ಮನರಂಜನೆ

ರಜನಿಕಾಂತ್‍, ‘ಶೋಲೆ’ಗೆ 50 ವರ್ಷಗಳ ಸಂಭ್ರಮ …

2025, ಕನ್ನಡ ಚಿತ್ರರಂಗಕ್ಕೆ ಬಹಳ ಮಹತ್ವದ ವರ್ಷ. ಪಾರ್ವತಮ್ಮ ರಾಜಕುಮಾರ್ ನಿರ್ಮಾಪಕಿಯಾಗಿ 50 ವರ್ಷಗಳಾಗಿವೆ. ರಾಜೇಂದ್ರ ಸಿಂಗ್‍ ಬಾಬು ನಿರ್ದೇಶಕರಾಗಿ 50 ವರ್ಷಗಳಾಗಿವೆ. ಅದೇ ರೀತಿ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್‍ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಹಾಗೂ ಭಾರತದ ಅತ್ಯಂತ ಜನಪ್ರಿಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ‘ಶೋಲೆ’ ಚಿತ್ರಕ್ಕೂ ಇದೀಗ 50 ವರ್ಷಗಳ ಸಂಭ್ರಮ.

ರಜನಿಕಾಂತ್‍ ಅಭಿನಯದ ಮೊದಲ ಚಿತ್ರ ‘ಅಪೂರ್ವ ರಾಗಂಗಳ್‍’ ಚಿತ್ರಕ್ಕೆ ಇದೀಗ 50 ವರ್ಷಗಳು. ಕೆ. ಬಾಲಚಂದರ್ ನಿರ್ದೇಶನ ‘ಅಪೂರ್ವ ರಾಗಂಗಳ್’ ಬಿಡುಗಡೆಯಾಗಿದ್ದು 1975ರ ಆಗಸ್ಟ್ 15ರಂದು. ಹಾಗಾಗಿ, ಶುಕ್ರವಾರ ಈ ಚಿತ್ರಕ್ಕೆ ಮತ್ತು ರಜನಿಕಾಂತ್‍ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳಾಗಿವೆ. ಇದೇ ಸಂದರ್ಭದಲ್ಲಿ ರಜನಿಕಾಂತ್‍ ಅಭಿನಯದ 171ನೇ ಚಿತ್ರ ‘ಕೂಲಿ’ ಬಿಡುಗಡೆಯಾಗಿರುವುದು ವಿಶೇಷ.

‘ಅಪೂರ್ವ ರಾಗಂಗಳ್‍’ಗೂ ಮೊದಲೇ ರಜನಿಕಾಂತ್‍, ಪುಟ್ಟಣ್ಣ ಕಣಗಾಲ್‍ ನಿರ್ದೇಶನದ ‘ಕಥಾ ಸಂಗಮ’ ಚಿತ್ರದಲ್ಲಿ ನಟಿಸಿದ್ದರು. ಆದರೆ, ಚಿತ್ರ ಕಾರಣಾಂತರಗಳಿಂದ ತಡವಾಯಿತು. ಈ ಮಧ್ಯೆ ಬಾಲಚಂದರ್ ತಮ್ಮ ಹೊಸ ಚಿತ್ರ ‘ಅಪೂರ್ವ ರಾಗಂಗಳ್‍’ಗೆ ಹೊಸ ಚಿತ್ರಕ್ಕೆ ಹೊಸ ನಟನನ್ನು ಹುಡುಕುತ್ತಿದ್ದರಂತೆ. ಅಷ್ಟರಲ್ಲಿ ಅವರ ಕಣ್ಣಿಗೆ ರಜನಿಕಾಂತ್‍ ಬಿದ್ದಿದ್ದಾರೆ. ಪುಟ್ಟಣ್ಣ ಪರಿಚಯಿಸಿದ ಹುಡುಗ ಎಂಬ ಕಾರಣಕ್ಕೆ ರಜನಿಕಾಂತ್‍ ಅವರಿಗೆ ಬಾಲಚಂದರ್ ಅವಕಾಶ ಕೊಟ್ಟದ್ದಾರೆ. ಈ ಚಿತ್ರ ಮೊದಲು ಬಿಡುಗಡೆಯಾಗಿದ್ದರಿಂದ, ಇದು ರಜನಿಕಾಂತ್‍ ಅವರ ಮೊದಲ ಚಿತ್ರವಾಗಿದೆ. ಈ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಕಮಲ್ ಹಾಸನ್‍, ಸುಂದರರಾಜನ್‍, ಶ್ರೀವಿದ್ಯಾ, ಜಯಸುಧಾ, ತಾಯ್‍ ನಾಗೇಶ್‍ ಮುಂತಾದವರು ನಟಿಸಿದ್ದರು.

ಇನ್ನು, ಭಾರತದ ಅತ್ಯಂತ ಜನಪ್ರಿಯ ಮತ್ತು ಅತೀ ಹೆಚ್ಚು ವೀಕ್ಷಣೆಗೊಳಗಾದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ‘ಶೋಲೆ’ ಚಿತ್ರ ಸಹ 1975ರ ಆಗಸ್ಟ್ 15ರಂದು ಬಿಡುಗಡೆಯಾಗಿ, ಈ ಸ್ವಾತಂತ್ರ್ಯ ದಿನಕ್ಕೆ 50 ವರ್ಷಗಳನ್ನು ಪೂರೈಸಿದೆ. ಅಮಿತಾಭ್‍ ಬಚ್ಚನ್‍, ಧರ್ಮೇಂದ್ರ, ಸಂಜೀವ್‍ ಕುಮಾರ್, ಅಮ್ಜದ್‍ ಖಾನ್, ಹೇಮಾ ಮಾಲಿನಿ, ಜಯಾ ಬಾಧುರಿ ಮುಂತಾದವರು ನಟಿಸಿದ್ದ ಈ ಚಿತ್ರವನ್ನು ರಮೇಶ್‍ ಸಿಪ್ಪಿ ನಿರ್ದೇಶನ ಮಾಡಿದ್ದರು. ಅವರ ತಂದೆ ಜಿ.ಪಿ. ಸಿಪ್ಪಿ ಚಿತ್ರವನ್ನು ನಿರ್ಮಿಸಿದ್ದರು. ಆ ಕಾಲದ ಅತ್ಯಂತ ಯಶಸ್ವಿ ಬರಹಗಾರ ಜೋಡಿಯಾದ ಸಲೀಂ-ಜಾವೇದ್‍, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

9 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

9 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

11 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

12 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

12 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

13 hours ago