ಮನರಂಜನೆ

ರಜನಿಕಾಂತ್‍, ‘ಶೋಲೆ’ಗೆ 50 ವರ್ಷಗಳ ಸಂಭ್ರಮ …

2025, ಕನ್ನಡ ಚಿತ್ರರಂಗಕ್ಕೆ ಬಹಳ ಮಹತ್ವದ ವರ್ಷ. ಪಾರ್ವತಮ್ಮ ರಾಜಕುಮಾರ್ ನಿರ್ಮಾಪಕಿಯಾಗಿ 50 ವರ್ಷಗಳಾಗಿವೆ. ರಾಜೇಂದ್ರ ಸಿಂಗ್‍ ಬಾಬು ನಿರ್ದೇಶಕರಾಗಿ 50 ವರ್ಷಗಳಾಗಿವೆ. ಅದೇ ರೀತಿ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್‍ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಹಾಗೂ ಭಾರತದ ಅತ್ಯಂತ ಜನಪ್ರಿಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ‘ಶೋಲೆ’ ಚಿತ್ರಕ್ಕೂ ಇದೀಗ 50 ವರ್ಷಗಳ ಸಂಭ್ರಮ.

ರಜನಿಕಾಂತ್‍ ಅಭಿನಯದ ಮೊದಲ ಚಿತ್ರ ‘ಅಪೂರ್ವ ರಾಗಂಗಳ್‍’ ಚಿತ್ರಕ್ಕೆ ಇದೀಗ 50 ವರ್ಷಗಳು. ಕೆ. ಬಾಲಚಂದರ್ ನಿರ್ದೇಶನ ‘ಅಪೂರ್ವ ರಾಗಂಗಳ್’ ಬಿಡುಗಡೆಯಾಗಿದ್ದು 1975ರ ಆಗಸ್ಟ್ 15ರಂದು. ಹಾಗಾಗಿ, ಶುಕ್ರವಾರ ಈ ಚಿತ್ರಕ್ಕೆ ಮತ್ತು ರಜನಿಕಾಂತ್‍ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳಾಗಿವೆ. ಇದೇ ಸಂದರ್ಭದಲ್ಲಿ ರಜನಿಕಾಂತ್‍ ಅಭಿನಯದ 171ನೇ ಚಿತ್ರ ‘ಕೂಲಿ’ ಬಿಡುಗಡೆಯಾಗಿರುವುದು ವಿಶೇಷ.

‘ಅಪೂರ್ವ ರಾಗಂಗಳ್‍’ಗೂ ಮೊದಲೇ ರಜನಿಕಾಂತ್‍, ಪುಟ್ಟಣ್ಣ ಕಣಗಾಲ್‍ ನಿರ್ದೇಶನದ ‘ಕಥಾ ಸಂಗಮ’ ಚಿತ್ರದಲ್ಲಿ ನಟಿಸಿದ್ದರು. ಆದರೆ, ಚಿತ್ರ ಕಾರಣಾಂತರಗಳಿಂದ ತಡವಾಯಿತು. ಈ ಮಧ್ಯೆ ಬಾಲಚಂದರ್ ತಮ್ಮ ಹೊಸ ಚಿತ್ರ ‘ಅಪೂರ್ವ ರಾಗಂಗಳ್‍’ಗೆ ಹೊಸ ಚಿತ್ರಕ್ಕೆ ಹೊಸ ನಟನನ್ನು ಹುಡುಕುತ್ತಿದ್ದರಂತೆ. ಅಷ್ಟರಲ್ಲಿ ಅವರ ಕಣ್ಣಿಗೆ ರಜನಿಕಾಂತ್‍ ಬಿದ್ದಿದ್ದಾರೆ. ಪುಟ್ಟಣ್ಣ ಪರಿಚಯಿಸಿದ ಹುಡುಗ ಎಂಬ ಕಾರಣಕ್ಕೆ ರಜನಿಕಾಂತ್‍ ಅವರಿಗೆ ಬಾಲಚಂದರ್ ಅವಕಾಶ ಕೊಟ್ಟದ್ದಾರೆ. ಈ ಚಿತ್ರ ಮೊದಲು ಬಿಡುಗಡೆಯಾಗಿದ್ದರಿಂದ, ಇದು ರಜನಿಕಾಂತ್‍ ಅವರ ಮೊದಲ ಚಿತ್ರವಾಗಿದೆ. ಈ ಚಿತ್ರದಲ್ಲಿ ರಜನಿಕಾಂತ್‍ ಜೊತೆಗೆ ಕಮಲ್ ಹಾಸನ್‍, ಸುಂದರರಾಜನ್‍, ಶ್ರೀವಿದ್ಯಾ, ಜಯಸುಧಾ, ತಾಯ್‍ ನಾಗೇಶ್‍ ಮುಂತಾದವರು ನಟಿಸಿದ್ದರು.

ಇನ್ನು, ಭಾರತದ ಅತ್ಯಂತ ಜನಪ್ರಿಯ ಮತ್ತು ಅತೀ ಹೆಚ್ಚು ವೀಕ್ಷಣೆಗೊಳಗಾದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾದ ‘ಶೋಲೆ’ ಚಿತ್ರ ಸಹ 1975ರ ಆಗಸ್ಟ್ 15ರಂದು ಬಿಡುಗಡೆಯಾಗಿ, ಈ ಸ್ವಾತಂತ್ರ್ಯ ದಿನಕ್ಕೆ 50 ವರ್ಷಗಳನ್ನು ಪೂರೈಸಿದೆ. ಅಮಿತಾಭ್‍ ಬಚ್ಚನ್‍, ಧರ್ಮೇಂದ್ರ, ಸಂಜೀವ್‍ ಕುಮಾರ್, ಅಮ್ಜದ್‍ ಖಾನ್, ಹೇಮಾ ಮಾಲಿನಿ, ಜಯಾ ಬಾಧುರಿ ಮುಂತಾದವರು ನಟಿಸಿದ್ದ ಈ ಚಿತ್ರವನ್ನು ರಮೇಶ್‍ ಸಿಪ್ಪಿ ನಿರ್ದೇಶನ ಮಾಡಿದ್ದರು. ಅವರ ತಂದೆ ಜಿ.ಪಿ. ಸಿಪ್ಪಿ ಚಿತ್ರವನ್ನು ನಿರ್ಮಿಸಿದ್ದರು. ಆ ಕಾಲದ ಅತ್ಯಂತ ಯಶಸ್ವಿ ಬರಹಗಾರ ಜೋಡಿಯಾದ ಸಲೀಂ-ಜಾವೇದ್‍, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

8 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

9 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

10 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

10 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

11 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

11 hours ago