ಮನರಂಜನೆ

ವೆಟ್ಟಾಯನ್ ನಷ್ಟವನ್ನು ತುಂಬಿ ಕೊಡುತ್ತಾರಾ ರಜನಿಕಾಂತ್?

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್ ಕಳೆದ ವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಕುರಿತು ಪ್ರೇಕ್ಷಕರಲ್ಲಿ ಇದ್ದ ಕ್ರೇಜ್‍ ಕಡಿಮೆ ಆಗುವುದರ ಜೊತೆಗೆ ಕಲೆಕ್ಷನ್‍ ಸಹ ಕಡಿಮೆಯಾಗಿದೆ. ಚಿತ್ರ ನಿರೀಕ್ಷಿತ ಹಣವನ್ನು ಗಳಿಸಲಿಲ್ಲ ಎಂದು ನಿರ್ಮಾಪಕರು, ರಜನಿಕಾಂತ್‍ ಅವರಿಗೆ ನಷ್ಟ ತುಂಬಿ ಕೊಡುವುದಕ್ಕೆ ಮನವಿ ಮಾಡಿಕೊಂಡಿದ್ದಾರಂತೆ. ಆದಷ್ಟು ಬೇಗ ಇನ್ನೊಂದು ಚಿತ್ರದಲ್ಲಿ ನಟಿಸುವುದಕ್ಕೆ ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ, ‘ವೆಟ್ಟಾಯನ್‍ ಚಿತ್ರದ ಮೊದಲ ವಾರದ ಗಳಿಕೆ 260 ಕೋಟಿ ರೂ.ಗಳು ಎಂಬ ಸುದ್ದಿ ಇದ್ದರೂ, ಚಿತ್ರ ಒಟ್ಟಾರೆ ಗಳಿಸಿದ್ದು ಕೇವಲ 207 ಕೋಟಿ ರೂ.ಗಳಂತೆ. ಇದರಿಂದ ನಿರ್ಮಾಪಕರಿಗೆ ಸಾಕಷ್ಟು ನಷ್ಟವಾಗಿದೆಯಂತೆ. ಹಾಗಾಗಿ, ಆ ನಷ್ಟವನ್ನು ಭರಿಸಿಕೊಡುವುದಕ್ಕೆ ಇನ್ನೊಂದು ಚಿತ್ರ ಮಾಡಿಕೊಡಬೇಕು ಮತ್ತು ಅದಕ್ಕೆ ಕಡಿಮೆ ಸಂಭಾವನೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರಂತೆ.

ವೆಟ್ಟಾಯನ್‍ಗೂ ಮೊದಲು ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯು ರಜನಿಕಾಂತ್‍ ಅಭಿನಯದಲ್ಲಿ ಮೂರು ಚಿತ್ರಗಳನ್ನು ನಿರಮಿಸಿತ್ತು. ‘2.0’, ‘ದರ್ಬಾರ್‍ಮತ್ತು ‘ಲಾಲ್‍ ಸಲಾಮ್‍’ಚಿತ್ರಗಳನ್ನು ನಿರ್ಮಾಣ ಮಾಡಿತ್ತು. ಆದರೆ, ಮೂರೂ ಚಿತ್ರಗಳು ಬಾಕ್ಸ್ ಆಫೀಸ್‍ನಲ್ಲಿ ಸೋಲುವುದರ ಜೊತೆಗೆ, ಜನರ ನಿರೀಕ್ಷೆಗಳಿಗೆ ನಿಲುಕಲಿಲ್ಲ. ‘ವೆಟ್ಟಾಯನ್‍’ ಚಿತ್ರವಾದರೂ ಗೆಲ್ಲಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಹಾಗಾಗಿ, ಕಡಿಮೆ ಸಂಭಾವನೆಯಲ್ಲಿ ಇನ್ನೊಂದು ಚಿತ್ರ ಮಾಡಿಕೊಡುವುದಕ್ಕೆ ರಜನಿಕಾಂತ್‍ ಅವರಿಗೆ ಲೈಕಾ ಮನವಿ ಮಾಡಿಕೊಂಡಿದೆಯಂತೆ. ಈ ಹಿಂದೆ ಸೋತ ನಿರ್ಮಾಪಕರಿಗೆ ರಜನಿಕಾಂತ್ ಹಲವು ಬಾರಿ ಸಹಾಯ ಮಾಡಿದ್ದಿದೆ. ಈ ಬಾರಿ ರಜನಿಕಾಂತ್‍ ಏನು ಮಾಡಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ.

‘ವೆಟ್ಟಾಯಾನ್’ ಚಿತ್ರದಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

32 mins ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

51 mins ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

54 mins ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…

2 hours ago