ಮನರಂಜನೆ

ರಾಜೇಶ್ ಮೊಮ್ಮಗನ ‘ಮುಜುಗರ’; ಚಿತ್ರಕ್ಕೆ ಚಾಲನೆ

ಕನ್ನಡದ ಜನಪ್ರಿಯ ನಟರಲ್ಲೊಬ್ಬರಾದ ರಾಜೇಶ್‍ ಅವರ ಮಗಳು ಆಶಾರಾಣಿ, ಶಿವರಾಜಕುಮಾರ್‍ ಅಭಿನಯದ ‘ರಥಸಪ್ತಮಿ’ ಚಿತ್ರಕ್ಕೆ ನಾಯಕಿಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಅವರ ಮೊಮ್ಮಗ (ಮಗನ ಮಗ) ಚಿತ್ರರಂಗದಲ್ಲಿ ನಾಯಕನಾಗಿ ಗುರುತಿಸಿಕೊಳ್ಳುವುದಕ್ಕೆ ಸಜ್ಜಾಗಿದ್ದು, ಮೊದಲ ಹಂತವಾಗಿ ‘ಮುಜುಗರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ರಾಜೇಶ್ ಅವರ ಮೊಮ್ಮಗ ಸಾಯಿನಂದ್ ಅಭಿನಯದ ‘ಮುಜುಗರ’ ಚಿತ್ರವು ಇತ್ತೀಚೆಗೆ ಪ್ರಾರಂಭವಾಯಿತು, ಶಾಂತ ಶ್ರೀನಿವಾಸ್ ನಿರ್ಮಿಸುತ್ತಿರುವ ಈ ಚಿತ್ರವನ್ನು ತರುಣ್ ಎನ್ (ಜ್ಯೋತಿಪ್ರಿಯ) ನಿರ್ದೇಶಿಸುತ್ತಿದ್ದಾರೆ. ಚಿತ್ರದ ಮೊದಲ ಸನ್ನಿವೇಶಕ್ಕೆ ಪ್ರಮೋದ್ ಶೆಟ್ಟಿ ಆರಂಭ ಫಲಕ ತೋರಿದರು. ನಿರ್ಮಾಪಕಿ ಶಾಂತ ಶ್ರೀನಿವಾಸ್ ಕ್ಯಾಮೆರಾ ಚಾಲನೆ ಮಾಡಿದರು.

‘ಮುಜುಗರ’ ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ತರುಣ್‍, ‘ನನಗೂ, ಚಿತ್ರರಂಗಕ್ಕೂ 20 ವರ್ಷಗಳ ನಂಟು. ನಾಗಾಭರಣ, ಅನಂತರಾಜು, ಅಮರ್ ಹಾಗೂ ‘ಕಂಠಿ’ ಭರತ್ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ಸ್ವತಂತ್ರ ನಿರ್ದೇಶಕನಾಗಿ ಇದು ಮೊದಲ ಚಿತ್ರ. ‘ಮುಜುಗರ’ ಕಾಫಿ ತೋಟದ ಸುತ್ತ ನಡೆಯುವ ಪ್ರೇಮ ಕಥೆ. ರಾಜೇಶ್ ಅವರ ಮೊಮ್ಮಗ ಸಾಯಿನಂದ್ ನಾಯಕನಾಗಿ, ನಿವಿಷ್ಕಾ ಪಾಟೀಲ್‍ ಹಾಗೂ ತನು ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ. ಎರಡನೇ ನಾಯಕನಾಗಿ ಸುಭಾಷ್ ಹಾಗೂ ವಿಲನ್ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. ಡಿಸೆಂಬರ್.15ರಿಂದ ಸಕಲೇಶಪುರ, ಚಿಕ್ಕಮಗಳೂರು, ಹೊರನಾಡು, ಕಳಸ, ಮಡಿಕೇರಿ ಮುಂತಾದ ಕಡೆಯ ಚಿತ್ರೀಕರಣ ನಡೆಯಲಿದೆ’ ಎಂದರು.

ನಿರ್ಮಾಪಕರಿಗೆ ಇದು ಎರಡನೆಯ ಚಿತ್ರ. ಇದಕ್ಕೂ ಮೊದಲು ಅವರ ಸಂಸ್ಥೆಯಿಂದ ‘ಎಲ್ಲಿ ಆಡೋದು ನಾವು ಎಲ್ಲಿ ಆಡೋದು’ ಎಂಬ ಮಕ್ಕಳ ಚಿತ್ರ ತಯಾರಾಗಿತ್ತು. ಆ ಚಿತ್ರಕ್ಕೆ ರಾಜ್ಯಪ್ರಶಸ್ತಿ ಬಂದಿತ್ತು.

ತಾನು ನಟನಾಗಲು ತಾತ ರಾಜೇಶ್‍ ಅವರೇ ಸ್ಫೂರ್ತಿ ಎಂದ ಸಾಯಿನಂದ್‍, ‘ಇಂದು ಅವರಿದ್ದಿದ್ದರೆ ತುಂಬಾ ಖುಷಿ ಪಡುತ್ತಿದ್ದರು. ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಶಾಲೆಯಲ್ಲಿ ಅಭಿನಯ ಕಲಿತಿದ್ದೇನೆ. ಇದು ನಾಯಕನಾಗಿ ನನ್ನ ಮೊದಲ ಚಿತ್ರ. ಪಾತ್ರ ಬಹಳ ಚೆನ್ನಾಗಿದೆ’ ಎಂದರು.

‘ಮುಜುಗರ’ ಚಿತ್ರಕ್ಕೆ ಜೈಆನಂದ್ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

6 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

6 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

7 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

8 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

9 hours ago