‍ ಅವರ ದೊಡ್ಡ ಅಭಿಮಾನಿ. ಇತ್ತೀಚೆಗೆ ಅವರೊಂದು ಸ್ಟೇಟಸ್‍ ಹಾಕಿದ್ದರು. ಅದನ್ನು ನೋಡಿ, ‘ನಿಮ್ಮ ಚಿತ್ರಕ್ಕೆ ನನ್ನಿಂದ ಏನಾದರೂ ಸಹಾಯವಾಗಬೇಕಿದ್ದರೆ ಹೇಳಿ’ ಎಂದು ಮೆಸೇಜ್‍ ಹಾಕಿದ್ದೆ. ಅದಕ್ಕೆ ಅವರು ಒಂದು ಅತಿಥಿ ಪಾತ್ರದಲ್ಲಿ ನಟಿಸುವುದಕ್ಕೆ ಸಾಧ್ಯವಾ ಎಂದು ಕೇಳಿದ್ದರು. ಅವರ ಚಿತ್ರಗಳಲ್ಲಾದರೆ, ಸುಮ್ಮನೆ ಅಲ್ಲಿಂದ ಇಲ್ಲಿಗೆ ಹಾದು ಹೋಗುವ ಪಾತ್ರದಲ್ಲಾದರೂ ನಾನು ನಟಿಸುವುದಕ್ಕೆ ತಯಾರು. ಅವರಿಗೆ ಅದನ್ನೇ ಹೇಳಿದ್ದೆ. ಏಕೆಂದರೆ, ನಾನು ಅವರಿಂದ ಬಹಳ ವಿಷಯ ಕಲಿತಿದ್ದೇನೆ. ಅವರ ಸಿನಿಮಾ ನೋಡಿ ಬೆಳೆದಿದ್ದೇನೆ ಮತ್ತು ಅವರ ಋಣದಲ್ಲಿದ್ದೇನೆ. ಅವರು ಓಕೆ ಅಂದರು. ಮಿಕ್ಕಂತೆ ಪಾತ್ರದ ಬಗ್ಗೆ ಹೆಚ್ಚು ವಿಷಯ ಗೊತ್ತಿಲ್ಲ. ಸದ್ಯದಲ್ಲೇ ಹೋಗಿ ಚಿತ್ರೀಕರಣದಲ್ಲಿ ಭಾಗವಹಿಸುತ್ತೇನೆ’ ಎಂದರು.

ರಾಜ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಗರುಡ ಗಮನ ಋಷಭ ವಾಹನ’ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ಚಿತ್ರ ನೋಡಿ ಅನುರಾಗ್ ಕಶ್ಯಪ್‍ ಬಹಳ ಒಳ್ಳೆಯ ಮಾತುಗಳನ್ನು ಆಡಿದ್ದರು. ಶೆಟ್ಟಿ ಕೆಲಸವನ್ನು ಹೊಗಳಿದ್ದಾರೆ. ಆದರೆ, ಅದನ್ನು ತಾನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎನ್ನುತ್ತಾರೆ ರಾಜ್‍. ‘ಅದನ್ನು ಗಂಭೀರವಾಗಿ ತೆಗೆದುಕೊಂಡರೆ, ನಾವು ಸಮರಾಗಿ ಆಗಿಬಿಡುತ್ತೀವಿ. ಅವರು ನನ್ನ ಸ್ಫೂರ್ತಿ. ಅವರ ಸಮನಾಗಿ ಗುರುತಿಸಿಕೊಳ್ಳುವ ಯಾವುದೇ ಆಸಕ್ತಿ ಇಲ್ಲ. ನನಗೆ ಅವರ ಕೆಲಸ ಇಷ್ಟ. ನನಗೆ ಅವರು ಮತ್ತೊಮ್ಮೆ ಗೆಲ್ಲಬೇಕು, ಮತ್ತೆ ಅವರು ಒಂದಿಷ್ಟು ಒಳ್ಳೆಯ ಚಿತ್ರಗಳನ್ನು ಕೊಡಬೇಕು ಎಂಬುದಷ್ಟೇ ಆಸೆ. ಎತ್ತರವಿರುವ ಬೆಟ್ಟವನ್ನು ದೂರದಿಂದಲೇ ನೋಡಿ ಖುಷಿಪಡಬೇಕು, ಹತ್ತಿರ ಹೋಗುವ ಪ್ರಯತ್ನ ಮಾಡಬಾರದು’ ಎಂಬುದು ರಾಜ್‍ ಅಭಿಪ್ರಾಯ.

ಭೂಮಿಕಾ

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

3 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

3 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

3 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

4 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

4 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

4 hours ago